ಅಸ್ಸಾಂ ಚುನಾವಣಾಪೂರ್ವ ಸಮೀಕ್ಷೆ: ಕಷ್ಟಪಟ್ಟು ಅಧಿಕಾರಕ್ಕೆ ಬರಲಿದೆ ಬಿಜೆಪಿ
ಈಶಾನ್ಯ ರಾಜ್ಯಗಳ ಪೈಕಿ ರಾಜಕೀಯವಾಗಿ ಹೆಚ್ಚು ಪ್ರಾಮುಖ್ಯ ಪಡೆದುಕೊಂಡಿರುವ ಅಸ್ಸಾಂನಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 6ರವರೆಗೆ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 15ನೇ ವಿಧಾನಸಭೆಗೆ 126 ಶಾಸಕರನ್ನು ಆಯ್ಕೆ ಮಾಡಬೇಕಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ನಡುವೆ ತೀವ್ರ ಜಿದ್ದಾಜಿದ್ದಿನ ಹಣಾಹಣಿ ನಡೆಯುವ ನಿರೀಕ್ಷೆಯಿದೆ ಎಂದು 'ಟೈಮ್ಸ್ ನೌ' ಮತ್ತು ಸಿ-ವೋಟರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಸೋಮವಾರ ತಿಳಿಸಿದೆ. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗಳ (ಎನ್ಆರ್ಸಿ) ವಿರುದ್ಧ ಭಾರಿ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದರ ಹೊರತಾಗಿಯೂ ಆಡಳಿತಾರೂಢ ಎನ್ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.
ಈ ಬಾರಿ ಯುಪಿಎ ಮೈತ್ರಿಕೂಟದ ಮತ ಹಂಚಿಕೆಯ ಪ್ರಮಾಣದಲ್ಲಿ ದೊಡ್ಡಮಟ್ಟದ ಏರಿಕೆಯಾಗಲಿದೆ. ಹೀಗಾಗಿ ಜನರ ತೀರ್ಪು ತನ್ನ ಕಡೆಗೆ ಇರಲಿದೆ ಎಂದು ಎನ್ಡಿಎ ನೆಮ್ಮದಿಯಿಂದ ಇರುವಂತಿಲ್ಲ ಎಂದು ಸಮೀಕ್ಷೆ ಹೇಳಿದೆ.

ಯಾರಿಗೆ ಎಷ್ಟು ಕ್ಷೇತ್ರ?
126 ಸೀಟುಗಳ ವಿಧಾನಸಭೆಯಲ್ಲಿ ಎನ್ಡಿಎ 67 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಯುಪಿಎ 57 ಸೀಟುಗಳನ್ನು ಪಡೆಯಲಿದೆ. ಇತರೆ ಪಕ್ಷಗಳು 2 ಸೀಟುಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. 2016ರ ಚುನಾವಣೆಯಲ್ಲಿ ಎನ್ಡಿಎ 74ರಲ್ಲಿ ಗೆದ್ದಿದ್ದರೆ, ಯುಪಿಎ 39 ಸೀಟುಗಳನ್ನು ಪಡೆದುಕೊಂಡಿತ್ತು.

ಯಾರಿಗೆ ಅಧಿಕಾರ ನೀಡಬೇಕು?
ಇಂದು ಅಸ್ಸಾಂ ಚುನಾವಣೆ ನಡೆದರೆ ಯಾರಿಗೆ ಮತ ಹಾಕುತ್ತೀರಿ ಎಂಬ ಪ್ರಶ್ನೆಗೆ ಶೇ 42.29ರಷ್ಟು ಮಂದಿ ಬಿಜೆಪಿ ನೇತೃತ್ವದ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರುವುದನ್ನು ಬಯಸಿದ್ದಾರೆ. ಇನ್ನು ಶೇ 40.7 ಮಂದಿ ಕಾಂಗ್ರೆಸ್ ನೇತೃತ್ವದ ಯುಪಿಎ ಪರ ಒಲವು ಪ್ರದರ್ಶಿಸಿದ್ದಾರೆ.

ಮುಖ್ಯಮಂತ್ರಿ ಯಾರಾಗಬೇಕು?
ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರನ್ನ ಮತ್ತೆ ಮುಖ್ಯಮಂತ್ರಿಯನ್ನಾಗಿ ನೋಡಲು ಹೆಚ್ಚಿನ ಜನರು ಬಯಸಿದ್ದಾರೆ. ಶೇ 45.2ರಷ್ಟು ಜನರಿಗೆ ಸೋನೊವಾಲ್ ಅವರೇ ಸಿಎಂ ಆಗಬೇಕು ಎನಿಸಿದೆ. ಎರಡನೆಯ ಸ್ಥಾನದಲ್ಲಿ ಕಾಂಗ್ರೆಸ್ನ ಗೌರವ್ ಗೊಗೊಯ್ ಇದ್ದಾರೆ. ಶೇ 4.8ರಷ್ಟು ಜನರು ಬದ್ರುದ್ದೀನ್ ಅಹ್ಮಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡಲು ಬಯಸಿದ್ದಾರೆ.

ಪ್ರಧಾನಿ ಮೋದಿ ಕೆಲಸ ಎಷ್ಟು ತೃಪ್ತಿಕರ?
ಬಹಳ ತೃಪ್ತಿಕರ: ಶೇ 42.42
ಒಂದು ಮಟ್ಟಕ್ಕೆ ತೃಪ್ತಿಕರ: 27.64%
ತೃಪ್ತಿಕರವಾಗಿಲ್ಲ: 16.45%
ಗೊತ್ತಿಲ್ಲ: 13.49%
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications