ಮತ್ತೊಂದು ‘ಭೂಮಿ’ ಪತ್ತೆಹಚ್ಚಿದ ಅಮೆರಿಕ ಬಾಹ್ಯಾಕಾಶ ವಿಜ್ಞಾನಿಗಳು
ಶುಕ್ರ ಗ್ರಹದಲ್ಲಿ ಏಲಿಯನ್ಗಳು ಬದುಕಿರುವ ಬಗ್ಗೆ ಮಹತ್ವದ ಮಾಹಿತಿ ಸಿಕ್ಕ ಕೆಲವೇ ದಿನಗಳ ಅಂತರದಲ್ಲಿ, ಭೂಮಿ ರೀತಿಯ ಮತ್ತೊಂದು ಗ್ರಹವನ್ನು ಬಾಹ್ಯಾಕಾಶ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಹೋಲಿಕೆಯಲ್ಲಿ ಭೂಮಿಯಂತೆಯೇ ಇರುವ ಈ ಗ್ರಹ, ತನ್ನ ನಕ್ಷತ್ರದ ಸುತ್ತ 3.14 ದಿನಗಳಿಗೆ ಒಮ್ಮೆ ಸುತ್ತುತ್ತದೆ. ಭೂಮಿಗೆ ಹೋಲಿಸಿದರೆ ಅಲ್ಲಿನ ತಾಪಮಾನ ಹೆಚ್ಚಾಗಿದ್ದರೂ, ಭೂಮಿ ರೀತಿ ನೆಲವನ್ನೇ ಅದು ಹೊಂದಿದೆ. 2017ರಲ್ಲಿ ಈ ಗ್ರಹದ ಫೋಟೋಗಳನ್ನು ನಾಸಾದ ಕೆಪ್ಲರ್ ಟೆಲಿಸ್ಕೋಪ್ ತೆಗೆದಿತ್ತು.
ಫೋಟೋಗಳನ್ನು ಆಳವಾಗಿ ಅಧ್ಯಯನ ನಡೆಸಿರುವ ಅಮೆರಿಕದ ಮೆಸಾಚುಸೆಟ್ಸ್ ವಿಶ್ವವಿದ್ಯಾಲಯದ ಬಾಹ್ಯಾಕಾಶ ವಿಜ್ಞಾನಿಗಳು, ಭೂಮಿಗೂ ಹೊಸ ಗ್ರಹಕ್ಕೂ ಇರುವ ಹೋಲಿಕೆಯನ್ನು ಅಧ್ಯಯನ ನಡೆಸಿದ್ದಾರೆ. ಗ್ರಹಕ್ಕೆ 'ಪಿಐ ಪ್ಲಾನೆಟ್' ಎಂದು ನಾಮಕರಣ ಮಾಡಲಾಗಿದೆ. ತಾನು ಸುತ್ತುತ್ತಿರುವ ನಕ್ಷತ್ರಕ್ಕೆ ಸಾಕಷ್ಟು ಹತ್ತಿರದಲ್ಲೇ ಇರುವ 'ಪಿಐ ಪ್ಲಾನೆಟ್'ನ ಉಷ್ಣಾಂಶ ಸಾಕಷ್ಟು ಹೆಚ್ಚಾಗಿದೆ. 'ಪಿಐ ಪ್ಲಾನೆಟ್'ನಲ್ಲಿ ಸುಮಾರು 350 ಡಿಗ್ರಿ ಉಷ್ಣಾಂಶವಿದ್ದು, ಜೀವಿಗಳು ಬದುಕುವ ಸಾಧ್ಯತೆ ಕಡಿಮೆ. ಆದರೂ ಶುಕ್ರ ಗ್ರಹದಂತೆ ಇಲ್ಲೂ ಜೀವಿಗಳು ಬದುಕಿರಬಹುದು ಎಂದು ಊಹಿಸಲಾಗಿದೆ.

ಶುಕ್ರ ಗ್ರಹದಲ್ಲಿ ಏಲಿಯನ್ ಸಂಶೋಧನೆ..!
ಕೆಲ ದಿನಗಳ ಹಿಂದೆ ಶುಕ್ರ ಗ್ರಹದಲ್ಲಿ ಜೀವಿಗಳು ಬದುಕಿರುವ ಸಾಧ್ಯತೆ ಕುರಿತು ಸಂಶೋಧಕರು ವರದಿ ಪ್ರಕಟಿಸಿದ್ದರು. 'ನೇಚರ್ ಅಸ್ಟ್ರಾನಮಿ'ಯಲ್ಲಿ ಪ್ರಕಟವಾಗಿದ್ದ ಸಂಶೋಧನಾ ವರದಿ ಶುಕ್ರ ಗ್ರಹದ ಕಠಿಣ ಆಮ್ಲೀಯ ಮೋಡಗಳ ಒಳಗೆ ಜೀವಿಗಳು ಬದುಕಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು. ಫಾಸ್ಫೈನ್ (Phosphine) ಎಂಬ ಜೈವಿಕ ಅನಿಲದ ಕಣ ಆಸಿಡ್ ಮೋಡಗಳಲ್ಲಿ ಕಂಡುಬಂದಿತ್ತು. 3 ಹ್ರೈಡ್ರೋಜನ್ ಅಣುಗಳ ಜೊತೆಯಲ್ಲಿ 1 ಫಾಸ್ಫರಸ್ ಅಣು ಸಂಯೋಜನೆಯಾದಾಗ ಫಾಸ್ಫೈನ್ ಗ್ಯಾಸ್ ಉತ್ಪತ್ತಿ ಆಗುತ್ತದೆ. ಭೂಮಿ ಮೇಲೆ ಕೆಲ ಬ್ಯಾಕ್ಟೀರಿಯಾಗಳು ಫಾಸ್ಫೈನ್ ಗ್ಯಾಸ್ ಹೊರಸೂಸುತ್ತವೆ. ಇದೇ ಕಾರಣಕ್ಕೆ ಶುಕ್ರ ಗ್ರಹದಲ್ಲೂ ಜೀವಿಗಳು ಅಥವಾ ಸೂಕ್ಷ್ಮಾಣು ಜೀವಿಗಳು ಬದುಕಿರುವ ಸಾಧ್ಯತೆ ಇದೆ ಎನ್ನಲಾಗಿತ್ತು. ಈ ವರದಿ ಮಂಡನೆಯಾಗಿ ಕೆಲವೇ ದಿನದಲ್ಲಿ ಮನುಕುಲಕ್ಕೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ.

ಆಕ್ಸಿಜೆನ್ ಇಲ್ಲದಿದ್ದರೂ ‘ಫಾಸ್ಫೈನ್’ ಗ್ಯಾಸ್ ಸಾಕು..!
ಅಷ್ಟಕ್ಕೂ ಭೂಮಿಯಲ್ಲಿರುವ ಫಾಸ್ಫೈನ್ ಗ್ಯಾಸ್ನ ಗುಣಗಳನ್ನು ಗಮನಿಸಿದರೆ ಶುಕ್ರ ಗ್ರಹದಲ್ಲೂ ಜೀವಿಗಳ ಇರುವಿಕೆಯ ಸುಳಿವು ಸಿಗುತ್ತದೆ. ಆಕ್ಸಿಜೆನ್ ಇಲ್ಲದ ವಾತಾವರಣದಲ್ಲೂ ಬದುಕಬಲ್ಲ ಬ್ಯಾಕ್ಟೀರಿಯಾಗಳಿಂದ ಭೂಮಿಯಲ್ಲಿ ಫಾಸ್ಫೈನ್ ಅನಿಲ ಸೃಷ್ಟಿಯಾಗುತ್ತದೆ. ಈಗ ಶುಕ್ರನ ಮೋಡಗಳಲ್ಲೂ ಕೂಡ ಈ ಫಾಸ್ಫೈನ್ ಗ್ಯಾಸ್ ಕಂಡುಬಂದಿದೆ. ಹೀಗಾದರೆ ಶುಕ್ರ ಗ್ರಹದಲ್ಲೂ ಸೂಕ್ಷ್ಮಜೀವಿಗಳು ಬದುಕುತ್ತಿರಬಹುದು ಎಂಬ ಆಶಯ ವಿಜ್ಞಾನಿಗಳಲ್ಲಿ ಮೂಡಿದೆ.

ನರಕದಂತಹ ಗ್ರಹದಲ್ಲಿ ಜೀವಿಗಳು ಬದುಕಬಹುದಾ..?
ಶುಕ್ರ ಗ್ರಹವನ್ನು ನೋಡಿದರೆ ಥೇಟ್ ನರಕವೇ ನೆನಪಾಗುತ್ತದೆ. ಏಕೆಂದರೆ ಶುಕ್ರ ಗ್ರಹದ ಪರಿಸ್ಥಿತಿ ಹಾಗೇ ಇದೆ. ಎಲ್ಲಾ ಕಡೆಯೂ ಕೊತ ಕೊತ ಕುದಿಯುವ ನೆಲ. ಪ್ರತಿಕ್ಷಣಕ್ಕೂ ಸ್ಫೋಟವಾಗುವ ಜ್ವಾಲಾಮುಖಿಗಳು. ಹಾಗೇ ಆಕಾಶಕ್ಕೆ ಹಾರುವ ಟನ್ಗಟ್ಟಲೇ ಆಸಿಡ್ ಗ್ಯಾಸ್. ಇದನ್ನೆಲ್ಲಾ ನೋಡುತ್ತಿದ್ದರೆ ನರಕ ನೆನಪಾಗದೇ ಇರದು. ಆದರೂ ಕೂಡ ಶುಕ್ರನಲ್ಲಿ ಜೀವಿಗಳು ಬದುಕಿರಬಹುದು ಎಂಬ ಕುರುಹನ್ನು ಈ ಫಾಸ್ಫೈನ್ ಗ್ಯಾಸ್ ನೀಡಿದೆ.

ಭೂಮಿಗೆ ಅತ್ಯಂತ ಸಮೀಪದ ಗ್ರಹ
ಸೌರಮಂಡಲದಲ್ಲಿ ಶುಕ್ರ ಭೂಮಿಗೆ ಅತ್ಯಂತ ಸಮೀಪದಲ್ಲಿರುವ ಗ್ರಹವಾಗಿದೆ. ಭೂಮಿಯಿಂದ ಶುಕ್ರ ಗ್ರಹ ಸುಮಾರು 140 ಮಿಲಿಯನ್ ಕಿಲೋಮೀಟರ್ ಅಂದರೆ 14 ಕೋಟಿ ಕಿಲೋಮೀಟರ್ ದೂರದಲ್ಲಿದೆ. ಈ ಅಂತರ ಭಾರಿ ಎನಿಸಿದರೂ, ಸೌರಮಂಡಲದಲ್ಲಿ ಬೇರೆ ಯಾವುದೇ ಗ್ರಹವೂ ಭೂಮಿಗೆ ಇಷ್ಟು ಹತ್ತಿರದಲ್ಲಿ ಇಲ್ಲ. ರಾತ್ರಿ ಆಕಾಶದಲ್ಲಿ ಬರಿಗಣ್ಣಿಗೆ ಕಾಣುವಷ್ಟು ಶುಕ್ರ ಗ್ರಹ ಭೂಮಿಗೆ ಹತ್ತಿರದಲ್ಲಿದೆ. ಹೀಗಾಗಿ ಪ್ರಸಕ್ತ ಸಂಶೋಧನಾ ವರದಿ ಖಗೋಳ ವಿಜ್ಞಾನದಲ್ಲೇ ದೊಡ್ಡ ತಿರುವು ಎನ್ನಬಹುದಾಗಿದೆ. ಅಕಸ್ಮಾತ್ ಮಾನವನೂ ಕೂಡ ಶುಕ್ರಗ್ರಹದಲ್ಲಿ ಬದುಕಲು ಸಾಧ್ಯವಾದರೆ, ಭವಿಷ್ಯದಲ್ಲಿ ದೊಡ್ಡ ಜಾದೂ ನಡೆದುಹೋಗಲಿದೆ.
Recommended Video

ಶುಕ್ರ ಗ್ರಹ ಬಿಸಿ ಬಿಸಿ..!
ಶುಕ್ರ ಗ್ರಹ ಸೂರ್ಯನಿಗೆ ತೀರಾ ಸಮೀಪದಲ್ಲಿದ್ದು, ಸೌರಮಂಡಲದ ಸಾಲಿನಲ್ಲಿರುವ 2ನೇ ಗ್ರಹವಾಗಿದೆ. ಈ ಗ್ರಹದ ನಂತರ ನಮ್ಮ ಭೂಮಿ ಇದ್ದು, ನಾವು ವಾಸಿಸುವ ಭೂಮಿ 3ನೇ ಗ್ರಹವಾಗಿದೆ. ಹಾಗೆ ನೋಡಿದರೆ ಸೂರ್ಯನಿಗೆ ತುಂಬಾ ಹತ್ತಿರದಲ್ಲಿರುವ ಶುಕ್ರ ಗ್ರಹದಲ್ಲಿ ಭಾರಿ ಉಷ್ಣಾಂಶವಿದೆ. ಶುಕ್ರ ಗ್ರಹದಲ್ಲಿ ಸಾಮಾನ್ಯ ತಾಪಮಾನವೇ 471 ಡಿಗ್ರಿ ಸೆಲ್ಸಿಯಸ್ನಷ್ಟು ಇರುತ್ತದೆ. ಏಕೆಂದರೆ ಈ ಗ್ರಹದ ವಾತಾವರಣ ಬಹಳ ದಟ್ಟ ಹಾಗೂ ವಿಷಕಾರಿಯಾಗಿದ್ದು ಸೂರ್ಯನ ಬಿಸಿಲನ್ನು ಹಿಡಿದಿಟ್ಟುಕೊಳ್ಳುತ್ತದೆ. ಆದರೂ ಶುಕ್ರ ಗ್ರಹ ಥೇಟ್ ಭೂಮಿಯಂತ ರಚನೆಯನ್ನೇ ಹೊಂದಿರುವುದು ಭಾರಿ ಕುತೂಹಲ ಕೆರಳಿಸಿದೆ. ಮಂಗಳ ಗ್ರಹವನ್ನು ಬಿಟ್ಟರೆ ನಮ್ಮ ಸೌರಮಂಡದಲ್ಲಿ ಜೀವಿಗಳ ಇರುವಿಕೆ ಸಾಧ್ಯವಿರುವುದು ಶುಕ್ರ ಗ್ರಹದಲ್ಲಿ ಮಾತ್ರ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications