ಪಂಚರಾಜ್ಯ ಚುನಾವಣೆ: ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಯಾರಿಗೆ ಅವಕಾಶ?
ಚಂಡೀಗಢ, ಜನವರಿ 16: ಪಂಜಾಬ್ನ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯ ಪ್ರಕಟಣೆಯ ಪ್ರಕಾರ, ಭಾರತೀಯ ಚುನಾವಣಾ ಆಯೋಗವು (ಇಸಿಐ) ಚುನಾವಣಾ ಸಂಸ್ಥೆಯಿಂದ ಅಧಿಕಾರ ಪಡೆದ ಮಾಧ್ಯಮ ಪ್ರತಿನಿಧಿಗಳಿಗೆ ಅಂಚೆ ಮತಪತ್ರ ಸೌಲಭ್ಯವನ್ನು ಬಳಸಿಕೊಂಡು ತಮ್ಮ ಹಕ್ಕು ಚಲಾಯಿಸಲು ಅನುಮತಿ ನೀಡಿದೆ. ಈ ಹಿಂದೆ ಭಾರತೀಯ ಚುನಾವಣಾ ಆಯೋಗವು 80 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮತದಾರರು, ಅಂಗವೈಕಲ್ಯತೆ ಹೊಂದಿರುವವರು (ಶೇಕಡ 40 ಕ್ಕಿಂತ ಹೆಚ್ಚು) ಮತ್ತು ಕೋವಿಡ್ ಪಾಸಿಟಿವ್ ರೋಗಿಗಳಿಗೆ ಅಂಚೆ ಮತಪತ್ರಗಳ ಮೂಲಕ ಮತ ಚಲಾಯಿಸಲು ಅವಕಾಶ ನೀಡಿತ್ತು.
ಪಂಜಾಬ್ನ ಪ್ರಸ್ತುತ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಮತದಾನದ ದಿನದಂದು ಕರ್ತವ್ಯದಲ್ಲಿರುವ ಕಾರಣದಿಂದಾಗಿ ಆಯಾ ಮತಗಟ್ಟೆಯಲ್ಲಿ ಹಾಜರಾಗಲು ಸಾಧ್ಯವಾಗದವರಿಗೂ ಈ ಅವಕಾಶ ನೀಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು, ಭಾರತೀಯ ಆಹಾರ ನಿಗಮ, ಆಲ್ ಇಂಡಿಯಾ ರೇಡಿಯೋ, ದೂರದರ್ಶನ, ಅಂಚೆ ಮತ್ತು ಟೆಲಿಗ್ರಾಫ್, ರೈಲ್ವೇ, ಬಿಎಸ್ಎನ್ಎಲ್, ವಿದ್ಯುತ್, ಆರೋಗ್ಯ, ಅಗ್ನಿಶಾಮಕ ಸೇವೆಗಳು ಮತ್ತು ನಾಗರಿಕ ವಿಮಾನಯಾನ ಸೇರಿದಂತೆ ಕರ್ತವ್ಯದಲ್ಲಿರುವ ಇತರ ಅಗತ್ಯ ಸೇವಾ ಮತದಾರರು ಅಂಚೆ ಮತಪತ್ರ ಸೌಲಭ್ಯವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಇಸಿಐ ಅಧಿಸೂಚನೆ ಹೇಳಿದೆ.
" />ಪಂಚರಾಜ್ಯ ಚುನಾವಣೆ: 80 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ
ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಪಂಜಾಬ್ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಡಾ ಎಸ್ ಕರುಣಾ ರಾಜು ಅವರನ್ನು ಗೈರುಹಾಜರಾದ ಮತದಾರರ ವರ್ಗಕ್ಕೆ ಸೇರಿಸಲು ಬೇಡಿಕೆಯನ್ನು ಎತ್ತಿದರು. ಈ ಬಗ್ಗೆ ವಿವರಗಳನ್ನು ನೀಡಿದ ಡಾ ಎಸ್ ಕರುಣಾ ರಾಜು, "ಯಾವುದೇ ಗೈರುಹಾಜರಾದ ಮತದಾರರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಇಚ್ಛಿಸುವವರು ನಮೂನೆ-12ಡಿಯಲ್ಲಿ ಚುನಾವಣಾಧಿಕಾರಿಗಳಿಗೆ ಎಲ್ಲಾ ಅಗತ್ಯ ವಿವರಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬೇಕು," ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಮಾಡಿ
"ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಇಚ್ಛಿಸುವವರು ನಮೂನೆ-12ಡಿಯಲ್ಲಿ ಚುನಾವಣಾಧಿಕಾರಿಗಳಿಗೆ ಎಲ್ಲಾ ಅಗತ್ಯ ವಿವರಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬೇಕು. ಸಂಬಂಧಪಟ್ಟ ಸಂಸ್ಥೆಯಿಂದ ನೇಮಕಗೊಂಡ ನೋಡಲ್ ಅಧಿಕಾರಿಗಳು ಈ ಅರ್ಜಿಯನ್ನು ಪರಿಶೀಲಿಸಬೇಕು. ಅಂಚೆ ಮತಪತ್ರ ಸೌಲಭ್ಯವನ್ನು ಕೋರಿದ ಅರ್ಜಿಗಳು ಚುನಾವಣೆ ಘೋಷಣೆಯಾದ ದಿನಾಂಕದಿಂದ ಸಂಬಂಧಿಸಿದ ಚುನಾವಣೆಯ ಅಧಿಸೂಚನೆಯ ದಿನಾಂಕದ ನಂತರದ ಐದು ದಿನಗಳ ಅವಧಿಯಲ್ಲಿ ಆರ್ಒಗೆ ತಲುಪಬೇಕು," ಎಂದು ಪಂಜಾಬ್ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಡಾ ಎಸ್ ಕರುಣಾ ರಾಜು ಮಾಹಿತಿ ನೀಡಿದರು.
4 ರಾಜ್ಯ 1 ಕೇಂದ್ರಾಡಳಿತ ಪ್ರದೇಶದಲ್ಲಿ ಇರುವ ಒಟ್ಟು ಮತದಾರರೆಷ್ಟು?
Recommended Video
"ಅಂಚೆ ಮತಪತ್ರ ಸೌಲಭ್ಯವನ್ನು ಆಯ್ಕೆ ಮಾಡಿಕೊಳ್ಳುವ ಯಾವುದೇ ಮತದಾರರು ಮತಗಟ್ಟೆಯಲ್ಲಿ ಸಾಮಾನ್ಯ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ," ಎಂದು ಕೂಡಾ ಸ್ಪಷ್ಟಪಡಿಸಿದರು. ಈ ನಡುವೆ ಕ್ಷೇತ್ರದಲ್ಲಿ ಮತದಾನಕ್ಕೆ ನಿಗದಿಪಡಿಸಿದ ದಿನಾಂಕದ ಮೊದಲು ಪ್ರತಿ ಕ್ಷೇತ್ರಗಳಲ್ಲಿ ಸತತ ಮೂರು ದಿನಗಳವರೆಗೆ ಅಂಚೆ ಮತದಾನ ಕೇಂದ್ರವು ತೆರೆದಿರುತ್ತದೆ. ಪ್ರತಿ ಮೂರು ದಿನಗಳಲ್ಲಿ, ಪಿವಿಸಿ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ತೆರೆದಿರುತ್ತದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಪಂಜಾಬ್, ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್ಇಂಡಿಯಾ ಸುದ್ದಿ)