ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ 5 ಕಾರಣಗಳು

Recommended Video

      ನಿಖಿಲ್ ಸೋಲಿಗೆ ಇಲ್ಲಿದೆ 5 ಪ್ರಮುಖ ಕಾರಣ..?

      ಪ್ರತಿಯೊಬ್ಬರೂ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಮಂಡ್ಯದ ಲೋಕಸಭೆ ಚುನಾವಣೆ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸುವ ಮೂಲಕ, ನಿಖಿಲ್ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತ ನೀಡಿದ್ದಾರೆ.

      ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸುಮಲತಾ ಅವರ ಎದುರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಸೋಲನುಭವಿಸಿದ್ದಾರೆ.

      ಕೊನೆಯ ಘಟ್ಟದವರೆಗೂ ರೋಚಕತೆ ಉಳಿಸಿಕೊಂಡಿದ್ದ ಕ್ಷೇತ್ರದಲ್ಲಿ ಮಂಡ್ಯದ ಜನರು ಕೊನೆಗೂ 'ಸ್ವಾಭಿಮಾನ'ಕ್ಕೆ ಮತಹಾಕಿದ್ದಾರೆ.

      ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಪರ ಖುದ್ದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೇ ಪ್ರಚಾರ ಮಾಡಿದರೂ, ಮಂಡ್ಯದಲ್ಲೇ ಠಿಕಾಣಿ ಹೂಡಿ ಮತದಾರರನ್ನು ಸೆಳೆಯುವ ಯತ್ನ ಮಾಡಿದ್ದರೂ ಯಾವುದೂ ಫಲ ನೀಡಲಿಲ್ಲ!

      ಅಷ್ಟಕ್ಕೂ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾರಣವಾದ ಐದು ಅಂಶಗಳು ಯಾವವು?

      ಮಂಡ್ಯ ಜನರ ನಾಡಿಮಿಡಿತ ಅರಿಯುವಲ್ಲಿ ವಿಫಲ!

      ಮಂಡ್ಯ ಜನರ ನಾಡಿಮಿಡಿತ ಅರಿಯುವಲ್ಲಿ ವಿಫಲ!

      ಮಂಡ್ಯದ ಜನರನ್ನು ಸೆಳೆಯಲು ಎಲ್ಲಕ್ಕಿಂತ ಪ್ರಬಲ ಅಸ್ತ್ರ ಅವರಲ್ಲಿ ಅನುಕಂಪದ ಅಲೆ ಸೃಷ್ಟಿಸುವುದು ಎಂಬುದನ್ನು ಅರಿತಿದ್ದ ಸುಮಲತಾ ಅಂತೆಯೇ ನಡೆದುಕೊಂಡರು. ಆದರೆ ಅದನ್ನು ಕಂಡುಕೊಳ್ಳುವಲ್ಲಿ ನಿಖಿಲ್ ಸೋತರು. 'ನಿಖಿಲ್ ಎಲ್ಲಿದಿಯಪ್ಪಾ' ಪ್ರಹಸನ ಹಾಸ್ಯಾಸ್ಪದವಾಯಿತೇ ಹೊರತು ಅದರಿಂದ ಮಂಡ್ಯದ ಜನರ ಮನಸ್ಸಿನಲ್ಲಿ ಸ್ಥಾನ ಪಡೆಯಲು ನಿಖಿಲ್ ಗೆ ಸಾಧ್ಯವಾಗಲಿಲ್ಲ!

      ರಾಜಕೀಯ ಅನುಭವದ ಕೊರತೆ

      ರಾಜಕೀಯ ಅನುಭವದ ಕೊರತೆ

      ನಿಖಿಲ್ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶಿಸಿದ್ದರು. ಮಂಡ್ಯ ಕ್ಷೇತ್ರವನ್ನು ತಾನೇ ಉಳಿಸಿಕೊಳ್ಳಬೇಕೆಂಬ ಹಠಕ್ಕೆ ಬಿದ್ದ ಜೆಡಿಎಸ್ ನಿಖಿಲ್ ಅವರನ್ನು ಕಣಕ್ಕಿಳಿಸಿತ್ತು. ತಂದೆ-ತಾತನ ನ ಹೆಸರು ಬಿಟ್ಟರೆ ರಾಜಕೀಯವಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಯಾವ ಅನುಭವವೂ ಇಲ್ಲದಿದ್ದಿದ್ದು ಅವರ ಸೋಲಿಗೆ ಒಮದು ಕಾರಣವಾಯಿತು.

      ಅಪ್ರಬುದ್ಧ ಹೇಳಿಕೆಗಳು

      ಅಪ್ರಬುದ್ಧ ಹೇಳಿಕೆಗಳು

      ಸುಮಲತಾ ಅವರ ವಿರುದ್ಧ ಜೆಡಿಎಸ್ ನಾಯಕರ ಅಪ್ರಬುದ್ಧ ಹೇಳಿಕೆ ನಿಖಿಲ್ ಸೋಲಿಗೆ ಬಹುಮುಖ್ಯ ಕಾರಣ. 'ಗಂಡ ಸತ್ತು ಮೂರು ತಿಂಗಳಾಗಿಲ್ಲ, ಇವೆಲ್ಲ ಬೇಕಾ?', 'ಸುಮಲತಾ ಅವರು ಗೌಡ್ತಿ ಅಲ್ಲ' ಎಂಬಿತ್ಯಾದಿ ಬಾಲಿಶ ಅಸಭ್ಯ, ಬಾಲಿಶ ಹೇಳಿಕೆಗಳು ನಿಖಿಲ್ ಸೋಲಿಗೆ ಕಾರಣವಾಗಿತ್ತು. ನಿಖಿಲ್ ಸ್ವತಃ ಇಂಥ ಯಾವ ಕೇಳಿಕೆಯನ್ನು ನೀಡದೆ ಇದ್ದರೂ, ಪಕ್ಷದ ನಾಯಕರ ಹೇಳಿಕೆ ನಿಖಿಲ್ ಅವರಿಗೆ ಮುಳುವಾಯಿತು.

      ಕಾಂಗ್ರೆಸ್-ಜೆಡಿಎಸ್ ನಡುವೆ ಬಿರುಕು

      ಕಾಂಗ್ರೆಸ್-ಜೆಡಿಎಸ್ ನಡುವೆ ಬಿರುಕು

      ಇವೆಲ್ಲದರೊಟ್ಟಿಗೆ ಜೆಡಿಎಸ್ ನಿಂದ ಹೊರಬಂದು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ, ನಾಗಮಂಗಲ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಪರೋಕ್ಷವಾಗಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿದ್ದಾರೆ ಎಂಬ ಆರೋಪವೂ ಇತ್ತು. ಅದೂ ಆಲ್ಲದೆ, ಬಿಜೆಪಿ ಸುಮಲತಾ ಅವರಿಗೆ ಬಹಿರಂಗ ಬೆಂಬಲ ನೀಡಿದ್ದರಿಂದ, ಪ್ರಧಾನಿ ನರೇಂದ್ರ ಮೋದಿ ಅವರೂ ಸುಮಲತಾ ಅವರನ್ನು ಬೆಂಬಲಿಸುವಂತೆ ಮಂಡ್ಯ ಜನತೆಗೆ ಕರೆ ನೀಡಿದ್ದರಿಂದ ನಿಖಿಲ್ ಕುಮಾರಸ್ವಾಮಿ ಸೋಲಬೇಕಾಯ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+