ವರ್ಕ್ ಫ್ರಂ ಹೋಮ್ ಮುಂದುವರಿಸಲು 75% ಉದ್ಯೋಗಿಗಳ ಒಲವು: ಸಮೀಕ್ಷೆ
ನವದೆಹಲಿ, ಸೆಪ್ಟೆಂಬರ್ 23: ಕೊರೊನಾ ವೈರಸ್ ಸೋಂಕು ದೇಶದೆಲ್ಲೆಡೆ ಹರಡುತ್ತಿದ್ದಂತೆಯೇ ಬಹುತೇಕ ಖಾಸಗಿ ಸಂಸ್ಥೆಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಿವೆ. ಕೆಲವು ಕಂಪೆನಿಗಳು ಈಗ ಕಚೇರಿಗಳನ್ನು ತೆರೆಯುತ್ತಿವೆ. ಕೆಲವು ಮಂದಿಗೆ ಮನೆಯಿಂದಲೇ ಕೆಲಸ ಮಾಡಲು ಅನುಮತಿ ನೀಡುತ್ತಿವೆ. ಈ ಸೌಲಭ್ಯ ಬಳಸಿಕೊಂಡ ಬೇರೆ ಬೇರೆ ಊರಿನ ಜನರು ತಮ್ಮ ಮನೆಗಳಿಗೆ ತೆರಳಿ ಕುಟುಂಬದವರೊಂದಿಗೆ ಕಾಲ ಕಳೆಯುತ್ತಲೇ ಕೆಲಸ ಮಾಡುವ ಅಪೂರ್ವ ಅವಕಾಶ ಸಿಗುತ್ತಿದೆ. ಇದರಿಂದ ಹೆಚ್ಚಿನ ಜನರು ಈ ಆರೇಳು ತಿಂಗಳಿನಿಂದ ವರ್ಕ್ ಫ್ರಂ ಹೋಮ್ ಚಟುವಟಿಕೆಗೆ ಒಗ್ಗಿಕೊಂಡಿದ್ದಾರೆ.
ಕೊರೊನಾ ವೈರಸ್ ಪಿಡುಗು ನಿವಾರಣೆಯಾದ ಬಳಿಕವೂ ವರ್ಕ್ ಫ್ರಂ ಹೋಮ್ ಮುಂದುವರಿಸುವುದಕ್ಕೆ ಹೆಚ್ಚಿನ ಭಾರತೀಯರು ಆಸಕ್ತಿ ಹೊಂದಿದ್ದಾರೆ ಎಂದು ಕೈಗಾರಿಕಾ ಸಂಸ್ಥೆ ಅಸೋಚಾಮ್ ದೇಶದಾದ್ಯಂತ ನಡೆಸಿದ ಸಮೀಕ್ಷೆ ಹೇಳಿದೆ.
ಲಾಕ್ಡೌನ್ ಅವಧಿ ಮುಗಿದ ನಂತರವೂ ವರ್ಕ್ ಫ್ರಂ ಹೋಮ್ ವ್ಯವಸ್ಥೆಯಲ್ಲಿಯೇ ಮುಂದುವರಿಸಲು ಶೇ 74ರಷ್ಟು ಮಂದಿ ಬಯಸುತ್ತಿದ್ದಾರೆ ಎಂದು ದೇಶದ ಪ್ರಮುಖ ಎಂಟು ನಗರಗಳಲ್ಲಿ ಪ್ರೈಮಸ್ ಪಾರ್ಟ್ನರ್ಸ್ ನಡೆಸಿದ ಉದ್ಯಮ ವಲಯದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಮುಂದೆ ಓದಿ.

ಕಂಪೆನಿಗಳಿಗೆ ಹೆಚ್ಚು ಲಾಭ
ಬೆಂಗಳೂರು, ದೆಹಲಿ, ಚೆನ್ನೈ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ ಮತ್ತು ಅಹ್ಮದಾಬಾದ್ ನಗರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. ವರ್ಕ್ ಫ್ರಂ ಹೋಮ್ ಮಾಡಲು ಉದ್ಯೋಗಿಗಳಿಗೆ ಅವಕಾಶ ನೀಡುವುದರಿಂದ ಕಂಪೆನಿಗಳು ಹೆಚ್ಚಿನ ಪ್ರಯೋಜನಗಳನ್ನು ಕಂಡುಕೊಂಡಿವೆ ಎಂದು ಸಮೀಕ್ಷೆ ಹೇಳಿದೆ. ಸಾರಿಗೆ, ಕಚೇರಿ ಬಾಡಿಗೆ, ನಿರ್ವಹಣೆ ಮುಂತಾದ ವೆಚ್ಚಗಳಲ್ಲಿ ಕಡಿತವಾಗಿವೆ.

ಸಾರ್ವಜನಿಕ ಸಾರಿಗೆ ಬಳಸಲು ಭಯ
ಕೊರೊನಾ ವೈರಸ್ ಸಂಪೂರ್ಣವಾಗಿ ನಿವಾರಣೆಯಾದ ಬಳಿಕವೂ ವರ್ಕ್ ಫ್ರಂ ಹೋಮ್ ಮುಂದುವರಿಸಲು ಶೇ 74ರಷ್ಟು ಉದ್ಯೋಗಿಗಳು ಬಯಸಿದ್ದಾರೆ. ಇದಕ್ಕೆ ಸಾರ್ವಜನಿಕ ಸಾರಿಗೆ ಕುರಿತಾದ ವಿಶ್ವಾಸದ ಕೊರತೆ ಅತಿ ದೊಡ್ಡ ಕಾರಣ. ಕೆಲವು ರಾಜ್ಯಗಳಲ್ಲಿ ಬಸ್, ಮೆಟ್ರೋ ರೈಲುಗಳ ಸಂಚಾರ ಪುನರಾರಂಭವಾಗಿದ್ದರೂ ಅವುಗಳನ್ನು ಬಳಸುವುದು ಅಪಾಯಕಾರಿ ಎನ್ನುವುದು ಹೆಚ್ಚಿನವರ ಅಭಿಪ್ರಾಯ.

ಸ್ವಂತ ವಾಹನ ಬಳಕೆಗೆ ಒಲವು
ಮುಂದೆ ಕಚೇರಿಗೆ ಹೋಗಬೇಕಾದರೆ ತಮ್ಮ ಸ್ವಂತ ದ್ವಿಚಕ್ರ ವಾಹನ ಅಥವಾ ಕಾರ್ ಬಳಸುವುದಾಗಿ ಶೇ 73ರಷ್ಟು ಮಂದಿ ತಿಳಿಸಿದ್ದಾರೆ. ಶೇ 21ರಷ್ಟು ಮಂದಿ ಮಾತ್ರ ಸಾರ್ವಜನಿಕ ಸಾರಿಗೆ ಬಳಸುವುದನ್ನು ಮುಂದುವರಿಸಲು ಆಸಕ್ತಿ ಹೊಂದಿದ್ದಾರೆ. ಜುಲೈ 2020ರ ವೇಳೆಗೆ ಪ್ರಯಾಣಿಕ ಕಾರುಗಳ ಮಾರಾಟದಲ್ಲಿ ಏರಿಕೆಯಾಗಿದ್ದು, 1.97 ಲಕ್ಷ ಕಾರುಗಳ ಮಾರಾಟವಾಗಿರುವುದು ಇದಕ್ಕೆ ಸಾಕ್ಷಿ.
Recommended Video

ತಂತ್ರಜ್ಞಾನ ಸವಲತ್ತು, ಸವಾಲು
'ತಂತ್ರಜ್ಞಾನವು ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ಸುಲಭಗೊಳಿಸಿದೆ. ಇದು ಹೇಗೆ ಯಶಸ್ವಿಯಾಗುತ್ತಿದೆ ಎಂಬುದನ್ನು ಈಗಲೇ ಅಂದಾಜಿಸಲು ಸಾಧ್ಯವಿಲ್ಲ. ದೂರ ಊರುಗಳಿಂದ ಕೆಲಸ ಮಾಡುವುದು ಅದರದೇ ಅವಕಾಶಗಳ ಹಾಗೂ ಸವಾಲುಗಳನ್ನು ಹೊಂದಿರುತ್ತದೆ. ಈ ವ್ಯವಸ್ಥೆಗೆ ನಾವು ಬೇಗನೆ ಹೊಂದಿಕೊಳ್ಳಬೇಕಿದೆ' ಎಂದು ಅಸೋಚಾಮ್ ಪ್ರಧಾನ ಕಾರ್ಯದರ್ಶಿ ದೀಪಕ್ ಸೂದ್ ಹೇಳಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications