ಅಸ್ಸಾಂ ಚುನಾವಣಾಪೂರ್ವ ಸಮೀಕ್ಷೆ: ಕಷ್ಟಪಟ್ಟು ಅಧಿಕಾರಕ್ಕೆ ಬರಲಿದೆ ಬಿಜೆಪಿ
ಈಶಾನ್ಯ ರಾಜ್ಯಗಳ ಪೈಕಿ ರಾಜಕೀಯವಾಗಿ ಹೆಚ್ಚು ಪ್ರಾಮುಖ್ಯ ಪಡೆದುಕೊಂಡಿರುವ ಅಸ್ಸಾಂನಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 6ರವರೆಗೆ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 15ನೇ ವಿಧಾನಸಭೆಗೆ 126 ಶಾಸಕರನ್ನು ಆಯ್ಕೆ ಮಾಡಬೇಕಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ನಡುವೆ ತೀವ್ರ ಜಿದ್ದಾಜಿದ್ದಿನ ಹಣಾಹಣಿ ನಡೆಯುವ ನಿರೀಕ್ಷೆಯಿದೆ ಎಂದು 'ಟೈಮ್ಸ್ ನೌ' ಮತ್ತು ಸಿ-ವೋಟರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಸೋಮವಾರ ತಿಳಿಸಿದೆ. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗಳ (ಎನ್ಆರ್ಸಿ) ವಿರುದ್ಧ ಭಾರಿ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದರ ಹೊರತಾಗಿಯೂ ಆಡಳಿತಾರೂಢ ಎನ್ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.
ಈ ಬಾರಿ ಯುಪಿಎ ಮೈತ್ರಿಕೂಟದ ಮತ ಹಂಚಿಕೆಯ ಪ್ರಮಾಣದಲ್ಲಿ ದೊಡ್ಡಮಟ್ಟದ ಏರಿಕೆಯಾಗಲಿದೆ. ಹೀಗಾಗಿ ಜನರ ತೀರ್ಪು ತನ್ನ ಕಡೆಗೆ ಇರಲಿದೆ ಎಂದು ಎನ್ಡಿಎ ನೆಮ್ಮದಿಯಿಂದ ಇರುವಂತಿಲ್ಲ ಎಂದು ಸಮೀಕ್ಷೆ ಹೇಳಿದೆ.

ಯಾರಿಗೆ ಎಷ್ಟು ಕ್ಷೇತ್ರ?
126 ಸೀಟುಗಳ ವಿಧಾನಸಭೆಯಲ್ಲಿ ಎನ್ಡಿಎ 67 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಯುಪಿಎ 57 ಸೀಟುಗಳನ್ನು ಪಡೆಯಲಿದೆ. ಇತರೆ ಪಕ್ಷಗಳು 2 ಸೀಟುಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. 2016ರ ಚುನಾವಣೆಯಲ್ಲಿ ಎನ್ಡಿಎ 74ರಲ್ಲಿ ಗೆದ್ದಿದ್ದರೆ, ಯುಪಿಎ 39 ಸೀಟುಗಳನ್ನು ಪಡೆದುಕೊಂಡಿತ್ತು.

ಯಾರಿಗೆ ಅಧಿಕಾರ ನೀಡಬೇಕು?
ಇಂದು ಅಸ್ಸಾಂ ಚುನಾವಣೆ ನಡೆದರೆ ಯಾರಿಗೆ ಮತ ಹಾಕುತ್ತೀರಿ ಎಂಬ ಪ್ರಶ್ನೆಗೆ ಶೇ 42.29ರಷ್ಟು ಮಂದಿ ಬಿಜೆಪಿ ನೇತೃತ್ವದ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರುವುದನ್ನು ಬಯಸಿದ್ದಾರೆ. ಇನ್ನು ಶೇ 40.7 ಮಂದಿ ಕಾಂಗ್ರೆಸ್ ನೇತೃತ್ವದ ಯುಪಿಎ ಪರ ಒಲವು ಪ್ರದರ್ಶಿಸಿದ್ದಾರೆ.

ಮುಖ್ಯಮಂತ್ರಿ ಯಾರಾಗಬೇಕು?
ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರನ್ನ ಮತ್ತೆ ಮುಖ್ಯಮಂತ್ರಿಯನ್ನಾಗಿ ನೋಡಲು ಹೆಚ್ಚಿನ ಜನರು ಬಯಸಿದ್ದಾರೆ. ಶೇ 45.2ರಷ್ಟು ಜನರಿಗೆ ಸೋನೊವಾಲ್ ಅವರೇ ಸಿಎಂ ಆಗಬೇಕು ಎನಿಸಿದೆ. ಎರಡನೆಯ ಸ್ಥಾನದಲ್ಲಿ ಕಾಂಗ್ರೆಸ್ನ ಗೌರವ್ ಗೊಗೊಯ್ ಇದ್ದಾರೆ. ಶೇ 4.8ರಷ್ಟು ಜನರು ಬದ್ರುದ್ದೀನ್ ಅಹ್ಮಲ್ ಅವರನ್ನು ಸಿಎಂ ಸ್ಥಾನದಲ್ಲಿ ನೋಡಲು ಬಯಸಿದ್ದಾರೆ.

ಪ್ರಧಾನಿ ಮೋದಿ ಕೆಲಸ ಎಷ್ಟು ತೃಪ್ತಿಕರ?
ಬಹಳ ತೃಪ್ತಿಕರ: ಶೇ 42.42
ಒಂದು ಮಟ್ಟಕ್ಕೆ ತೃಪ್ತಿಕರ: 27.64%
ತೃಪ್ತಿಕರವಾಗಿಲ್ಲ: 16.45%
ಗೊತ್ತಿಲ್ಲ: 13.49%
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications