ಸಿಎಎ ವಿರೋಧಿಸಿ ಜೈಲು ಸೇರಿದ ಅಖಿಲ್ ಈಗ ಎಂಎಲ್ಎ
ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ರೈತಪರ ಹೋರಾಟಗಾರ ಅಖಿಲ್ ಗೊಗಾಯಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಸದ್ಯ ಜೈಲಿನಲ್ಲಿರುವ ಅಖಿಲ್ ಅವರು ಸಿಬ್ಸಾಗರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರಭಿ ರಾಜ್ಕೊವಾರಿ ಅವರನ್ನು 12,000 ಮತಗಳ ಅಂತರದಿಂದ ಅಖಿಲ್ ಸೋಲಿಸಿದ್ದಾರೆ. ಈ ಮೂಲಕ ಜೈಲಿನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಅಸ್ಸಾಂ ರಾಜ್ಯದ ಮೊದಲ ಶಾಸಕ ಎನಿಸಿಕೊಂಡಿದ್ದಾರೆ.
126 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನ ಗಳಿಸಿದ್ದು, ಮತ್ತೆ ಅಧಿಕಾರಕ್ಕೇರಿದೆ. ಕಾಂಗ್ರೆಸ್ 29 ಸ್ಥಾನ, ಎಐಯುಡಿಜಿ, ಎಜಿಪಿ 16 ಹಾಗೂ 9 ಸ್ಥಾನ ಪಡೆದುಕೊಂಡಿದೆ. ಬಿಡಿಎಫ್, ಸಿಪಿಐ(ಎಂ) ಹಾಗೂ ಯುಪಿಪಿಎಲ್ ಕ್ರಮವಾಗಿ 4,1 ಹಾಗೂ 6 ಸ್ಥಾನ ಗಳಿಸಿವೆ.
ಡಿಸೆಂಬರ್ 2019ರಿಂದ ಜೈಲಿನಲ್ಲಿರುವ ಅಖಿಲ್ ಅವರು ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಹೋರಾಟ ನೇತೃತ್ವ ವಹಿಸಿದ್ದರು. ಈ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನಡೆಸಿದ ಶೂಟಿಂಗ್ನಲ್ಲಿ ಐದು ಮಂದಿ ಮೃತಪಟ್ಟಿದ್ದರು. ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಖಿಲ್ ಅವರನ್ನು ಬಂಧಿಸಿ, ಜೈಲಿಗೆ ಕಳಿಸಲಾಗಿತ್ತು.

ಅಸ್ಸಾಂ ವಿಧಾನಸಭೆ ಚುನಾವಣೆ 2021
ಅಸ್ಸಾಂ ವಿಧಾನಸಭೆ ಚುನಾವಣೆ 2021ರಲ್ಲಿ ಸ್ಪರ್ಧಿಸಿದ ಅಖಿಲ್ ಅವರ ಪರ ತಾಯಿ ಪ್ರಿಯೊದಾ ಗೊಗಾಯಿ ಪ್ರಚಾರ ನಡೆಸಿ, ತನ್ನ ಮಗನಿಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕಿದೆ ಎಂದು ಪ್ರಚಾರ ಭಾಷಣದಲ್ಲಿ ಕೇಳಿಕೊಂಡರು. ಹೋರಾಟಗಾರ್ತಿ ಮೇಧಾ ಪಾಟ್ಕರ್ ಹಾಗೂ ವಿದ್ಯಾರ್ಥಿ ಸಂಘಟನೆಗಳ ಬೆಂಬಲವೂ ಸಿಕ್ಕಿತ್ತು.

ಜನರ ಆಶೀರ್ವಾದದಿಂದ ನನ್ನ ಮಗ ಅಖಿಲ್ ಗೆಲುವು
ಜನರ ಆಶೀರ್ವಾದದಿಂದ ನನ್ನ ಮಗ ಅಖಿಲ್ ಇಂದು ವಿಧಾನಸಭೆಗೆ ಆಯ್ಕೆಯಾಗಿದ್ದಾನೆ. ಈಗ ಜನರಿಗಾಗಿ ಕೆಲಸ ಮಾದಬೇಕಾಗಿದೆ. ಅಸ್ಸಾಂ ಅಭಿವೃದ್ಧಿಗಾಗಿ ಶ್ರಮಿಸಬೇಕಾಗಿದೆ, ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕಿದೆ ಎಂದು ಅಖಿಲ್ ತಾಯಿ ಪ್ರಿಯೋದಾ ಪ್ರತಿಕ್ರಿಯಿಸಿದ್ದಾರೆ.

45 ವರ್ಷ ವಯಸ್ಸಿನ ರೈತ ಮುಖಂಡ
45 ವರ್ಷ ವಯಸ್ಸಿನ ರೈತ ಮುಖಂಡ, ಸಾಮಾಜಿಕ ಹೋರಾಟಗಾರ, ಆರ್ ಟಿ ಐ ಕಾರ್ಯಕರ್ತ ಅಖಿಲ್ ಅವರು ನಿರಂತರವಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಾ ಬಂದಿದ್ದಾರೆ. ಈಶಾನ್ಯರಾಜ್ಯಗಳಲ್ಲಿ ಪರಿಸರ ವಿರೋಧಿ ಅಣೆಕಟ್ಟು ನಿರ್ಮಾಣ ಯೋಜನೆ, ಭೂ ಹಗರಣಗಳ ವಿರುದ್ಧ ಹೋರಾಟ ನಡೆಸಿದ್ದಾರೆ.

ಅಸೆಂಬ್ಲಿಯಲ್ಲಿ ಸಿಂಹ ಘರ್ಜನೆ
ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬಂದರೆ 1.90 ಕೋಟಿ ಅಸ್ಸಾಮಿಗಳಿಗೆ ತೊಂದರೆಯಾಗಲಿದೆ. 1971ರ ಹಿಂದೂ ಬೆಂಗಾಲಿ ವಲಸಿಗರಿಗೆ ನೀಡಿದ್ದ ಪೌರತ್ವಕ್ಕೆ ಬೆಲೆ ಸಿಗುವುದಿಲ್ಲ ಎಂದು ಅಖಿಲ್ ವಿರೋಧ ವ್ಯಕ್ತಪಡಿಸಿದ್ದರು. ಅಖಿಲ್ ಗೊಗಾಯಿ ಗೆಲುವಿನಿಂದ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ. ಇನ್ಮುಂದೆ ಅಸೆಂಬ್ಲಿಯಲ್ಲಿ ಸಿಂಹ ಘರ್ಜನೆ ಕೇಳಿಸಲಿದೆ ಎಂದು ಸಂತಸದಿಂದ ಪ್ರತಿಕ್ರಿಯಿಸಿದ್ದಾರೆ.
Recommended Video
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications