Shocking Incident:ಪಾರ್ಸೆಲ್ನಲ್ಲಿ ಮನೆ ಬಾಗಿಲಿಗೆ ಬಂತು ಮೃತದೇಹ: ಅಷ್ಟಕ್ಕೂ ಆಗಿದ್ದೇನು?
ಇತ್ತೀಚಿಗೆ ಆನ್ ಲೈನ್ ಆರ್ಡರ್ನಲ್ಲಿ, ಪಾರ್ಸೆಲ್ನಲ್ಲಿ ಬದಲಿ ವಸ್ತುಗಳು ಬರುವುದು ಸರ್ವೇ ಸಾಮಾನ್ಯವಾಗಿದೆ. ಆರ್ಡರ್ ಮಾಡಿದ ವಸ್ತುಗಳ ಬದಲಿಗೆ ಖಾಲಿ ಬಾಕ್ಸ್, ಹಳೆ ಬಟ್ಟೆ, ಕಲ್ಲುಗಳು ಸೇರಿದಂತೆ ಉಪಯೋಗಕ್ಕೆ ಬಾರದ ವಸ್ತುಗಳನ್ನು ಕಳುಹಿಸಿಕೊಟ್ಟಿರುವ ಅನೇಕ ಉದಾಹರಣೆಗಳನ್ನು ನೀವು ಕಾಣಬಹುದು. ಆದರೆ ಮನೆಗೆ ಬರಬೇಕಾದ ಪಾರ್ಸೆಲ್ನಲ್ಲಿ ತಾವು ಬಯಸಿದ ವಸ್ತುವಿನ ಬದಲು ಮನುಷ್ಯನ ಮೃತದೇಹ ಬಂದರೆ? ಊಹಿಸಿಕೊಳ್ಳಲೂ ಕೂಡ ಭಯವಾಗುತ್ತದೆ ಅಲ್ವಾ?. ಆದರೆ ಇಂತಹದ್ದೇ ಘಟನೆಯೊಂದು ಆಂಧ್ರ ಪ್ರದೇಶದಲ್ಲಿ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಾರ್ಸೆಲ್ ಸ್ವೀಕರಿಸಿದ ಮನೆ ಮಂದಿ ಹೌಹಾರಿದ್ದಾರೆ. ಯಂಡಗುಂದಿ ಗ್ರಾಮದ ಮಹಿಳೆಯೊಬ್ಬರು ಮನೆ ಕಟ್ಟುತ್ತಿದ್ದು, ಮನೆಯಲ್ಲಿ ಕಷ್ಟವಿದ್ದ ಕಾರಣ ಧನ ಸಹಾಯಕ್ಕಾಗಿ ಸಂಸ್ಥೆಯೊಂದಕ್ಕೆ ಮನವಿ ಮಾಡಿದ್ದರು. ಮಹಿಳೆಯ ಕಷ್ಟಕ್ಕೆ ಸ್ಪಂದಿಸಿದ್ದ ಕ್ಷತ್ರಿಯ ಸೇವಾ ಸಮಿತಿ ಮೊದಲು ಮಹಿಳೆಗೆ ಟೈಲ್ಸ್ ಕಳುಹಿಸಿದ್ದರು. ಬಳಿಕ ಮನೆಗೆ ವಿದ್ಯುತ್ ಉಪಕರಣಗಳನ್ನು ಕಳುಹಿಸಿಕೊಡುವ ಬಗ್ಗೆ ತಿಳಿಸಿದ್ದರು. ಈ ಬಗ್ಗೆ ಮೆಸೇಜ್ ಕೂಡ ಬಂದಿತ್ತು.

ಹೀಗಾಗಿ ಮಹಿಳೆ ಸಂಸ್ಥೆಯಿಂದ ವಿದ್ಯುತ್ ಉಪಕರಣ ಬರುವ ನಿರೀಕ್ಷೆಯಲ್ಲಿದ್ದರು. ಇದೇ ನಿರೀಕ್ಷೆಯಲ್ಲಿದ್ದ ಮಹಿಳೆ ಮನೆಗೆ ಪಾರ್ಸೆಲ್ವೊಂದು ಬಂದಿದೆ. ಪಾರ್ಸೆಲ್ ಕೊಡಲು ಬಂದ ವ್ಯಕ್ತಿ ಮನೆಯವರ ಕಣ್ಣಿಗೆ ಬೀಳದೆ ಪಾರ್ಸೆಲ್ ಇಟ್ಟು ಪರಾರಿಯಾಗಿದ್ದಾನೆ. ಕ್ಷತ್ರಿಯ ಸೇವಾ ಸಮಿತಿಯಿಂದ ಪಾರ್ಸೆಲ್ ಬಂದಿರಬಹುದು ಎಂದು ಬಾಕ್ಸ್ ತೆಗೆದ ಮಹಿಳೆಗೆ ಉಸಿರು ನಿಂತು ಹೋಗುವ ಸನ್ನಿವೇಶ ಎದುರಾಗಿದೆ.
ಹೌದು ಮನೆ ಬಾಗಿಲಿಗೆ ಬಂದ ಪಾರ್ಸೆಲ್ ತೆಗೆದು ನೋಡಿದಾಗ ಅದರಲ್ಲಿ ವ್ಯಕ್ತಿಯ ಮೃತದೇಹ ಇರುವುದು ಕಂಡು ಬಂದಿದೆ. ಸುಮಾರು ಮೂರು-ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ವ್ಯಕ್ತಿಯ ಶವ ಇದಾಗಿದ್ದು, ಮನೆ ಮಂದಿ ಹೌಹಾರಿದ್ದಾರೆ. ಬಾಕ್ಸ್ನಲ್ಲಿ ಮೃತದೇಹ ಕಂಡ ಮಹಿಳೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪಾರ್ಸೆಲ್ ಬಾಕ್ಸ್ ಅನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications