New Year celebration: ಹೊಸ ವರ್ಷಕ್ಕೆ ರಾತ್ರಿ ಎಷ್ಟರವರೆಗೆ ಹೋಟೆಲ್, ಬಾರ್-ರೆಸ್ಟೋರೆಂಟ್ ತೆರೆದಿರುತ್ತೆ?
ಹೊಸ ವರುಷ ಬರಮಾಡಿಕೊಳ್ಳಲು ಇನ್ನು ಐದೇ ದಿನ ಬಾಕಿ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಪೊಲೀಸರು ಕೂಡ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ತೊಂದರೆಯಾಗದಂತೆ ಅಲರ್ಟ್ ಆಗಿದ್ದಾರೆ. ಆದರೆ ಅಂದು ಪಾರ್ಟಿ ಮಾಡಲು ಬರುವವರಿಗೆ ಹೋಟೆಲ್, ರೆಸ್ಟೋರೆಂಟ್, ಪಬ್-ಬಾರ್ ಎಷ್ಟು ಸಮಯದವರೆಗೆ ತೆರೆದಿರುತ್ತದೆ ಎಂಬ ಗೊಂದಲವಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಈಗಾಗಲೇ ಹೊಸ ವರ್ಷಾಚರಣೆ ಸಂಬಂಧ ಪಾಲಿಸಬೇಕಾದ ಕೆಲವು ನಿಯಮಗಳ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಕೂಡ ಹೊರಡಿಸಲಾಗಿದೆ. ಅದರಂತೆ ಡಿಸೆಂಬರ್ 31ರಂದು ರಾತ್ರಿ ಎಷ್ಟು ಗಂಟೆಯವರೆಗೆ ಹೋಟೆಲ್ಗಳು, ಬಾರ್ ಹಾಗೂ ರೆಸ್ಟೋರೆಂಟ್ಗಳು ತೆರೆದಿರಬೇಕು ಎಂಬ ಬಗ್ಗೆಯೂ ಹೇಳಲಾಗಿದೆ. ಆದರೆ ಈ ಸಮಯವು ಪಾರ್ಟಿಗೆ ಸಾಕಾಗುವುದಿಲ್ಲ ಎಂಬ ಕೂಗು ಮೊದಲಿನಿಂದಲೂ ಇದೆ.

ಕೆಲವರು ರಾತ್ರಿಯಿಡೀ ಬಾರ್ ಹಾಗೂ ರೆಸ್ಟೋರೆಂಟ್ಗಳನ್ನು ತೆರೆಯಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ಇದಕ್ಕೆ ಪೊಲೀಸ್ ಇಲಾಖೆ ಬಿಲ್ಕುಲ್ ಒಪ್ಪುತ್ತಿಲ್ಲ. ಸದ್ಯ ಈಗಿರುವ ನಿಯಮಂದಂತೆ ಡಿಸೆಂಬರ್ 31ರಂದು ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರವೇ ಬೆಂಗಳೂರಿನಲ್ಲಿ ಎಲ್ಲ ಹೋಟೆಲ್, ಬಾರ್, ರೆಸ್ಟೋರೆಂಟ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
ಆದರೆ, ಇದರಿಂದ ಯಾವುದೇ ಪ್ರಯೋಜನವಿಲ್ಲ ಮಧ್ಯರಾತ್ರಿ 12 ಗಂಟೆಗೆ ಹೊಸ ವರ್ಷಾಚರಣೆ ಆಚರಿಸುತ್ತಾರೆ. ಇನ್ನು ಕೇವಲ ಒಂದೇ ಗಂಟೆಯಲ್ಲಿ ಪಾರ್ಟಿ ಮಾಡಲು ಹೇಗೆ ಸಾಧ್ಯ? ಎನ್ನುವುದು ಬೆಂಗಳೂರಿಗರ ವಾದ. ಆದರೆ, ರಾತ್ರಿಯಿಡೀ ಸೇವೆಗೆ ಅವಕಾಶ ಕಲ್ಪಿಸಿದರೆ ಅಹಿತಕರ ಘಟನೆಗಳು, ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆ ಎನ್ನುವುದು ಪೊಲೀಸ್ ಇಲಾಖೆ ನೀಡುವ ಕಾರಣ.
ಇದರಿಂದಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೂ ನಷ್ಟ ಎಂದು ಹೇಳಲಾಗುತ್ತಿದೆ. ವರ್ಷಕ್ಕೆ ಒಂದು ದಿನ ಬರುವ ಈ ಸಂಭ್ರಮಾಚರಣೆಗೆ ಅಡ್ಡಿ ಮಾಡುವುದು ಸರಿಯಲ್ಲ ಎಂದು ಹೇಳುತ್ತಲೇ ಇದ್ದಾರೆ. ಈ ಬಾರಿ ಸಮಯ ವಿಸ್ತರಿಸಿದರೆ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಸ್ವಲ್ಪ ಲಾಭ ಕಾಣಬಹುದು, ಇದರಿಂದ ತೆರಿಗೆ ರೂಪದಲ್ಲಿ ಸರ್ಕಾರಕ್ಕೂ ಲಾಭ ಎಂದು ವಾದ ಮಾಡುತ್ತಿದ್ದಾರೆ.

ಇದೀಗ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಕೂಡ ಡಿಸೆಂಬರ್ 31ರಂದು ಹಾಗೂ ಜನವರಿ 1ರಂದು ಮಧ್ಯರಾತ್ರಿ 2 ಗಂಟೆಯವರೆಗೆಯಾದರೂ ಎಲ್ಲ ಹೋಟೆಲ್, ಬಾರ್ ಹಾಗೂ ರೆಸ್ಟೋರೆಂಟ್ಗಳನ್ನು ತೆರೆಯಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಅಂದು ನಮ್ಮ ಸೇವೆ ಅವಧಿಯನ್ನು ವಿಸ್ತರಿಸಿದರೆ ತೆರಿಗೆಗಳಿಂದ ಸರ್ಕಾರಕ್ಕೆ ಆದಾಯವನ್ನು ಹೆಚ್ಚಿಸಲು ಸಹಾಯವಾಗುತ್ತದೆ. ಹೊಸ ವರ್ಷದ ಮುನ್ನಾ ದಿನವೇ ನಗರದಲ್ಲಿ ಸುಮಾರು 1000 ಕೋಟಿ ರೂಪಾಯಿವರೆಗೆ ಆದಾಯ ಬರುವ ನಿರೀಕ್ಷೆ ಇದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ.ರಾವ್ ಕೂಡ ಹೇಳಿದ್ದಾರೆ. ಆದರೆ ಈ ಮನವಿಯನ್ನು ಸರ್ಕಾರ ಒಪ್ಪುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ..ಸದ್ಯ ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಎಲ್ಲ ಹೋಟೆಲ್, ಬಾರ್, ರೆಸ್ಟೋರೆಂಟ್ ತೆರೆಯಲು ಅವಕಾಶವಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications