ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗಿಲ್ಲ ಅದೃಷ್ಟ; ಎಬಿಪಿ-ಸಿ ವೋಟರ್ ಸಮೀಕ್ಷೆ
ಕೋಲ್ಕತ್ತಾ, ಮಾರ್ಚ್ 16: ಪಶ್ಚಿಮ ಬಂಗಾಳದಲ್ಲಿ ಇದೇ ಮಾರ್ಚ್ 27ರಂದು ವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸದ್ಯಕ್ಕೆ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವೆ ಜಿದ್ದಿನ ಹಣಾಹಣಿ ಇದೆ.
ಪಶ್ಚಿಮ ಬಂಗಾಳದಲ್ಲಿ ಈ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಟದಲ್ಲಿ ಬಿಜೆಪಿ ಹಲವು ಕಾರ್ಯತಂತ್ರಗಳನ್ನು ಹೂಡುತ್ತಿದ್ದರೆ, ಪಶ್ಚಿಮ ಬಂಗಾಳ ತನ್ನ ಮಗಳ ಆಡಳಿತವನ್ನಷ್ಟೇ ಬಯಸುತ್ತದೆ. ಹೊರಗಿನವರು ಇಲ್ಲಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಈ ನಡುವೆ ಎಬಿಪಿ-ಸಿ ವೋಟರ್ ಪಶ್ಚಿಮ ಬಂಗಾಳ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ವರದಿ ಪ್ರಕಟಿಸಿದೆ. ಆ ಸಮೀಕ್ಷೆ ಏನು ಹೇಳುತ್ತಿದೆ? ಮುಂದೆ ಓದಿ...

ತೃಣಮೂಲ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ; ಸಮೀಕ್ಷೆ
ಈ ಬಾರಿಯ ಚುನಾವಣೆಯಲ್ಲಿ ನೀವು ಯಾರಿಗೆ ಮತ ಹಾಕುತ್ತೀರಿ ಎಂದು ಪಶ್ಚಿಮ ಬಂಗಾಳ ಜನರನ್ನು ಕೇಳಿದಾಗ, 43% ಜನರು ತಾವು ತೃಣಮೂಲ ಕಾಂಗ್ರೆಸ್ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ, 42% ಜನರು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ತನ್ನ ಅಧಿಕಾರ ಮುಂದುವರೆಸುವುದೆಂದು ನಂಬಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಗೆಲುವು ತಂದು ಕೊಡುವುದೇ ಬಿಜೆಪಿ ಕಾರ್ಯತಂತ್ರ?
2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನೀಡಲು ಬಿಜೆಪಿ ತಯಾರಿ ಮಾಡಿಕೊಳ್ಳುತ್ತಿದೆ. ಪರಿವರ್ತನಾ ಯಾತ್ರೆ, ರಥಯಾತ್ರೆ, ಸಾಲು ಸಾಲು ಸಮಾವೇಶ... ಈ ಎಲ್ಲಾ ಕಾರ್ಯತಂತ್ರಗಳೊಂದಿಗೆ ಬಿಜೆಪಿ ಗೆಲುವು ಸಾಧಿಸುವ ಪಣ ತೊಟ್ಟಿದೆ. ಇದಾಗಿಯೂ ಆಡಳಿತ ಪಕ್ಷ ಹೆಚ್ಚು ಮತಗಳನ್ನು ಗಳಿಸುವ ಸಾಧ್ಯತೆ ಹೆಚ್ಚಿದೆ ಎಂದು ಸಮೀಕ್ಷೆ ಹೇಳುತ್ತಿದೆ.

ತೃಣಮೂಲ ಕಾಂಗ್ರೆಸ್ಗೆ 150-166 ಕ್ಷೇತ್ರಗಳಲ್ಲಿ ಗೆಲುವು
ಸಮೀಕ್ಷೆ ಪ್ರಕಾರ ತೃಣಮೂಲ ಕಾಂಗ್ರೆಸ್ಗೆ 294 ಕ್ಷೇತ್ರಗಳ ಪೈಕಿ 150ರಿಂದ 166 ಕ್ಷೇತ್ರಗಳಲ್ಲಿ ಗೆಲುವು ಪಡೆಯುತ್ತದೆ ಎಂದು ಅಂದಾಜಿಸಲಾಗಿದೆ. ಬಿಜೆಪಿಗೆ 98 ರಿಂದ 114 ಕ್ಷೇತ್ರಗಳಲ್ಲಿ ಗೆಲುವು ಪಡೆಯಬಹುದು ಎಂದು ಹೇಳಲಾಗಿದೆ. ಕಾಂಗ್ರೆಸ್- ಎಡಪಕ್ಷಗಳ ಮೈತ್ರಿಯು 23-31 ಸೀಟುಗಳನ್ನು ಪಡೆಯುವ ನಿರೀಕ್ಷೆಯಿದ್ದು, ಇತರೆ ಪಕ್ಷಗಳು 3 ರಿಂದ 5 ಕ್ಷೇತ್ರಗಳನ್ನು ಪಡೆಯಬಹುದು ಎನ್ನಲಾಗಿದೆ.

ಮಾ.27ರಿಂದ 294 ಕ್ಷೇತ್ರಗಳಿಗೆ ಚುನಾವಣೆ
ಪಶ್ಚಿಮ ಬಂಗಾಳದಲ್ಲಿ 294 ಕ್ಷೇತ್ರಗಳಿಗೆ ಮಾರ್ಚ್ 27ರಿಂದ ಚುನಾವಣೆ ಆರಂಭವಾಗಲಿದೆ. ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27, ಏಪ್ರಿಲ್ 1, ಏಪ್ರಿಲ್6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications