ಭೂಮಿ ಜಸ್ಟ್ ಮಿಸ್! ಕೂದಲೆಳೆ ಅಂತರದಲ್ಲಿ ದೂರವಾಯ್ತು ಮಹಾ ಕಂಟಕ!
ಭೂಮಿಗೆ ಎದುರಾಗಿದ್ದ ಕಂಟಕ ಕೂದಲೆಳೆ ಅಂತರದಲ್ಲಿ ದೂರವಾಗಿದೆ. '2001- F032' ಹೆಸರಿನ ಕ್ಷುದ್ರಗ್ರಹ ಭೂಮಿಯಿಂದ ಕೂದಲೆಳೆ ಅಂತರದಲ್ಲಿ ಹಾದು ಹೋಗಿದೆ. ವಿಜ್ಞಾನಿಗಳು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಮತ್ತೆ ಇದೇ ಕ್ಷುದ್ರಗ್ರಹ 2029ರಲ್ಲಿ ಭೂಮಿಗೆ ಸಮೀಪದಲ್ಲೇ ಹಾದು ಹೋಗಲಿದ್ದು ಆಗ ಭೂಮಿಗೆ ಕ್ಷುದ್ರಗ್ರಹ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
440 ರಿಂದ 680 ಮೀಟರ್ ದೊಡ್ಡದಾದ ಬೃಹತ್ ಬಂಡೆ ಇದು. ಈ ಬಂಡೆಯನ್ನ ನೋಡಲು ಜಗತ್ತಿನ ಸಾವಿರಾರು ಟೆಲಿಸ್ಕೋಪ್ಗಳು ಬಾಹ್ಯಾಕಾಶದತ್ತ ತಿರುಗಿದ್ದವು. ಆದರೆ ಜಸ್ಟ್ ಮಿಸ್ ಎಂಬಂತೆ, ಕೆಲವೇ ಮಿಲಿಯನ್ ಕಿಲೋಮೀಟರ್ ಅಂತರದಲ್ಲಿ ಈ ಕ್ಷುದ್ರಗ್ರಹ ಭೂಮಿ ಸಮೀಪದಲ್ಲೇ ಹಾದು ಹೋಗಿದೆ.
ಸೂರ್ಯನ ಸುತ್ತ ರೌಂಡ್ ಹಾಕಲು 810 ಭೂ ದಿನಗಳನ್ನ '2001- F032' ಕ್ಷುದ್ರಗ್ರಹ ತೆಗೆದುಕೊಳ್ಳುತ್ತದೆ. ಕ್ಷುದ್ರಗ್ರಹದ ವೇಗ ಗಂಟೆಗೆ 1 ಲಕ್ಷ 24 ಸಾವಿರ ಕಿಲೋಮೀಟರ್. ಹೀಗಾಗಿ ಕ್ಷುದ್ರಗ್ರಹ ಮಾನವನಿಗೆ ಭಯ ಹುಟ್ಟಿಸಿತ್ತು, ಆದರೆ ಆ ಭಯ ಸದ್ಯಕ್ಕೆ ಮಾಯವಾಗಿದೆ. ಆದರೆ ಈಗ 2029ರ ಪ್ರಳಯಕ್ಕೆ ಸಿದ್ಧವಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಮಾನವರಿಗೆ 20 ವರ್ಷಗಳ ಪರಿಚಯ..!
ಅಂದಹಾಗೆ ಮಾರ್ಚ್ 21ರಂದು ಭೂಮಿ ಸಮೀಪ ಹಾದು ಹೋಗಿರುವ ಈ ಕ್ಷುದ್ರಗ್ರಹ ಮೊದಲಿಗೆ ಪತ್ತೆ ಆಗಿದ್ದು 20 ವರ್ಷಗಳ ಹಿಂದೆ. ಇದೇ ಕಾರಣಕ್ಕೆ ಈ ಕ್ಷುದ್ರಗ್ರಹಕ್ಕೆ '2001- F032' ಎಂದು ನಾಮಕರಣ ಮಾಡಲಾಗಿತ್ತು. 2001ರಲ್ಲಿ ಇದೇ ಕ್ಷುದ್ರಗ್ರಹ ಭೂಮಿಗೆ ಸಮೀಪದಲ್ಲೇ ಅಂದರೆ ಮೆಕ್ಸಿಕೋ ದೇಶದ ಬಳಿ ಹಾದು ಹೋಗಿತ್ತು. ಈ ಬಾರಿ ಕೂಡ ಭೂಮಿಗೆ ಅತ್ಯಂತ ಸಮೀಪದಲ್ಲೇ ವಕ್ಕರಿಸಿ ಭಾರಿ ಆತಂಕ ಸೃಷ್ಟಿಸಿತ್ತು. ಕಳೆದ ಕೆಲವು ದಿನಗಳಿಂದ ವಿಜ್ಞಾನಿಗಳು ಇದೊಂದೇ ಆಲೋಚನೆಯಲ್ಲಿ ಮುಳುಗಿದ್ದರು. ಆದರೆ ಆತಂಕದ ಕಾರ್ಮೋಡ ಈಗ ದೂರವಾಗಿದೆ.

ವಿಜ್ಞಾನಿಗಳ ಪಾಲಿಗೆ ಮಹತ್ವದ ದಿನ..!
ಒಂದು ಕಡೆ ಆತಂಕ, ಮತ್ತೊಂದು ಕಡೆ ಕುತೂಹಲ. ಹೀಗೆ ಎರಡನ್ನೂ ಸೃಷ್ಟಿಸಿದೆ 2001- F032 ಕ್ಷುದ್ರಗ್ರಹ. ಭೂಮಿಗೆ ಸಮೀಪದಲ್ಲಿ ಕ್ಷುದ್ರಗ್ರಹ ಹಾದು ಹೋಗುವ ಹಿನ್ನೆಲೆಯಲ್ಲಿ ಬಾಹ್ಯಾಕಾಶ ವಿಜ್ಞಾನಿಗಳು ಹಲವಾರು ಮಹತ್ವದ ಸಂಶೋಧನೆಗೆ ತಯಾರಿ ನಡೆಸಿದ್ದಾರೆ. ನಾಸಾ ವಿಜ್ಞಾನಿಗಳು ನಿದ್ದೆಯನ್ನೇ ಮರೆತು 2001- F032 ಕ್ಷುದ್ರಗ್ರಹ ಬರುವಿಕೆಗೆ ಕಾಯುತ್ತಿದ್ದಾರೆ. ಭೂಮಿಗೆ ಸಮೀಪದಲ್ಲಿ ಸಾಗುವ ಹಿನ್ನೆಲೆಯಲ್ಲಿ ಅದರ ರಚನೆ ಮತ್ತು ಭೂಮಿ ಮೇಲೆ ಕ್ಷುದ್ರಗ್ರಹಗಳ ನಿಖರ ಪರಿಣಾಮ ತಿಳಿಯಬಹುದಾಗಿದೆ. ಅಷ್ಟೇ ಅಲ್ಲ ಭವಿಷ್ಯದಲ್ಲಿ ಗಣಿಗಾರಿಕೆ ನಡೆಸಲು ಇದೇ ಕ್ಷುದ್ರಗ್ರಹಗಳನ್ನ ಬಳಸಿಕೊಳ್ಳಲು ಸಹಾಯಕವಾಗಲಿದೆ.

ಕ್ಷುದ್ರಗ್ರಹ ಸಿಕ್ಕರೆ ಫುಲ್ ರಿಚ್..!
ಕ್ಷುದ್ರಗ್ರಹ ಕೇವಲ ಬಂಡೆಯ ತುಣುಕಲ್ಲ ಬದಲಾಗಿ ಕ್ಷುದ್ರಗ್ರಹ ಅಪಾರ ಪ್ರಮಾಣದ ಸಂಪತ್ತು ಹೊಂದಿರುತ್ತೆ. ಈ ರೀತಿ ಕ್ಷುದ್ರಗ್ರಹದ ಮೇಲೆ ಮೈನಿಂಗ್ ಮಾಡುವ ಆಲೋಚನೆ ಕೂಡ ಮಾನವರಲ್ಲಿ ಇದ್ದು, ಈಗಾಗಲೇ ಕ್ಷುದ್ರಗ್ರಹ ಗಣಿಗಾರಿಕೆಗೆ ಹಲವು ಪ್ರಯತ್ನಗಳು ಸಾಗಿವೆ. ಕೆಲವು ದೇಶಗಳು ಅದರಲ್ಲಿ ಯಶಸ್ಸು ಕಾಣುತ್ತಿವೆ. ಹೀಗಾಗಿ ಕ್ಷುದ್ರಗ್ರಹ ಅಧ್ಯಯನಕ್ಕೆ ಶ್ರೀಮಂತ ರಾಷ್ಟ್ರಗಳು ಒಂದೊಂದು ದೊಡ್ಡ ವಿಜ್ಞಾನಿಗಳ ತಂಡ ರಚಿಸಿ, ಬಾಹ್ಯಾಕಾಶದಲ್ಲಿ ಇಣುಕಿ ನೋಡುತ್ತಿದ್ದಾರೆ. ಅದರಲ್ಲೂ ಮಂಗಳ ಹಾಗೂ ಗುರು ಗ್ರಹದ ಮಧ್ಯೆ ಇರುವಂತಹ ಕ್ಷುದ್ರಗ್ರಹ ಹೊನಲು ಅಥವಾ ಕ್ಷುದ್ರಗ್ರಹ ಸಾಲಿನಲ್ಲಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ವಜ್ರ ಅಡಗಿದೆ.

ಊಹೆಗೂ ನಿಲುಕದಷ್ಟು ಸಂಪತ್ತು..!
ಅಕಸ್ಮಾತ್ ಕ್ಷುದ್ರಗ್ರಹಗಳ ಮೇಲೆ ಮೈನಿಂಗ್ ಸಾಧ್ಯವಾದರೆ ಈವರೆಗೂ ಮನುಕುಲ ಕಾಣದಷ್ಟು ಪ್ರಮಾಣದ ಸಂಪತ್ತು ಭೂಮಿಗೆ ಬರಲಿದೆ. ಭೂಮಿಯ ಅಕ್ಕಪಕ್ಕದ ಕ್ಷುದ್ರಗ್ರಹಗಳ ಮೂಲಕ ಮೈನಿಂಗ್ ಮಾಡಿ, ಭೂಮಿ ಮೇಲೆ ನಡೆಯುವಂತೆ ವ್ಯಾಪಾರ ವಹಿವಾಟು ನಡೆಸಬಹುದು. ಆದರೆ ಈ ಅವಕಾಶ ಖಾಸಗಿ ಕಂಪನಿಗಳಿಗೆ ಸಿಕ್ಕರೆ ವ್ಯತಿರಿಕ್ತ ಪರಿಣಾಮ ಎದುರಾಗುತ್ತದೆ ಎಂಬುದು ಹಿರಿಯ ವಿಜ್ಞಾನಿಗಳ ಆಕ್ಷೇಪ. ಆದರೂ ಜಗತ್ತಿನ ಬಹುಪಾಲು ದೇಶಗಳು ಬಾಹ್ಯಾಕಾಶವನ್ನೂ ಖಾಸಗೀಕರಣ ಮಾಡಲು ಹೊರಟಿವೆ. ಖಾಸಗಿ ಕಂಪನಿಗಳಿಂದ ಮೈನಿಂಗ್ ಮಾಡಿಸಲು ಪ್ರೋತ್ಸಾಹ ನೀಡುತ್ತಿವೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications