Fact check: ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್?
ಹೊಸದಿಲ್ಲಿ ಏಪ್ರಿಲ್ 25: ಕೇಂದ್ರದ ನರೇಂದ್ರ ಮೋದಿ ಸರಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಾಪ್ಗಳಲ್ಲಿ ವೈರಲ್ ಆಗುತ್ತಿದೆ. ಈ ಸಂದೇಶದೊಂದಿಗೆ ವೆಬ್ಸೈಟ್ ಲಿಂಕ್ ಅನ್ನು ಸಹ ನೀಡಲಾಗಿದೆ. ಈ ಸಂದೇಶದೊಂದಿಗೆ ಫಾರ್ಮ್ ಅನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳನ್ನು ಕೇಳಲಾಗುತ್ತಿದೆ. ಆದರೆ ಈ ಸಂದೇಶದಲ್ಲಿ ಯಾವುದೇ ಸತ್ಯವಿಲ್ಲ ಎಂಬುದು ತಿಳಿದುಬಂದಿದೆ. ಅಂತಹ ಯಾವುದೇ ಯೋಜನೆ ತಮ್ಮ ಕಡೆಯಿಂದ ಬಹಿರಂಗಪಡೆಸಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ವೈರಲ್ ಸಂದೇಶಕ್ಕೆ ಸಂಬಂಧಿಸಿದಂತೆ ಪಿಐಬಿ ಫ್ಯಾಕ್ಟ್ ಚೆಕ್ನ ಟ್ವಿಟರ್ ಹ್ಯಾಂಡಲ್ನ ಟ್ವೀಟ್ನಲ್ಲಿ ಸ್ಪಷ್ಟನೆ ನೀಡಲಾಗಿದೆ. ಭಾರತ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ನೀಡುತ್ತಿದೆ ಎಂಬ ಹೇಳಿಕೆಯೊಂದಿಗೆ ವೆಬ್ಸೈಟ್ ಲಿಂಕ್ನೊಂದಿಗೆ ಪಠ್ಯ ಸಂದೇಶವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಈ ಪ್ರಸಾರವಾದ ಲಿಂಕ್ ಸಂಪೂರ್ಣವಾಗಿ ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ನಲ್ಲಿ ಹೇಳಲಾಗಿದೆ. ಸರ್ಕಾರ ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ. ಅಂತಹ ಯಾವುದೇ ಸಂದೇಶವನ್ನು ನಂಬಬೇಡಿ ಎಮದು ಹೇಳಲಾಗಿದೆ.
A text message with a website link is circulating with a claim that the Government of India is offering free laptops for all students. #PIBFactCheck:
— PIB Fact Check (@PIBFactCheck) April 25, 2022
▶️The circulated link is #Fake.
▶️The government is not running any such scheme. pic.twitter.com/OkYDOY8ns5

ಉದ್ಯೋಗಗಳು ಮತ್ತು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಅನೇಕ ರೀತಿಯ ತಪ್ಪು ಸಂದೇಶಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತವೆ. ಇದರಿಂದ ಅನೇಕ ಜನರು ವಂಚನೆಗೆ ಬಲಿಯಾಗುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರದ ಅಧಿಕೃತ ವೆಬ್ಸೈಟ್ ಮತ್ತು ಕಚೇರಿಯಿಂದ ಮಾಹಿತಿಯ ನಂತರವೇ ಅಂತಹ ಯಾವುದೇ ಯೋಜನೆಯ ಬಗ್ಗೆ ವಿಶ್ವಾಸವಿಡಿ. ದೃಢೀಕರಣವನ್ನು ಪರಿಶೀಲಿಸದೆ ಯಾವುದೇ ಲಿಂಕ್ ಅನ್ನು ಕ್ಲಿಕ್ ಮಾಡಬೇಡಿ ಅಥವಾ ಅದರಲ್ಲಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ತಿಳಿಸಲಾಗಿದೆ.

Fact Check
ಕ್ಲೇಮು
ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ ಎಂದು ಸಂದೇಶ ರವಾನೆ
ಪರಿಸಮಾಪ್ತಿ
ಮೋದಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆ ಇಲ್ಲ ಎಂದು ಪಿಐಬಿ ಸ್ಪಷ್ಟನೆ ನೀಡಿದೆ.
Rating
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications