Fact check: 'ತಮಿಳುನಾಡಿನಲ್ಲಿ ಕಮಲ ಅರಳುತ್ತಿದೆ' ಫೋಟೋದ ಸತ್ಯಾಸತ್ಯತೆ ಏನು?
ಹೊಸದಿಲ್ಲಿ ಜೂನ್ 09: ದೇಶದ ಬಹುತೇಕ ರಾಜ್ಯಗಳಲ್ಲಿ ಸರಕಾರ ರಚಿಸಿರುವ ಬಿಜೆಪಿ ದಕ್ಷಿಣದ ರಾಜ್ಯಗಳಲ್ಲಿ ತನ್ನ ರಾಜಕೀಯ ನೆಲೆಯನ್ನು ಗಟ್ಟಿ ಮಾಡಿಕೊಳ್ಳಲು ಯತ್ನಿಸುತ್ತಿದೆ. ಇತ್ತೀಚೆಗೆ ತಮಿಳುನಾಡಿನ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ, ಇದನ್ನು ಅನೇಕ ಬಿಜೆಪಿ ನಾಯಕರು ತಮ್ಮ ಟ್ವಿಟರ್ ಖಾತೆಯಿಂದ ಹಂಚಿಕೊಂಡಿದ್ದಾರೆ, ಫೋಟೋದೊಂದಿಗೆ 'ತಮಿಳುನಾಡಿನಲ್ಲಿ ಕಮಲ ಅರಳುತ್ತಿದೆ' ಎಂಬ ಶೀರ್ಷಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗಿದೆ. ಆದರೆ ಯಾವಾಗ ಈ ಫೋಟೋದ ಸತ್ಯಾಸತ್ಯತೆ ಹೊರಬಿದ್ದಿದೆಯೋ, ಆಗ ವಿಷಯ ಬೇರೆಯೇ ಆಗಿರುವುದು ತಿಳಿದು ಬಂದಿದೆ.
ವಾಸ್ತವವಾಗಿ, ತಮಿಳುನಾಡಿನ ಅತ್ಯಂತ ಎತ್ತರದ ಕಂಬದಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಧ್ವಜಗಳನ್ನು ಹಾರಿಸುತ್ತಿರುವ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಚಿತ್ರವನ್ನು ಹಿಮಾಚಲ ಪ್ರದೇಶ ಬಿಜೆಪಿ ವಕ್ತಾರ ಪ್ರಜ್ವಲ್ ಬಸ್ತಾ ಮತ್ತು ಉತ್ತರ ದೆಹಲಿಯ ಮಾಜಿ ಮೇಯರ್ ರವೀಂದರ್ ಗುಪ್ತಾ ಸೇರಿದಂತೆ ಹಲವಾರು ನಾಯಕರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ನಿಂದ ಟ್ವೀಟ್ ಮಾಡಿದ್ದಾರೆ. ನಾಲ್ವರು ಕಾರ್ಯಕರ್ತರು ಪರಸ್ಪರ ಹೆಗಲ ಮೇಲೆ ನಿಂತು ಪಕ್ಷದ ಧ್ವಜವನ್ನು ಹಾರಿಸುತ್ತಿರುವುದು ಫೋಟೋದಲ್ಲಿದೆ. "ತಮಿಳುನಾಡಿನಲ್ಲಿ ಕಮಲ ಅರಳುತ್ತಿದೆ" ಎಂಬ ಶೀರ್ಷಿಕೆಯೊಂದಿಗೆ ಈ ಫೋಟೋವನ್ನು ಪೋಸ್ಟ್ ಮಾಡಲಾಗುತ್ತಿದೆ, ಆದರೆ ವಾಸ್ತವವಾಗಿ ಪರಿಶೀಲಿಸಿದರೆ ಈ ಫೋಟೋದ ನೈಜತೆ ಮುನ್ನೆಲೆಗೆ ಬಂದಿದೆ.

ವೈರಲ್ ಆಗಿರುವ ಚಿತ್ರವನ್ನು ಪರಿಶೀಲಿಸಿದಾಗ, ಈ ಫೋಟೋವನ್ನು ಟ್ಯಾಂಪರ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ವೈರಲ್ ಫೋಟೋ ವಾಸ್ತವವಾಗಿ ಬಹುಜನ ಸಮಾಜ ಪಕ್ಷದದ್ದು, ಅದರ ಧ್ವಜವನ್ನು ಬಿಜೆಪಿಯ ಧ್ವಜದಿಂದ ಬದಲಾಯಿಸಲಾಗಿದೆ.
Recommended Video
ಮೇ 31 ರಂದು, ಬಿಎಸ್ಪಿಯ ತೆಲಂಗಾಣ ಘಟಕದ ವಕ್ತಾರರಾದ ಶಿರಿಶಾ ಸ್ವೆರೋ ಅಕಿನಪಲ್ಲಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಿಂದ ಈ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಜನರು ಬಿಎಸ್ಪಿ ಧ್ವಜವನ್ನು ಹಾರಿಸುತ್ತಿದ್ದಾರೆ. ಹೀಗಿರುವಾಗ ಫೋಟೋ ಟ್ಯಾಂಪರಿಂಗ್ ಮಾಡಿ ಬಿಜೆಪಿ ಬಾವುಟ ಬಳಸಿರುವುದು ಬಯಲಾಗಿದೆ. ಮೂಲ ಫೋಟೋದಲ್ಲಿ ಬಿಎಸ್ಪಿ ಧ್ವಜವಿತ್ತು. ಹೀಗಾಘಿ ಈ ಚಿತ್ರವು ಸಂಪೂರ್ಣವಾಗಿ ನಕಲಿ ಎಂದು ತಿಳಿದಿದೆ.

Fact Check
ಕ್ಲೇಮು
ತಮಿಳುನಾಡಿನಲ್ಲಿ ಕಮಲ ಅರಳುತ್ತಿದೆ ಎಂದು ಫೋಟೋವೊಂದು ವೈರಲ್ ಆಗಿದೆ.
ಪರಿಸಮಾಪ್ತಿ
ಆದರೆ ಬಿಎಸ್ಪಿ ಧ್ವಜ ಹೊಂದಿರುವ ಫೋಟೋವನ್ನು ಎಡಿಟ್ ಮಾಡುವ ಮೂಲಕ ಬಿಜೆಪಿ ಧ್ವಜವನ್ನು ಹಾಕಲಾಗಿದೆ.
Rating
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications