ಕೊರೊನಾ ಲಾಕ್ ಡೌನ್ ನಿಂದ ಪರಿಶುದ್ಧವಾಯ್ತು ಬೆಂಗಳೂರಿನ ಗಾಳಿ
ಬೆಂಗಳೂರು ಮೇ. 19 : ಕೊರೊನಾ ಸೋಂಕಿನಿಂದ ಜನರು ತತ್ತರಿಸಿ ಹೋಗಿದ್ದಾರೆ ನಿಜ. ಈಗಲೂ ಮನೆಯಿಂದ ಹೊರಗೆ ಕಾಲಿಡಲು ಭಯ. ಆದರೆ, ಈ ಕರೊನಾ ಸೊಂಕಿನಿಂದ ಜಾರಿಯಾದ ಲಾಕ್ ಡೌನ್ ನಿಂದ ರಾಜಧಾನಿಯ ಮಾಲಿನ್ಯ ಸಂಪೂರ್ಣ ಕಡಿಮೆಯಾಗಿದೆ. ಸದಾ ವಾಹನಗಳ ಹೊಗೆಯಾಡುತ್ತಿದ್ದ ರಸ್ತೆಗಳಲ್ಲಿ ಪರಿಶುದ್ಧ ಗಾಳಿ ಸಿಗುತ್ತಿದೆ. ಕರೊನಾ ಲಾಕ್ ಡೌನ್ ನಿಯಮ ಜಾರಿಯಾದ ಬಳಿಕ ಬೆಂಗಳೂರಿನಲ್ಲಿ ಪರಿಸರ ಮಾಲಿನ್ಯ ಕಡಿಮೆಯಾಗಿರುವ ಪ್ರಮಾಣದ ವಿವರ ಇಲ್ಲಿದೆ ನೋಡಿ.
ಬೆಂಗಳೂರಿನಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಕೆಎಸ್ ಆರ್ಟಿಸಿ , ಬಿಎಂಟಿಸಿ , ಟ್ಯಾಕ್ಸಿ, ಕಾರುಗಳ ಅಬ್ಬರದಿಂಧ ವಾಹನ ದಟ್ಟಣೆ ಯಾಗುತ್ತಿತ್ತು. ಕಟ್ಟಡ ನಿರ್ಮಾಣ ಹೀಗೆ ನಾನಾ ಕಾರಣಗಳಿಂದ ಬೆಂಗಳೂರು ಭಾರತದ 82 ನೇ ಕಲುಷಿತ ನಗರ ಎಂಬ ಹಣೆಪಟ್ಟಿಗೆ ಒಳಗಾಗಿದೆ. ಬೆಂಗಳೂರಿನಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ವಿಶೇಷ ಅನುದಾನ ಕೂಡ ನೀಡಿತ್ತು. ಪರಿಸರ ಸಂರಕ್ಷಣೆ ಕುರಿತ ಹಲವು ಸಂಸ್ಥೆಗಳ ಸರ್ವೆ ಪ್ರಕಾರ ಬೆಂಗಳೂರಿನಲ್ಲಿ ಕಲುಷಿತ ವಾತಾವರಣದಿಂದ ನಾನಾ ಕಾಯಿಲೆಗಳಿಗೆ ತುತ್ತಾಗಿ ಅನೇಕರು ಜೀವ ಕಳೆದುಕೊಂಡಿದ್ದಾರೆ. ನೆರೆ ರಾಜ್ಯಗಳ ರಾಜಧಾನಿ ಚೆನ್ನೈ, ಹೈದರಾಬಾದ್ ಗೆ ಹೋಲಿಸಿದರೆ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪರಿಸರ ಮಾಲಿನ್ಯ ವಾಗುತ್ತಿರುವುದು ಸರ್ವೆಗಳಿಂದ ಬೆಳಕಿಗೆ ಬಂದಿತ್ತು. ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ ಸರಾಸರಿ ಹದಿನೈದು ಲಕ್ಷ ಮಂದಿ ಸಾವನ್ನಪ್ಪುತ್ತಾರೆ ಎಂಬ ಆತಂಕ ಕಾರಿ ಸಂಗತಿ ಕಳೆದ ವರ್ಷ ಅಧ್ಯಯನಗಳು ಬಹಿರಂಗಗೊಳಿಸಿದ್ದವು.
ಕೊರೊನಾ ಲಾಕ್ ಡೌನ್ ಜಾರಿಯಾದ ಪರಿಣಾಮ ರಾಜಧಾನಿಯಲ್ಲಿ ನಿರೀಕ್ಷೆಗೂ ಮೀರಿ ಪರಿಸರ ಮಾಲಿನ್ಯ ಕಡಿಮೆಯಾಗಿದೆ. ಕಳೆದ ಇಪ್ಪತ್ತು ದಿನಗಳಿಂದ ವಾಹನ ಸಂಚಾರ ಕಡಿಮೆಯಾಗಿರುವ ಕಾರಣ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಸಂಪೂರ್ಣ ಹತೋಟಿಗೆ ಬಂದಿದೆ. ವಾಹನ ಸಂಚಾರವಿಲ್ಲ, ವಾಯು ಮಾಲಿನ್ಯಕ್ಕೆ ಕಾರಣವಾಗುವ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿವೆ. ಹೀಗಾಗಿ ಬೆಂಗಳೂರು ಇದೀಗ ಸ್ವಚ್ಛಂಧವಾಗಿ ಕಾಣುತ್ತಿದೆ. ಪರಿಸರ ಮಾಲಿನ್ಯ ಕೂಡ ನಿಯಂತ್ರಣಕ್ಕೆ ಬಂದಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ದಾಖಲೆಗಳ ಪ್ರಕಾರ ಪರಿಸರ ಮಾಲಿನ್ಯದ ವಿವರ ಇಲ್ಲಿದೆ ನೋಡಿ.

ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾಗಿರುವ ಪಟ್ಟಿ
Recommended Video
| ಪ್ರದೇಶ | ಏ. 15 | ಮೇ. 18 |
|---|---|---|
| ಹೆಬ್ಬಾಳ | 111 ug/m3 | 28 ug/m3 |
| ಜಯನಗರ | 105 | 37 |
| ಮೈಸೂರು ರಸ್ತೆ | 142 | 34 |
| ನಿಮ್ಹಾನ್ಸ್ | 106 | 37 |
| ಸಿಟಿ ರೈಲ್ವೆ ನಿಲ್ದಾಣ | 106 | 49 |
| ಬಸವೇಶ್ವರನಗರ | 67 | 36 |
| ಪೀಣ್ಯಾ | 44 | 24 |
| ಬಿಟಿಎಂ ಲೇಔಟ್ | 75 | 59 |
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications