ಕೊರೊನಾ ಕಾಲದಲ್ಲಿ ಬಸವೇಶ್ವರ ಜಯಂತಿ, ವಚನ ಸ್ಮರಣೆ
ಭಾರತದ 12ನೇ ಶತಮಾನದಲ್ಲಿ ಲೋಕಕಲ್ಯಾಣಕ್ಕಾಗಿ ಜನಿಸಿ ಕಾರ್ಯನಿರ್ವಹಿಸಿದ ನಮ್ಮ ಕರ್ನಾಟಕದ ವಿದ್ವಾಂಸರು, ಸಾಮಾಜಿಕ ಸುಧಾರಕರು, ತತ್ವಜ್ಞಾನಿಗಳಾದ ಶ್ರೀ ಬಸವೇಶ್ವರ ರವರು ಕ್ರಿ. ಶ 1134ರಲ್ಲಿ ವಿಜಯಪೂರು ಜಿಲ್ಲೆಯ ಬಾಗೆವಾಡಿಯಲ್ಲಿ ಬ್ರಾಹ್ಮಣ ದಂಪತಿಗಳಾದ ಮಾದರಸ -ಮಾದಲಾಂಬಿಕೆಯರ ಮಗನಾಗಿ ಹುಟ್ಟಿದರು.ಇವರು ಸುಮಾರು 22000 ವಚನಗಳನ್ನು ರಚಿಸಿದ್ದಾರೆ ಇವರ ವಚನಗಳ ಪ್ರೇರಣೆಯಿಂದ ಎಷ್ಟೋ ಯುವಜನರು ಇವರ ಹಾಗೆ ಕವಿಗಳಾಗಿ ಹೆಣ್ಣುಮಕ್ಕಳು ಕವಯತ್ರಿಗಳಾಗಿ ಹೊರಹೊಮ್ಮಿದರು.
ಇವರ ವಚನಗಳ ಪ್ರಭಾವದಿಂದ ಸಮಾಜದಲ್ಲಿನ ಜನರು ಲಿಂಗ ಭೇದಭಾವ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿ ಎಲ್ಲರೂ ಒಂದೇ ಎನ್ನುವ ಮನೋಭಾವನೆಯಲ್ಲಿ ಬದುಕು ಕಟ್ಟಿಕೊಂಡರು. ಬಸವಣ್ಣನವರ ಪ್ರಾಮುಖ್ಯತೆ, ವೈಶಿಷ್ಟತೆ ಹಾಗು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳು ಅಪಾರವಾಗಿದೆ. ಆಧ್ಯಾತ್ಮಿಕವಾಗಿ ಪ್ರತಿಯೊಬ್ಬರಲ್ಲೂ ಲಿಂಗಪೂಜೆಯ ಮಹತ್ವ ಹಾಗು ಲಿಂಗಧಾರಣೆಯ ಮಹತ್ವವನ್ನು ಪ್ರತ್ಯೇಕಿಸಿದ್ದಾರೆ.
ಇಂದಿನ ಈ ಕೊರೊನಾ ಮಹಾಮಾರಿಯ ದುಸ್ಥಿತಿಯಲ್ಲಿ ನಮ್ಮ ಬಸವಣ್ಣವರ ವಚನಗಳು ನಮಗೆ ತುಂಬಾ ಅವಲೋಕಿಸುತ್ತವೆ. ನಾವು ಮಾಡುವ ಪ್ರತಿಯೊಂದು ಕಾಯಕವು ನಮ್ಮನ್ನು ಪ್ರತಿಬಿಂಬಿಸುತ್ತದೆ ಹಾಗೆಯೇ ಇಂದಿನ ಕೊರೋನಾ ಅಲೆಯಲ್ಲಿ ಜನರಿಗೆ ಎಷ್ಟೇ ಎಚ್ಚರಿಕೆಯ ಕ್ರಮಗಳನ್ನು ಜಾರಿಗೊಳಿಸಿದರೂ ಅವುಗಳನ್ನು ಅನುಸರಿಸದೆ ತಮ್ಮನ್ನು ತಾವೇ ದಹಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ.

'ಕರಿಘನ ಅಂಕುಶ ಕಿರಿದೆನ್ನಬಹುದೇ? ಬಾರದಯ್ಯಾ,
'ಗಿರಿಘನ ವಜ್ರ ಕಿರಿದೆನ್ನಬಹುದೇ? ಬಾರದಯ್ಯಾ,
ತಮ್ಮಂಥ ಘನ ಜ್ಯೋತಿ ಕಿರಿದೆನ್ನಬಹುದೇ? ಬಾರದಯ್ಯಾ,
ಮರಹು ಘನ ನಿಮ್ಮ ನೆನೆವ ಮನ ಕಿರಿದೆನ್ನಬಹುದೇ? ಬಾರದಯ್ಯಾ,
ಕೂಡಲಸಂಗಮದೇವಾ.
--
ಅಂಕುಶವು ಸಣ್ಣದಿದ್ದರೂ ಆನೆಯನ್ನು ಅಂಕಿತದಲ್ಲಿಡುತ್ತದೆ.
ವಜ್ರಾಯುಧವು ಸಣ್ಣದಿದ್ದರೂ ಪರ್ವತವನ್ನು ಸೀಳುತ್ತದೆ.
ದೀಪವು ಸಣ್ಣದಿದ್ದರೂ ಕಗ್ಗತ್ತಲೆಯನ್ನು ಓಡಿಸುತ್ತದೆ.
ನಿಮ್ಮ ಚಿಂತೆಯಲ್ಲಿ ಮಗ್ನವಾದ ಮನಸ್ಸು ಸಣ್ಣದಿದ್ದರೂ ನಿಮ್ಮ ಮರವಿನಿಂದ ಉಂಟಾದ ಮಹಾಮಾಯೆಯನ್ನು ಹೊಡೆದೋಡಿಸುತ್ತದೆ.
ಒಳ್ಳೆಯದೇ ಆಗಲಿ ಕೆಟ್ಟದೇ ಆಗಲಿ ಅದರ ಚಿಕ್ಕ ಪ್ರಯತ್ನ ದೊಡ್ಡ ಪರಿಣಾಮವು ಆಗಬಹುದು, ದೊಡ್ಡ ಪ್ರಯೋಜನಕಾರಿಯೂ ಆಗಬಹುದು. ಕೊರೋನಾ ಎಂಬ ಚಿಕ್ಕ ವೈರಾಣು ಇಡೀ ಮನುಷ್ಯ ದೇಹವನ್ನೇ ನುಸುಳಿ ದಹಿಸುತ್ತಿದೆ. ಇದನ್ನು ತಡೆಯಲು ನಮ್ಮ ಜನರು ಮಾಡಬೇಕಾದ ಚಿಕ್ಕ ಪ್ರಯತ್ನ ಎಂದರೆ ಮಾಸ್ಕ್ ಧರಿಸಿಕೊಳ್ಳುವುದು, ಅಂತರ ಕಾಪಾಡಿಕೊಳ್ಳುವುದು ಸ್ವಚ್ಚತೆಯಿಂದಿರುವುದು ಇಲ್ಲದಿದ್ದರೆ ಒಂದು ಸಣ್ಣ ಆಲಕ್ಷ್ಯತನಕ್ಕೆ ದೊಡ್ಡ ಪರಿಣಾಮ ಎದುರಿಸುವ ಪರಿಸ್ಥಿತಿ ಈಗಾಗಲೇ ಸಂಭವಿಸುತ್ತಿದೆ.
ಇನ್ನು ಇದರಲ್ಲಿ ಶ್ರೀಮಂತ ವರ್ಗದವರು ತಮಗೆ ಬೇಕಾದ ಚಿಕಿತ್ಸೆ ಸೌಲಭ್ಯಗಳನ್ನು ತೆಗೆದುಕೊಂಡರು ಬದುಕಲು ಅನರ್ಹರಾಗಿದ್ದಾರೆ ಇನ್ನು ಬಡವರ ಸ್ಥಿತಿ ಹೇಳತೀರದಾಗಿದೆ. ಬಸವಣ್ಣನವರ ವಚನಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರ ಹಿತನುಡಿಗಳನ್ನು ಅನುಸರಿಸಿಕೊಂಡು ಬಾಳೋಣ... ಹಾಗೂ ಎಲ್ಲರಿಗೂ ಬಸವೇಶ್ವರ ಜಯಂತಿಯ ಹಾರ್ದಿಕ ಶುಭಾಶಯಗಳು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications