ಮೋದಿ ಸರ್ಕಾರದಿಂದ ತುಟ್ಟಿಭತ್ಯೆ ಹೆಚ್ಚಳ, DA ಲೆಕ್ಕ ಹಾಕೋದು ಹೇಗೆ?
ನವದೆಹಲಿ, ಸೆ.05: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಆದರೆ, ಸರ್ಕಾರಿ ನೌಕರರ ನಿರೀಕ್ಷೆಗೂ ಮೀರಿದ ಪ್ರಮಾಣದಲ್ಲಿ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗುತ್ತಿದೆ.
ಜುಲೈ 1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಈ ನಿರ್ಧಾರದಿಂದ ಕೇಂದ್ರ ಸರಕಾರದ ಮೇಲೆ 9000 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳ ಖಾತ್ರಿಯಾಗಿದೆ.
ಆದರೆ, ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ.

ಶೇ5ರಷ್ಟು ತುಟ್ಟಿಭತ್ಯೆ ಹೆಚ್ಚಳ
ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದಾಗ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಿದೆ. ಈಗ ಡಿಆರ್ ಶೇ17ರಷ್ಟಾಗಲಿದೆ. ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗುವ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಅಧಿಕೃತ ಆದೇಶ ಹೊರ ಬರಲಿದೆ.

ಶೇ5ರಷ್ಟು ಹೆಚ್ಚಳ ಬಳಿಕ ಲೆಕ್ಕಾಚಾರ ಹೇಗೆ?
ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕಳೆದ 12 ತಿಂಗಳಿಗೆ 115.76/115.76X100.
ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33X100.

ಕನಿಷ್ಠ ವೇತನ ಏರಿಕೆ ಬಗ್ಗೆ ಘೋಷಣೆಯಿಲ್ಲ
ಕೇಂದ್ರ ಸರ್ಕಾರಿ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ, ಫಿಟ್ಮೆಂಟ್ ಫಾರ್ಮ್ಯೂಲಾದಂತೆ ಮೂಲ ವೇತನದ 2.57ರಂತೆ ವೇತನ ಪಡೆಯುತ್ತಿದ್ದಾರೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿದ್ದು, ಆಯೋಗದ ಶಿಫಾರಸು ಮೀರಿ ಕನಿಷ್ಠ ವೇತನವನ್ನು 18,000 ರೂ.ನಿಂದ 21,000 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇತ್ತು. ಆದರೆ, ಈ ಬಗ್ಗೆ ಯಾವುದೇ ಘೋಷಣೆಯಾಗಿಲ್ಲ.

ಬಹುಕಾಲದ ಬೇಡಿಕೆ ಇನ್ನೂ ಈಡೇರಿಲ್ಲ
ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ನಗರಗಳ ಆಧಾರದ ಮೇಲೆ
ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ,53 ಲಕ್ಷ ಕೇಂದ್ರದ ಪಿಂಚಣಿದಾರರು, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿಯ ಅನುಸಾರ ವೇತನ ಹೆಚ್ಚಳವಾಗಲಿದೆ. ಆದರೆ, ಕನಿಷ್ಟ ವೇತನ ಏರಿಕೆಯಾಗಿಲ್ಲ. ಲೆವೆಲ್ 01 ರಿಂದ ಲೆವೆಲ್ 18ರ ತನಕ ಸಮಾನ ಸ್ತರದಲ್ಲಿ ಅವರ ಸಂಬಳಕ್ಕೆ ತಕ್ಕಂತೆ ಡಿಎ ಹೆಚ್ಚಳ ಮಾಡುತ್ತಾ ಬರಲಾಗಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications