ಸಿವೋಟರ್ ಸಮೀಕ್ಷೆ: ಮಂಡ್ಯದಲ್ಲಿ ನಿಖಿಲ್ಗೆ ಸೋಲು?
Recommended Video
ನವದೆಹಲಿ, ಮೇ 19: ರಾಜ್ಯದಲ್ಲಿ ಇರುವ 28 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಹೆಚ್ಚಿನ ಸೀಟುಗಳು ಸಿಗಬಹುದು ಎಂಬುದು ಕುತೂಹಲ ಕೆರಳಿಸಿದೆ. ಕೇಂದ್ರದಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಬಹುದು ಎನ್ನುವುದರ ಜತೆಗೆ, ಕರ್ನಾಟಕದ ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆಯೂ ಎಲ್ಲ ಗಮನ ನೆಟ್ಟಿದೆ. ಏಕೆಂದರೆ ಈ ಚುನಾವಣಾ ಫಲಿತಾಂಶವು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಎಂದು ನಂಬಲಾಗಿದೆ.
28 ಕ್ಷೇತ್ರಗಳಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17 ಸೀಟುಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 9 ಸೀಟುಗಳಲ್ಲಿ ಗೆದ್ದಿದ್ದರೆ, ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿತ್ತು. ಈ ಬರಿ ಲೋಕಸಭೆ ಚುನಾವಣೆಯ ಸ್ಪರ್ಧಾ ಚಿತ್ರಣ ಸಂಪೂರ್ಣ ಬದಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಜತೆಗೂಡಿ ಕರ್ನಾಟಕದಲ್ಲಿ ಚುನಾವಣೆ ಎದುರಿಸಿವೆ. ಹೀಗಾಗಿ ಒಟ್ಟಾರೆ ಫಲಿತಾಂಶದಲ್ಲಿ ಬದಲಾವಣೆಗಳಾಗಬಹುದು ಎಂದು ಈ ಮೈತ್ರಿ ಪಕ್ಷಗಳು ನಿರೀಕ್ಷಿಸಿವೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮಿತ್ರಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಮಂಡ್ಯ ಕ್ಷೇತ್ರದಲ್ಲಿ ಮಾತ್ರ ಈ ಪೈಪೋಟಿ ಬದಲಾಗಿದೆ. ಇಲ್ಲಿ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ನಡುವೆ ನೇರ ಪೈಪೋಟಿ ಇದೆ. ಬಿಎಸ್ಪಿ ಹಾಗೂ ಇತರೆ ಕೆಲವು ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಫಲಿತಾಂಶ ಬರಲು ಇನ್ನೂ ನಾಲ್ಕು ದಿನ ಬಾಕಿ ಇದೆ. ಅದಕ್ಕೂ ಮುನ್ನ ತಮ್ಮ ರಾಜ್ಯದಲ್ಲಿ ಯಾವ ಯಾವ ಪಕ್ಷ ಎಷ್ಟು ಸೀಟುಗಳನ್ನು ಗೆಲ್ಲಬಹುದು, ಕೇಂದ್ರದಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಬಹುದು ಎಂಬ ಕುತೂಹಲ ತೀವ್ರವಾಗಿದೆ.
ಅದಕ್ಕೂ ಮುನ್ನ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟುಗಳು ಬರಬಹುದು ಎಂಬ ಕುತೂಹಲ ತಣಿಸುವ ನಿಟ್ಟಿನಲ್ಲಿ 'ಎಬಿಪಿ ಸಿ-ವೋಟರ್ ಸಂಸ್ಥೆ ನಡೆಸಿದ ಸಮೀಕ್ಷೆಯ ಫಲಿತಾಂಶ ಇಲ್ಲಿದೆ.
ಸಿವೋಟರ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 18, ಕಾಂಗ್ರೆಸ್ 7 ಜೆಡಿಎಸ್ 2 ಮತ್ತು ಪಕ್ಷೇತರರು ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಇಲ್ಲಿ ಮುಂಚೂಣಿಯಲ್ಲಿರುವ ಪಕ್ಷೇತರ ಅಭ್ಯರ್ಥಿ ಎಂದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಸುಮಲತಾ ಅಂಬರೀಷ್. ಸಮೀಕ್ಷೆಯ ಪ್ರಕಾರ ಮಂಡ್ಯದಲ್ಲಿ ಸುಮಲತಾ ಅಂಬರೀಷ್, ಜೆಡಿಎಸ್ನ ನಿಖಿಲ್ ಅವರನ್ನು ಸೋಲಿಸಲಿದ್ದಾರೆ.

ಕಮಲದ ದರ್ಬಾರು
ವಿಧಾನಸಭೆ ಚುನಾವಣೆಯಲ್ಲಿ ಅತ್ಯಧಿಕ ಸೀಟುಗಳನ್ನು ಪಡೆದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚಿಸುವ ಅದೃಷ್ಟ ಪಡೆದುಕೊಳ್ಳದ ಬಿಜೆಪಿ, ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಲಿದೆ. ಕಳೆದ ಚುನಾವಣೆಯಲ್ಲಿ 17 ಸೀಟುಗಳಲ್ಲಿ ಗೆದ್ದಿದ್ದ ಬಿಜೆಪಿ, ಈ ಬಾರಿ ಅದನ್ನು ಹೆಚ್ಚಿಸಿಕೊಳ್ಳಲಿದೆ. ಸಮೀಕ್ಷೆ ಪ್ರಕಾರ ಬಿಜೆಪಿ 18 ಸೀಟುಗಳಲ್ಲಿ ಗೆಲ್ಲಲಿದೆ. ಅದು ಈ ಬಾರಿ 27 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ ಎನ್ನುವುದು ಗಮನಾರ್ಹ.

ಮೈತ್ರಿಗೆ ಜನರ ಬೆಂಬಲವಿಲ್ಲ?
ಕಳೆದ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಈ ಬಾರಿ ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಗಳನ್ನು ಇಳಿಸಿವೆ. ಆದರೆ, ಕಮಲದ ಪ್ರಭಾವಳಿಯಲ್ಲಿ ಈ ಮೈತ್ರಿ ಅಷ್ಟೇನೂ ಪರಿಣಾಮಕಾರಿಯಾಗುವುದಿಲ್ಲ ಎನ್ನುತ್ತದೆ ಎಬಿಪಿ-ಸಿವೋಟರ್ ಸಮೀಕ್ಷೆ. ಕಾಂಗ್ರೆಸ್ ಮತ್ತು ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದ್ದರೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದು ಸಾಧ್ಯವಾಗುವುದಿಲ್ಲ. ಮಿಗಿಲಾಗಿ ಕಳೆದ ಚುನಾವಣೆಯಲ್ಲಿ 9 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಎರಡು ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಜೆಡಿಎಸ್, ಅಷ್ಟೇ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ.

ಮಂಡ್ಯದಲ್ಲಿ ಸುಮಲತಾ ಜಯಭೇರಿ?
ಸಿವೋಟರ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಚುನಾವಣಾ ಅಭ್ಯರ್ಥಿಗಳ ಬಲಾಬಲವನ್ನು ಗಮನಿಸಿದಾಗ ರಾಜ್ಯದಲ್ಲಿ ಗೆಲ್ಲುವ ಮಟ್ಟದಲ್ಲಿ ಪೈಪೋಟಿ ನೀಡುವ ಪಕ್ಷೇತರ ಅಭ್ಯರ್ಥಿಯೆಂದರೆ ಸುಮಲತಾ ಅಂಬರೀಷ್ ಮಾತ್ರ. ಹೀಗಾಗಿ ಮಂಡ್ಯದಲ್ಲಿ ಸುಮಲತಾ ಅವರು ಗೆಲುವು ಸಾಧಿಸಲಿದ್ದಾರೆ ಎನ್ನಲಾಗಿದೆ. ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ನ ಕೆಲವು ಮುಖಂಡರು ಕೂಡ ತೆರೆಮರೆಯಲ್ಲಿ ಬೆಂಬಲ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಖಿಲ್ ಅವರಿಗೆ ಸೋಲು ನಿಚ್ಚಳ ಎಂದು ಸಮೀಕ್ಷೆ ತಿಳಿಸಿದೆ.

ಕರ್ನಾಟಕದಲ್ಲಿ ಯಾರಿಗೆ ಎಷ್ಟು ಮತ?
ಬಿಜೆಪಿ ಪರ ಜನರು ಹೆಚ್ಚಿನ ಒಲವು ತೋರಿಸಿದ್ದು, 18 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಕಾಂಗ್ರೆಸ್ ಎರಡು ಸ್ಥಾನಗಳನ್ನು ಕಳೆದುಕೊಂಡು 9 ರಿಂದ 7ಕ್ಕೆ ಏರಲಿದೆ. ಜೆಡಿಎಸ್ ಎರಡು ಸ್ಥಾನಗಳನ್ನು ಉಳಿಸಿಕೊಳ್ಳಲಿದೆಯಾದರೂ ಮಂಡ್ಯ ಕಳೆದುಕೊಳ್ಳಲಿದೆ. ಹಾಸನ ಮತ್ತು ತುಮಕೂರು ಕ್ಷೇತ್ರಗಳಲ್ಲಿ ಅದು ಜಯಗಳಿಸುವ ಸಾಧ್ಯತೆ ಇದೆ. ಕಳೆದ ವರ್ಷ ಯಾವುದೇ ಪಕ್ಷೇತರ ಅಭ್ಯರ್ಥಿ ಗೆದ್ದಿರಲಿಲ್ಲ. ಈ ಬಾರಿ ಸುಮಲತಾ ಅಂಬರೀಷ್ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications