ಮೆದುಳು ತಿನ್ನುವ ‘ಹುಳು’ಗಳ ಆರ್ಭಟ, ನಿಗೂಢ ಕಾಯಿಲೆಗೆ ಬೆಚ್ಚಿದ ಅಮೆರಿಕ
ಅಮೆರಿಕವನ್ನ ಒಂದಿಲ್ಲೊಂದು ಸಮಸ್ಯೆ ಬಿಟ್ಟೂಬಿಡದೆ ಕಾಡುತ್ತಿದೆ. ಅದರಲ್ಲೂ ಕೊರೊನಾ ಅಪ್ಪಳಿಸಿದ ಬಳಿಕ ಅಮೆರಿಕ ಅಕ್ಷರಶಃ ನಲುಗಿ ಹೋಗಿದೆ. ಆರ್ಥಿಕವಾಗಿ ಪ್ರಬಲ ರಾಷ್ಟ್ರವಾಗಿದ್ದ ಅಮೆರಿಕದ ಬುಡ ಅಲುಗಾಡಿದೆ. ಈ ಹೊತ್ತಲ್ಲೇ ಅಮೆರಿಕದಲ್ಲಿ ಹೊಸ ಹೊಸ ರೋಗಗಳು ಕಾಣಿಸುತ್ತಿವೆ. ಇದೀಗ ಮೆದುಳು ತಿನ್ನುವ ಅಮೀಬಾ ಕಾಟ ಅಮೆರಿಕನ್ನರ ಪಾಲಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ.
'ನಾಗ್ಲೆರಿಯಾ ಫೌಲೆರಿ' ಅಥವಾ ಮೆದುಳು ತಿನ್ನುವ ಅಮೀಬಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಅಮೆರಿಕದ ಟೆಕ್ಸಾಸ್ನಲ್ಲಿ 3 ವರ್ಷದ ಮಗು ವಿಚಿತ್ರ ರೋಗಕ್ಕೆ ಬಲಿಯಾಗಿದೆ. ಟೆಕ್ಸಾಸ್ನ ಅರ್ಲಿಂಗ್ಟನ್ ನಿವಾಸಿ 3 ವರ್ಷದ ಮಗುವಿಗೆ ಮೆದುಳು ತಿನ್ನುವ ಅಮೀಬಾ ತಗುಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದ್ದು, ದುರಂತಕ್ಕೆ ಸ್ಥಳೀಯ ಆಡಳಿತ ಕಾರಣ ಎಂದು ಮಗುವಿನ ಪೋಷಕರು ಕೋರ್ಟ್ ಮೊರೆ ಹೋಗಿದ್ದಾರೆ.
ಮಗು ಸಾಯುವುದಕ್ಕೂ ಕೆಲ ದಿನದ ಹಿಂದೆ ನೀರಿನಲ್ಲಿ ಆಟವಾಡಿತ್ತು ಎನ್ನಲಾಗಿದೆ. ಈಗಾಗಲೇ ಮೆದುಳು ತಿನ್ನುವ ಅಮೀಬಾ ಹೆಚ್ಚಾಗಿ ಹಬ್ಬುತ್ತಾ ಸಾಗಿದ್ರೂ ಸ್ಥಳೀಯ ಆಡಳಿತ ಎಚ್ಚೆತ್ತು ನೀರಿನ ತಪಾಸಣೆ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಮಗುವಿನ ಸಾವಿಗೆ ಸ್ಥಳೀಯ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಮಗುವಿನ ಪೋಷಕರು ಕೇಸ್ ಹಾಕಿದ್ದಾರೆ.

ಮೆದುಳು ಸೇರಿದರೆ ಒಂದೇ ವಾರದಲ್ಲಿ ಸಾವು : ನಾಗ್ಲೆರಿಯಾ ಫೌಲೆರಿ ಅಥವಾ ಮೆದುಳು ತಿನ್ನುವ ಅಮೀಬಾ ಅದೆಷ್ಟು ಡೇಂಜರಸ್ ಎಂದರೆ, ಈ ಸೋಂಕಿಗೆ ಸರಿಯಾದ ಔಷಧಗಳೇ ಲಭ್ಯವಿಲ್ಲ. ಅಕಸ್ಮಾತ್ ನಾಗ್ಲೆರಿಯಾ ಫೌಲೆರಿ ಮನುಷ್ಯನ ಮೆದುಳು ಸೇರಿದಂತೆ, ಆ ಕ್ಷಣದಿಂದಲೇ ಮೆದುಳಿನ ಮೇಲೆ ದಾಳಿ ಮಾಡಿ ತಿನ್ನಲು ಆರಂಭಿಸುತ್ತದೆ. ಕೇವಲ ಒಂದು ವಾರದಲ್ಲಿ ಆತನ ಜೀವವನ್ನೇ ತೆಗೆದುಬಿಡುತ್ತದೆ. ಆದರೆ ಇದ್ಯಾವುದೂ ಸೋಂಕಿತನ ಗಮನಕ್ಕೆ ಬರುವುದೇ ಇಲ್ಲ. ಅಷ್ಟರಮಟ್ಟಿಗೆ ಖತರ್ನಾಕ್ ಈ ನಾಗ್ಲೆರಿಯಾ ಫೌಲೆರಿ ಸೂಕ್ಷ್ಮಾಣು ಜೀವಿಗಳು. ಹೀಗಾಗಿ ಮುನ್ನೆಚ್ಚರಿಕೆ ಅಗತ್ಯ ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.
ಜ್ವರ, ವಾಂತಿ, ತಲೆನೋವು ಕಾಡುವುದು: ನಾಗ್ಲೆರಿಯಾ ಫೌಲೆರಿ ಅಥವಾ ಮೆದುಳು ತಿನ್ನುವ ಅಮೀಬಾ ದೇಹ ಪ್ರವೇಶಿಸಿದರೆ ಮೆಲ್ಲಗೆ ತನ್ನ ಕಾರ್ಯ ಚಟುವಟಿಕೆ ಆರಂಭಿಸುತ್ತದೆ. ಹೀಗೆ ಸೂಕ್ಷ್ಮಾಣು ಜೀವಿ ತನ್ನ ಕೆಲಸ ಆರಂಭಿಸಿದ ಒಂದೆರಡು ದಿನಗಳಲ್ಲಿ ತೀವ್ರ ಜ್ವರ ಹಾಗೂ ತಲೆನೋವು ಕಾಡಲು ಆರಂಭವಾಗುತ್ತದೆ. ಹೀಗೆ ಆರಂಭವಾಗುವ ಸೋಂಕಿನ ಲಕ್ಷಣ, ಭಾರಿ ಪ್ರಮಾಣದಲ್ಲಿ ವಾಂತಿಯಾಗುವಂತೆ ಮಾಡುತ್ತದೆ. ಮನುಷ್ಯನ ರೋಗನಿರೋಧಕ ಶಕ್ತಿಯು ದಿನದಿಂದ ದಿನಕ್ಕೆ ಕುಸಿಯುತ್ತಾ ಸಾಗಿ, ಕಡೆಗೆ 1 ವಾರದ ಒಳಗಾಗಿ ಸೋಂಕಿತ ವ್ಯಕ್ತಿ ಮೃತಪಡುತ್ತಾನೆ. ಅಷ್ಟರೊಳಗೆ ಅಮಿಬಾ ವಂಶಕ್ಕೆ ಸೇರಿದ ಈ 'ನಾಗ್ಲೆರಿಯಾ ಫೌಲೆರಿ' ಸೂಕ್ಷ್ಮಾಣು ಜೀವಿ ಮೆದುಳನ್ನು ತಿಂದು ಮುಗಿಸಿರುತ್ತದೆ.
ಮೂಗಿನ ಒಳಗೆ ನೀರು ಸೇರಿಸಬೇಡಿ: ಈ ಸೂಕ್ಷ್ಮಾಣು ಜೀವಿ ಲೇಕ್ ಜಾನ್ಸನ್ ನಗರದಲ್ಲಿ ಕಂಡುಬಂದ ತಕ್ಷಣ ಅಧಿಕಾರಿಗಳು ಜನರಿಗೆ ನೀಡಿದ ಮೊದಲ ಎಚ್ಚರಿಕೆ, ಮೂಗಿನ ಒಳಗೆ ನೀರು ಸೇರಿಸಬೇಡಿ ಅಂತಾ. ಏಕೆಂದರೆ ಮೂಗಿನಲ್ಲಿ ನೀರು ಹೋದರೆ ಇಂತಹ ಮೈಕ್ರೋಬ್ಗಳು ಮೆದುಳು ಸೇರುವುದು ತುಂಬಾ ಸುಲಭ. ಹೀಗೆ ಮೆದುಳು ಸೇರುವ ಸೂಕ್ಷ್ಮಾಣು ಜೀವಿ ನಾಗ್ಲೆರಿಯಾ ಫೌಲೆರಿ ತಕ್ಷಣ ಮೆದುಳನ್ನ ತಿನ್ನಲು ಶುರುಮಾಡುತ್ತದೆ. ಕಡೆಗೆ ಸೋಂಕಿತ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೆ ಆತ ನರಳಿ ಪ್ರಾಣಬಿಡುತ್ತಾನೆ. ಹೀಗಾಗಿ ಮೂಗಿನ ಒಳಗೆ ನೀರು ಸೇರಿಸಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ












Click it and Unblock the Notifications