7ನೇ ವೇತನ ಆಯೋಗ: 2021ರಲ್ಲಿ ಸರ್ಕಾರಿ ನೌಕರರ ಸಂಬಳ ಹೆಚ್ಚಳ
2021ರಲ್ಲಿ ಕೇಂದ್ರ ಸರ್ಕರಿ ನೌಕರರು ಹಾಗೂ ಪಿಂಚಣಿದಾರರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಕಂಡು ಬಂದಿದೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಂಬಳ ಏರಿಕೆಯಾಗಲಿದೆ. ಕಳೆದ ವರ್ಷ ವೇತನ ಸಂಹಿತೆಯ ಕರಡು ಪ್ರತಿ ಶಿಫಾರಸ್ಸಿನಲ್ಲಿ ಕೆಲಸದ ಅವಧಿ ಬಗ್ಗೆ ಬದಲಾವಣೆ ಇದ್ದರೂ ಕನಿಷ್ಠ ವೇತನದಲ್ಲಿ ಬದಲಾವಣೆ ಮಾಡಿಲ್ಲ. ಕೊವಿಡ್ 19 ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗದ ಕಾರಣ ನೌಕರರಿಗೆ ಶೇ 21ರ ದರಂತೆ ಸಂಬಳ ಹಾಗೂ ತುಟ್ಟಿಭತ್ಯೆ ಶೇ 17ಕ್ಕೆ ಇಳಿಕೆ ಮಾಡಲಾಗಿತ್ತು.
ಸದ್ಯ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರಿಗೆ 18,000 ರು ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ. ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ.
ರಾಷ್ಟ್ರೀಯ ಕನಿಷ್ಠ ವೇತನ (National minimum floor wage) ಬದಲಾವಣೆಗೆ ಸೂಚಿಸಿರುವ ಸಲಹಾ ಮಂಡಳಿಯ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ28ರಷ್ಟು ಏರಿಕೆಯಾಗುವ ನಿರೀಕ್ಷೆಯಿತ್ತು. ಆದರೆ, ಶೇ 21ಕ್ಕೆ ನಿಗದಿ ಪಡಿಸಿ ರಾಜ್ಯ ಸರ್ಕಾರಿ ನೌಕರರಿಗೂ ಹಂತ ಹಂತವಾಗಿ ಜಾರಿಗೊಳಿಸಲು ಸೂಚಿಸಲಾಗಿದೆ. 7ನೇ ವೇತನ ಆಯೋಗದ ಅನ್ವಯ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ, ಭತ್ಯೆ, ಕೆಲಸದ ಅವಧಿ, ರಜಾ ದಿನ ನಿಗದಿ ಮಾಡುವಂತೆ ಬೇಡಿಕೆ ಇದ್ದೆ ಇದೆ.

ಜೂನ್ 2021ರ ತನಕ ಇದೆ ವೇತನ ಶ್ರೇಣಿ?
7ನೇ ವೇತನ ಆಯೋಗದ ಅನ್ವಯ ಹಾಲಿ ಸಂಬಳ ಹಾಗೂ ಭತ್ಯೆ ದರವನ್ನು ಕೇಂದ್ರ ಸರ್ಕಾರ ಜೂನ್ 2021ರ ತನಕ ಜಾರಿಯಲ್ಲಿಡಲು ಮುಂದಾಗಿದೆ. ಇದಾದ ಬಳಿಕ ತುಟ್ಟಿಭತ್ಯೆ ಮಾತ್ರ ಹೆಚ್ಚಳ ಮಾಡುವ ಸಾಧ್ಯತೆಯಿದೆ ಹಾಗೂ ಸಂಬಳ ಏರಿಕೆಯಾಗಲಿದೆ. ಪ್ರತಿ ವರ್ಷದಂತೆ ಜುಲೈ ತಿಂಗಳಿನಲ್ಲೇ ತುಟ್ಟಿಭತ್ಯೆ ಕಾಣಬಹುದು ಎಂದು ಒನ್ಇಂಡಿಯಾಕ್ಕೆ ತಿಳಿದು ಬಂದಿದೆ.

2020ರಲ್ಲಿ ಬೋನಸ್ ಮಾತ್ರ ಪಡೆದ ನೌಕರರು
ಆರ್ಥಿಕ ಪರಿಸ್ಥಿತಿ ಹಾಗೂ ಕೊವಿಡ್ 19 ನಿರ್ಬಂಧ ಹೆಚ್ಚಾಗುವ ಮುನ್ನವೇ ಏಪ್ರಿಲ್ ತಿಂಗಳಲ್ಲೇ 2020ರಲ್ಲಿ ಸಂಬಳ ಏರಿಕೆ, ಡಿಎ ಹೆಚ್ಚಳ ನೀಡದಿರುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಿತ್ತು. ವರ್ಷದಲ್ಲಿ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳ ಕಾಣುತ್ತಿದ್ದ ಸರ್ಕಾರಿ ನೌಕರರು ಈ ವರ್ಷ ಭಾರಿ ಹೊಡೆತ ತಿಂದಿದ್ದರು.
ಕೊನೆಗೆ ಸುಮಾರು 30 ಲಕ್ಷ ಸಿಬ್ಬಂದಿಗಳಿಗೆ ದೀಪಾವಳಿ ಬೋನಸ್ ಸಿಕ್ಕಿದರೆ, ಹಲವಾರು ನೌಕರರು ಎಲ್ ಟಿ ಸಿ, ಎಲ್ ಟಿಎ ಸೌಲಭ್ಯ ಬಳಸಲು ಉತ್ತೇಜಿಸಲಾಯಿತು. ಎಲ್ ಟಿಸಿ ನಗದು ವೋಚರ್ ಯೋಜನೆಯನ್ನು ಅಕ್ಟೋಬರ್ 12ರಂದು ಪರಿಚಯಿಸಲಾಯಿತು.

ಸಂಬಳ ಏರಿಕೆ ನಿರೀಕ್ಷೆ
ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಯಾವುದೇ ಸೂಚನೆ ಇಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320ರುಗೇರಲಿದೆ. ಒಟ್ಟಾರೆ 720 ರು ನಿಂದ 10,000 ರು ತನಕ ಸಂಬಳ ಏರಿಕೆ ನಿರೀಕ್ಷೆಯಿದೆ.

ಕನಿಷ್ಠ ವೇತನ ಏರಿಕೆ ಬೇಡಿಕೆ
ಕನಿಷ್ಠ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ ಎಂಬ ವರದಿ ಬಂದಿದ್ದರೂ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದು ಕಡಿಮೆ.ದೆಹಲಿ ಸರ್ಕಾರ ಮಾತ್ರ ಇತ್ತೀಚೆಗೆ ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಕನಿಷ್ಠ ವೇತನ, ಭತ್ಯೆ ಹೆಚ್ಚಳ ಮಾಡಿದೆ.

ತುಟ್ಟಿಭತ್ಯೆ ಹೆಚ್ಚಳ
3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕಳೆದ 12 ತಿಂಗಳಿಗೆ 115.76/115.76X100. ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33X100.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications