ವರ್ಕ್ ಫ್ರಂ ಹೋಮ್ ಮುಂದುವರಿಸಲು 75% ಉದ್ಯೋಗಿಗಳ ಒಲವು: ಸಮೀಕ್ಷೆ
ನವದೆಹಲಿ, ಸೆಪ್ಟೆಂಬರ್ 23: ಕೊರೊನಾ ವೈರಸ್ ಸೋಂಕು ದೇಶದೆಲ್ಲೆಡೆ ಹರಡುತ್ತಿದ್ದಂತೆಯೇ ಬಹುತೇಕ ಖಾಸಗಿ ಸಂಸ್ಥೆಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಿವೆ. ಕೆಲವು ಕಂಪೆನಿಗಳು ಈಗ ಕಚೇರಿಗಳನ್ನು ತೆರೆಯುತ್ತಿವೆ. ಕೆಲವು ಮಂದಿಗೆ ಮನೆಯಿಂದಲೇ ಕೆಲಸ ಮಾಡಲು ಅನುಮತಿ ನೀಡುತ್ತಿವೆ. ಈ ಸೌಲಭ್ಯ ಬಳಸಿಕೊಂಡ ಬೇರೆ ಬೇರೆ ಊರಿನ ಜನರು ತಮ್ಮ ಮನೆಗಳಿಗೆ ತೆರಳಿ ಕುಟುಂಬದವರೊಂದಿಗೆ ಕಾಲ ಕಳೆಯುತ್ತಲೇ ಕೆಲಸ ಮಾಡುವ ಅಪೂರ್ವ ಅವಕಾಶ ಸಿಗುತ್ತಿದೆ. ಇದರಿಂದ ಹೆಚ್ಚಿನ ಜನರು ಈ ಆರೇಳು ತಿಂಗಳಿನಿಂದ ವರ್ಕ್ ಫ್ರಂ ಹೋಮ್ ಚಟುವಟಿಕೆಗೆ ಒಗ್ಗಿಕೊಂಡಿದ್ದಾರೆ.
ಕೊರೊನಾ ವೈರಸ್ ಪಿಡುಗು ನಿವಾರಣೆಯಾದ ಬಳಿಕವೂ ವರ್ಕ್ ಫ್ರಂ ಹೋಮ್ ಮುಂದುವರಿಸುವುದಕ್ಕೆ ಹೆಚ್ಚಿನ ಭಾರತೀಯರು ಆಸಕ್ತಿ ಹೊಂದಿದ್ದಾರೆ ಎಂದು ಕೈಗಾರಿಕಾ ಸಂಸ್ಥೆ ಅಸೋಚಾಮ್ ದೇಶದಾದ್ಯಂತ ನಡೆಸಿದ ಸಮೀಕ್ಷೆ ಹೇಳಿದೆ.
ಲಾಕ್ಡೌನ್ ಅವಧಿ ಮುಗಿದ ನಂತರವೂ ವರ್ಕ್ ಫ್ರಂ ಹೋಮ್ ವ್ಯವಸ್ಥೆಯಲ್ಲಿಯೇ ಮುಂದುವರಿಸಲು ಶೇ 74ರಷ್ಟು ಮಂದಿ ಬಯಸುತ್ತಿದ್ದಾರೆ ಎಂದು ದೇಶದ ಪ್ರಮುಖ ಎಂಟು ನಗರಗಳಲ್ಲಿ ಪ್ರೈಮಸ್ ಪಾರ್ಟ್ನರ್ಸ್ ನಡೆಸಿದ ಉದ್ಯಮ ವಲಯದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಮುಂದೆ ಓದಿ.

ಕಂಪೆನಿಗಳಿಗೆ ಹೆಚ್ಚು ಲಾಭ
ಬೆಂಗಳೂರು, ದೆಹಲಿ, ಚೆನ್ನೈ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ ಮತ್ತು ಅಹ್ಮದಾಬಾದ್ ನಗರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. ವರ್ಕ್ ಫ್ರಂ ಹೋಮ್ ಮಾಡಲು ಉದ್ಯೋಗಿಗಳಿಗೆ ಅವಕಾಶ ನೀಡುವುದರಿಂದ ಕಂಪೆನಿಗಳು ಹೆಚ್ಚಿನ ಪ್ರಯೋಜನಗಳನ್ನು ಕಂಡುಕೊಂಡಿವೆ ಎಂದು ಸಮೀಕ್ಷೆ ಹೇಳಿದೆ. ಸಾರಿಗೆ, ಕಚೇರಿ ಬಾಡಿಗೆ, ನಿರ್ವಹಣೆ ಮುಂತಾದ ವೆಚ್ಚಗಳಲ್ಲಿ ಕಡಿತವಾಗಿವೆ.

ಸಾರ್ವಜನಿಕ ಸಾರಿಗೆ ಬಳಸಲು ಭಯ
ಕೊರೊನಾ ವೈರಸ್ ಸಂಪೂರ್ಣವಾಗಿ ನಿವಾರಣೆಯಾದ ಬಳಿಕವೂ ವರ್ಕ್ ಫ್ರಂ ಹೋಮ್ ಮುಂದುವರಿಸಲು ಶೇ 74ರಷ್ಟು ಉದ್ಯೋಗಿಗಳು ಬಯಸಿದ್ದಾರೆ. ಇದಕ್ಕೆ ಸಾರ್ವಜನಿಕ ಸಾರಿಗೆ ಕುರಿತಾದ ವಿಶ್ವಾಸದ ಕೊರತೆ ಅತಿ ದೊಡ್ಡ ಕಾರಣ. ಕೆಲವು ರಾಜ್ಯಗಳಲ್ಲಿ ಬಸ್, ಮೆಟ್ರೋ ರೈಲುಗಳ ಸಂಚಾರ ಪುನರಾರಂಭವಾಗಿದ್ದರೂ ಅವುಗಳನ್ನು ಬಳಸುವುದು ಅಪಾಯಕಾರಿ ಎನ್ನುವುದು ಹೆಚ್ಚಿನವರ ಅಭಿಪ್ರಾಯ.

ಸ್ವಂತ ವಾಹನ ಬಳಕೆಗೆ ಒಲವು
ಮುಂದೆ ಕಚೇರಿಗೆ ಹೋಗಬೇಕಾದರೆ ತಮ್ಮ ಸ್ವಂತ ದ್ವಿಚಕ್ರ ವಾಹನ ಅಥವಾ ಕಾರ್ ಬಳಸುವುದಾಗಿ ಶೇ 73ರಷ್ಟು ಮಂದಿ ತಿಳಿಸಿದ್ದಾರೆ. ಶೇ 21ರಷ್ಟು ಮಂದಿ ಮಾತ್ರ ಸಾರ್ವಜನಿಕ ಸಾರಿಗೆ ಬಳಸುವುದನ್ನು ಮುಂದುವರಿಸಲು ಆಸಕ್ತಿ ಹೊಂದಿದ್ದಾರೆ. ಜುಲೈ 2020ರ ವೇಳೆಗೆ ಪ್ರಯಾಣಿಕ ಕಾರುಗಳ ಮಾರಾಟದಲ್ಲಿ ಏರಿಕೆಯಾಗಿದ್ದು, 1.97 ಲಕ್ಷ ಕಾರುಗಳ ಮಾರಾಟವಾಗಿರುವುದು ಇದಕ್ಕೆ ಸಾಕ್ಷಿ.
Recommended Video

ತಂತ್ರಜ್ಞಾನ ಸವಲತ್ತು, ಸವಾಲು
'ತಂತ್ರಜ್ಞಾನವು ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ಸುಲಭಗೊಳಿಸಿದೆ. ಇದು ಹೇಗೆ ಯಶಸ್ವಿಯಾಗುತ್ತಿದೆ ಎಂಬುದನ್ನು ಈಗಲೇ ಅಂದಾಜಿಸಲು ಸಾಧ್ಯವಿಲ್ಲ. ದೂರ ಊರುಗಳಿಂದ ಕೆಲಸ ಮಾಡುವುದು ಅದರದೇ ಅವಕಾಶಗಳ ಹಾಗೂ ಸವಾಲುಗಳನ್ನು ಹೊಂದಿರುತ್ತದೆ. ಈ ವ್ಯವಸ್ಥೆಗೆ ನಾವು ಬೇಗನೆ ಹೊಂದಿಕೊಳ್ಳಬೇಕಿದೆ' ಎಂದು ಅಸೋಚಾಮ್ ಪ್ರಧಾನ ಕಾರ್ಯದರ್ಶಿ ದೀಪಕ್ ಸೂದ್ ಹೇಳಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications