ಆಗ ಶಾಲಾ ಶಿಕ್ಷಕ, ಈಗ ಬಸವಕಲ್ಯಾಣದ ಬಿಜೆಪಿ ಶಾಸಕ!
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿಯ ಶರಣು ಸಲಗರ ಮೊದಲ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದಾರೆ. 2018ರಲ್ಲಿ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಬಾವುಟ ಹಾರಿಸಿದ್ದಾರೆ.
ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಶರಣು ಸಲಗರ್ ಹಿನ್ನಡೆ ನೋಡಿದರೆ ಕನಸು, ಛಲ, ಹಠ, ಮಹತ್ವಾಕಾಂಕ್ಷೆಗಳು ಕಾಣುತ್ತವೆ. ಶಾಲಾ ಶಿಕ್ಷಕರಾಗಿದ್ದ ಅವರು ಈಗ ಶಾಸಕರಾಗಿದ್ದಾರೆ.
ಹೈಸ್ಕೂಲ್ ಶಿಕ್ಷಕರಾಗಿದ್ದ ಶರಣು ಸಲಗರ್ ವಿಧಾನಸಭೆ ಪ್ರವೇಶ ಮಾಡಿದ್ದೇ ಒಂದು ರೋಚಕ ಕಥೆ. ಬಿಎಸ್ಸಿ-ಬಿಎಡ್ ಪದವೀಧರರಾಗಿದ್ದ ಸಲಗರ್ ಹೆಚ್ಚು ಕಾಲ ಪಾಠ ಮಾಡಿಲ್ಲ. ರಾಜಕೀಯದ ತುಮುಲ ಅವರನ್ನು ಶಿಕ್ಷಕ ವೃತ್ತಿಗೆ ರಾಜೀನಾಮೆ ಕೊಡುವಂತೆ ಮಾಡಿತು.
ಶರಣು ಸಲಗರ ಅವರು ಬೀದರ್ ಜಿಲ್ಲೆಯವರಲ್ಲ. ಅವರ ಸ್ವಂತ ಊರು ಕಲಬುರಗಿ ಜಿಲ್ಲೆಯ ಈಗಿನ ಕಮಲಾಪುರ ತಾಲೂಕಿನ ವಿಕೆ ಸಲಗರ್ ಗ್ರಾಮ. ಆದರೆ ಬಸವಕಲ್ಯಾಣ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ಗ್ರಾಮವಿದಾಗಿದೆ.

ಶಾಸಕರ ಪಿಎ ಆಗಿ ಕೆಲಸ ಮಾಡಿದ್ದಾರೆ
ಶರಣು ಸಲಗರ ಅವರು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಆಪ್ತ ಸಹಾಯಕರಾಗಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮಾಜಿ ಸಚಿವ ರೇವುನಾಯಕ ಬೆಳಮಗಿ, ಹಾಲಿ ಬಸವಕಲ್ಯಾಣ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶರಣು ಸಲಗರಗೆ ಮತ್ತಿಮೂಡ್ಗೆ ಗೆಲುವು ಸಿಕ್ಕ ಬಳಿಕ ರಾಜಕೀಯದ ಕನಸು ಕಾಣುವಂತೆ ಮಾಡಿತು.

2023ರ ಚುನಾವಣೆಗೆ ಸ್ಪರ್ಧೆಯ ಕನಸು
2-3 ವರ್ಷಗಳ ಹಿಂದೆ ಬಸವಕಲ್ಯಾಣಕ್ಕೆ ಆಗಮಿಸಿದ ಶರಣು ಸಲಗರ 2023ರ ವಿಧಾನಸಭೆ ಚುನಾವಣೆಗೆ ಕ್ಷೇತ್ರದಿಂದ ಸ್ಪರ್ಧಿಸುವ ಕನಸು ಹೊಂದಿದ್ದರು. ಆದರೆ ಕೋವಿಡ್ನಿಂದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅಕಾಲಿಕವಾಗಿ ನಿಧನ ಹೊಂದಿದ್ದರಿಂದ ಕ್ಷೇತ್ರದಲ್ಲಿ ಉಪ ಚುನಾವಣೆ ಎದುರಾಯಿತು. ಡಜನ್ಗೂ ಹೆಚ್ಚು ಜನ ಟಿಕೆಟ್ ಆಕಾಂಕ್ಷಿಗಳ ನಡುವೆ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಶರಣು ಸಲಗರ ಯಶಸ್ವಿಯಾದರು.

ಶಹಶೀಲ್ದಾರ್ ಆಗಿದ್ದ ಶಾಸಕರ ಪತ್ನಿ
ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದ ಶರಣು ಸಲಗರ ಕಳೆದ ವರ್ಷ ಕೋವಿಡ್ ಕಾಲದಲ್ಲಿ ಬಡವರಿಗೆ ನೆರವಿನ ಹಸ್ತ ಚಾಚಿದ್ದರು. ಶರಣು ಸಲಗರ ಅವರ ಪತ್ನಿ ಸಾವಿತ್ರಿ ಸಲಗರ ಬಸವಕಲ್ಯಾಣದ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಉಪಚುನಾವಣೆ ಘೋಷಣೆಯಾದ ಬಳಿಕ ವರ್ಗಾವಣೆಗೊಂಡಿದ್ದರು. ಕೆಎಎಸ್ ಅಧಿಕಾರಿಯಾಗಿರುವ ಸಾವಿತ್ರಿ ಸಲಗರ ತಹಶೀಲ್ದಾರ್ ಆಗಿದ್ದ ಕ್ಷೇತ್ರದಲ್ಲಿ ಈಗ ಪತಿ ಶರಣು ಸಲಗರ ಶಾಸಕರಾಗಿದ್ದಾರೆ.
Recommended Video

ಸಾಲು-ಸಾಲು ಸವಾಲುಗಳು
ಬಸವಕಲ್ಯಾಣ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಿಸುವ ಬಿ. ಎಸ್. ಯಡಿಯೂರಪ್ಪ ಭರವಸೆ ಹಾಗೇ ಇದೆ. ನೂತನ ತಾಲೂಕಾಗಿ ಘೋಷಣೆಯಾಗಿ ವರ್ಷಗಳೇ ಉರುಳುತ್ತಿವೆ. ಆದರೆ, ಹುಲಸೂರ್ ಕೇಂದ್ರವನ್ನು ಗ್ರಾಮ ಪಂಚಾಯತ್ ಕೇಂದ್ರದಿಂದ ಕನಿಷ್ಠ ಪಟ್ಟಣ ಪಂಚಾಯತ್ ದರ್ಜೆಗೂ ಮೇಲ್ದರ್ಗೇರಿಸಿಲ್ಲ. ಬಹುಪಾಲು ಕೃಷಿಕರೇ ಇರುವ ಬಸವಕಲ್ಯಾಣ ಹಾಗೂ ಹುಲಸೂರ್ ತಾಲೂಕುಗಳಲ್ಲಿ ನೀರಾವರಿ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ. ಚುಳಕಿನಾಲಾ ಯೋಜನೆ ಯಶಸ್ವಿಗೊಳಿಸಬೇಕಿದೆ. ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳ್ಳಬೇಕಿದ್ದ ಐತಿಹಾಸಿಕ ಬಸವಕಲ್ಯಾಣ ನಗರದಲ್ಲಿ ಮೊಟ್ಟ ಮೊದಲು ಮೂಲಭೂತ ಸೌಕರ್ಯ ಒದಗಿಸುವ ಕೆಲಸ ಮಾಡುವ ಜವಾಬ್ದಾರಿ ನೂತನ ಶಾಸಕರ ಮೇಲಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications