ಯುಪಿ ಚುನಾವಣೆ: ಈ ಬಾರಿ ಪ್ರಣಾಳಿಕೆ ಬಿಡುಗಡೆ ಮಾಡಲ್ಲ ಬಿಎಸ್ಪಿ!
ಲಕ್ನೋ, ನವೆಂಬರ್ 24: ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಉತ್ತರ ಪ್ರದೇಶದಲ್ಲಿ 2022 ರ ವಿಧಾನಸಭೆ ಚುನಾವಣೆಗಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡದಿರಲು ನಿರ್ಧಾರ ಮಾಡಿದೆ. ಪ್ರಣಾಳಿಕೆಯ ಬದಲಾಗಿ ಬಿಎಸ್ಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಯಾವೆಲ್ಲಾ ಜನ ಉಪಯೋಗಿ ಕಾರ್ಯಗಳನ್ನು ಮಾಡಲಾಗಿದೆ ಎಂಬುವುದನ್ನು ಜನರಿಗೆ ತಿಳಿಸಲು ಬಿಎಸ್ಪಿ ಮುಂದಾಗಿದೆ.
ಈ ಬಗ್ಗೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ, "ಬೇರೆ ಪಕ್ಷಗಳಿಗಿಂತ ಭಿನ್ನವಾಗಿ ಬಿಎಸ್ಪಿ ಪಕ್ಷವು ತಳಮಟ್ಟದಲ್ಲಿ ಕೆಲಸ ಮಾಡಲು ನಿರ್ಧಾರ ಮಾಡಿಕೊಂಡಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಬಿಎಸ್ಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದರ ಬದಲಾಗಿ, ನಾವು ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಲಾಗುವುದು," ಎಂದು ಹೇಳಿದರು.
ಬಿಎಸ್ಪಿಯು 1995, 1997, 2002 ಹಾಗೂ 2007 ಉತ್ತರ ಪ್ರದೇಶದಲ್ಲಿ ಆಡಳಿತವನ್ನು ನಡೆಸಿದೆ. ಈ ನಿಟ್ಟಿನಲ್ಲಿ ಮಾಯಾವತಿ ಬಿಎಸ್ಪಿ ಸರ್ಕಾರದ ಜನಪರ ಯೋಜನೆ, ಸಾಧನೆಯ ಬಗ್ಗೆ ಜನರಿಗೆ ಮಾಹಿತಿ ನೀಡಲು ಮುಂದಾಗಿದೆ. "ನಮ್ಮ ಸರ್ಕಾರ ಇದ್ದ ಸಂದರ್ಭದಲ್ಲಿ ನಾವು ಮಾಡಿದ ಅಭಿವೃದ್ದಿ ಹಾಗೂ ಕಲ್ಯಾಣ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಣೆ ಮಾಡಲಿದ್ದೇವೆ. ಅದಕ್ಕಾಗಿ ಸುತ್ತೋಲೆಯನ್ನು ಮಾಡಿದ್ದೇವೆ," ಎಂದು ತಿಳಿಸಿದರು.

ಈ ಸುತ್ತೋಲೆಯಲ್ಲಿ ಏನು ಇರುತ್ತದೆ?
"ಈ ಸುತ್ತೋಲೆಯಲ್ಲಿ ಬಿಎಸ್ಪಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ತಳಮಟ್ಟದಲ್ಲಿ ಮಾಡಿದ ಅಭಿವೃದ್ದಿ ಕಾರ್ಯವನ್ನು ಉಲ್ಲೇಖ ಮಾಡಲಾಗುತ್ತದೆ. ಬೇರೆ ಪಕ್ಷಗಳು ಬಿಎಸ್ಪಿ ತನ್ನ ಆಡಳಿತದ ಸಂದರ್ಭದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯವನ್ನೇ ಬರೀ ಹೆಸರು ಬದಲಾವಣೆ ಮಾಡಿ ಪ್ರಚಾರ ಮಾಡುತ್ತಿದೆ. ಬಿಜೆಪಿ ಸರ್ಕಾರವು ಕೇವಲ ಸುಳ್ಳು ಭರವಸೆಯನ್ನು ನೀಡುತ್ತಿದೆ. ಬಿಜೆಪಿಯ ಯೋಜನೆಗಳು ಬರೀ ಕಾಗದಕ್ಕೆ ಸೀಮಿತವಾಗಿದೆ. ಆದರೆ ಬಿಎಸ್ಪಿ ತಳಮಟ್ಟದಿಂದ ಜನರಿಗಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ," ಎಂದಿದ್ದಾರೆ. ''

ಬಿಎಸ್ಪಿಯಿಂದ ಮನೆ ಮನೆಗೂ ಸುತ್ತೋಲೆ ಹಂಚಿಕೆ
ಬಿಎಸ್ಪಿ ಸರ್ಕಾರ ಮಾಡಿದ ಕಾರ್ಯವನ್ನು ಜನರಿಗೆ ತಿಳಿಸುವ ಸುತ್ತೋಲೆಯನ್ನು ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೂ ಹಂಚುತ್ತಾರೆ. ಈ ಮೂಲಕ 2022 ರಲ್ಲಿ ಬಿಎಸ್ಪಿ ಸರ್ಕಾರ ರಚನೆ ಮಾಡಿದರೆ, ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಬಿಎಸ್ಪಿ ಮಾಡುವ ಕಾರ್ಯ ಹಾಗೂ ತಳಮಟ್ಟದಲ್ಲಿ ಜನ ಸಾಮಾನ್ಯರ ಕಲ್ಯಾಣಕ್ಕಾಗಿ ಮಾಡುವ ಕಾರ್ಯವನ್ನು ಪಕ್ಷವು ಜನರಿಗೆ ತಲುಪಿಸಲಿದೆ," ಎಂದು ಕೂಡಾ ಹೇಳಿದರು.

86 ಮೀಸಲು ಸ್ಥಾನಗಳ ಮೇಲೆ ಬಿಎಸ್ಪಿ ಚಿತ್ತ
"ಉತ್ತರ ಪ್ರದೇಶದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿಯು ಪ್ರಮುಖವಾಗಿ 86 ಮೀಸಲು ಸ್ಥಾನಗಳ ಮೇಲೆ ಗಮನಹರಿಸಲಿದೆ," ಎಂದು ಕೂಡಾ ಮಾಯಾವತಿ ತಿಳಿಸಿದರು. ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ 84 ಪರಿಶಿಷ್ಟ ಜಾತಿಗೆ ಮತ್ತು 2 ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ರಾಜ್ಯ ಘಟಕದ ಕಚೇರಿಯಲ್ಲಿ ಪಕ್ಷ ಪದಾಧಿಕಾರಿಗಳ ಜೊತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಮೀಸಲು ವಿಧಾನಸಭೆ ಸ್ಥಾನಗಳ ಪರಿಶೀಲನೆ ನಡೆಸಲಾಗಿದೆ. ಎಲ್ಲಾ ಮೀಸಲು ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪಕ್ಷವು ಕಾರ್ಯತಂತ್ರ ರೂಪಿಸುತ್ತಿದೆ. ಮೇಲ್ಜಾತಿಯವರ ಮೇಲೆಯೂ ಪಕ್ಷವು ಗಮನ ಹರಿಸಲಿದೆ," ಎಂದು ಮಾಯಾವತಿ ತಿಳಿಸಿದರು.

ಕೃಷಿ ಕಾಯ್ದೆಯ ಬಗ್ಗೆ ಮಾಯಾವತಿ ಏನು ಹೇಳುತ್ತಾರೆ?
"ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಯನ್ನು ವಾಪಾಸ್ ಪಡೆದಿದೆ. ಕೃಷಿ ಕಾಯ್ದೆಯನ್ನು ಹಿಂಪಡೆಬೇಕು ಎಂದು ನಾನು ಹಲವಾರು ಬಾರಿ ಒತ್ತಾಯ ಮಾಡಿದ್ದೇನೆ. ಟ್ವೀಟ್ಗಳನ್ನು ಮಾಡುವ ಮೂಲಕ ಕೇಂದ್ರ ಸರ್ಕಾರದ ಗಮನವನ್ನು ಸೆಳೆದಿದ್ದೇನೆ. ಕೇಂದ್ರ ಸರ್ಕಾರವು ರೈತರೊಂದಿಗೆ ಮಾತುಕತೆ ನಡೆಸಬೇಕು. ರೈತರಿಗೆ ಈಗಲೂ ಸಣ್ಣಪುಟ್ಟ ಸಮಸ್ಯೆಗಳು ಇದೆ, ಆ ಬಗ್ಗೆ ಮಾತನಾಡಿ ಆ ಸಮಸ್ಯೆಯನ್ನು ಬಗೆಹರಿಸಬೇಕು. ಈ ಮೂಲಕ ರೈತರು ನೆಮ್ಮದಿಯಿಂದ ಮನೆಗೆ ತೆರಳುವಂತೆ ಆಗಬೇಕು," ಎಂದು ಆಗ್ರಹ ಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications