ಬೆಂಗಳೂರು ನಾಟಕೋತ್ಸವ: ಸೆ.13 & 14ಕ್ಕೆ 'ಲವ್ ಲೆಟರ್ಸ್: ನಿನ್ನ ಪ್ರೀತಿಯ ನಾನು' ಸೇರಿ 2 ನಾಟಕ ಪ್ರದರ್ಶನ
ಬೆಂಗಳೂರು, ಸೆಪ್ಟಂಬರ್ 12: ಬೆಂಗಳೂರಿನಲ್ಲಿ ನಾಟಕಪ್ರಿಯರಿಗೆ ಖುಷಿ ಸುದ್ದಿ ಇಲ್ಲೊಂದಿದೆ. ಇದೇ ವಾರಾಂತ್ಯದಲ್ಲಿ ಸೆಪ್ಟೆಂಬರ್ 13 ಮತ್ತು ಸೆಪ್ಟೆಂಬರ್ 14 ರಂದು 2 ದಿನಗಳ ನಾಟಕೋತ್ಸವದಲ್ಲಿ ಜೈರಂಗಂ ಎರಡು ಗಮನಾರ್ಹ ನಾಟಕಗಳನ್ನು ಪ್ರಸ್ತುತಪಡಿಸುತ್ತಿದೆ. ಬೆಂಗಳೂರಿನಲ್ಲಿರುವ ಕಲೆ ಮತ್ತು ಸಾಂಸ್ಕೃತಿಕ ಅಭಿಮಾನಿಗಳು ಒಂದೇ ಸೂರಿನಡಿ ಹೆಚ್ಚಿನ ಅಂಶಗಳನ್ನು ಪ್ರದರ್ಶಿಸುವ ನಾಟಕ ಕಾರ್ಯಕ್ರಮ ಇದಾಗಿದೆ.
'ಒಂದು ಹಿಂದಿ ಮಾರ್ವಾರಿ - ಕಂಕಡ್ ಮೋತಿ ಔರ್ ಕಿನ್ವಾಡ್' ಮತ್ತು 'ಲವ್ ಲೆಟರ್ಸ್: ನಿನ್ನ ಪ್ರೀತಿಯಾ ನಾನು' ಈ ಎರಡು ನಾಟಕಗಳನ್ನು ನೀವು ಕಣ್ತುಂಬಿಕೊಳ್ಳಬಹುದು. ಕಲಾವಿದರಿಂದ ಪ್ಯಾನಲ್ ಚರ್ಚೆ, ಅಜೀತ್ ಸಿಂಗ್ ಪಲಾವತ್ ಮತ್ತು ಇಪ್ಶಿತಾ ಚಕ್ರವರ್ತಿ ಸಿಂಗ್ ಅವರಿಂದ ನಟನಾ ಕಾರ್ಯಾಗಾರ, ನಟನೆಯ ಮೇಲಿನ ಭಾಷಾ ಪರಿಣಾಮಗಳು ಮತ್ತು ನಾಟಕೀಯ ಓದುವಿಕೆ ಇವುಗಳಿಂದ ನಾಟಕ ಸಮೃದ್ಧವಾಗಲಿದೆ.

ಈ ನಾಟಕ ಕಾರ್ಯಕ್ರಮದ ಟಿಕೆಟ್ಗಳು ಬುಕ್ ಮೈ ಶೋ ಮತ್ತು ದಿ ಕೋರಮಂಗಲ ಕ್ಲಬ್, ಸಿಎ-17, 6 ನೇ ಕ್ರಾಸ್ ರಸ್ತೆ, 6 ನೇ ಬ್ಲಾಕ್, ಕೋರಮಂಗಲ, ಬೆಂಗಳೂರು, ಕರ್ನಾಟಕ 560095 ನಲ್ಲಿ ಲಭ್ಯವಿರುತ್ತವೆ. ಈ ನಾಟಕವು ಬಾಲ್ಯದ ಮುಗ್ಧತೆ, ಯೌವನದ ತುಂಟಾಟ, ಪ್ರೌಢಾವಸ್ಥೆಯ ಏಳುಬೀಳುಗಳು. ಇವುಗಳ ಮಧ್ಯೆ ಮೂಡುವ ಗೆಳೆತನ, ಅರಳುವ ಪ್ರೀತಿ, ಕಾಡುವ ನೆನಪು, ಅಗಲಿಕೆ , ಸಂತಸ, ನೋವು..ಇವೆಲ್ಲವೂ ಕಥೆಯಲ್ಲಿವೆ.
'ಲವ್ ಲೆಟರ್ಸ್-ನಿನ್ನ ಪ್ರೀತಿಯ ನಾನು' ನಾಟಕದಲ್ಲಿ ಒಂದಿಡೀ ಜೀವನದ ಪಿಸುಮಾತುಗಳು, ಹಂಚಿಕೊಂಡ ಗುಟ್ಟುಗಳು, ಜೊತೆಗೆ ಕಂಡ ಕನಸುಗಳು, ಖುಷಿಯ ಚೀತ್ಕಾರದ ಜೊತೆಗೆ ದು:ಖದ ನಿಟ್ಟುಸಿರು. ದೂರವಿದ್ದರೂ ಜೊತೆಗೆ ಸಾಗಿದ ದಾರಿಗಳು. ಇವೆಲ್ಲವೂ ಒಬ್ಬರಿಗೊಬ್ಬರು ಬರೆದ ಪತ್ರಗಳಲ್ಲಿ ಬಿಚ್ಚಿಕೊಳ್ಳುವ ಪ್ರೇಮ ಕಥಾನಕ ಹೊಂದಿದೆ.
ನಾಟಕದ ನಿರ್ದೇಶಕರ ನುಡಿಗಳು
ಈ ವರ್ಷದ ಮಾರ್ಚ್ ನಲ್ಲಿ 'ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮೆನ್ಸ್' ಸಂಸ್ಥೆಯು ತನ್ನ ಹೊಸ ನಾಟಕೋತ್ಸವಕ್ಕೆ ನಮ್ಮ ತಂಡವನ್ನು ಆಹ್ವಾನಿಸಿದೆ. ಹೊಸ ನಾಟಕವೊಂದನ್ನು ಮಾಡಲು ಕೇಳಿಕೊಂಡಿತು. ಹೊಸ ಜಾಗದಲ್ಲಿ ಈ ನಾಟಕೋತ್ಸವ ನಡೆಯಬೇಕಾದ್ದರಿಂದ, ಸಮಯವೂ ಕಡಿಮೆ ಇದ್ದಿದ್ದರಿಂದ ನಾವು ಕಡಿಮೆ ನಟರಿರುವ ನಾಟಕಗಳಿಗೆ ಹುಡುಕಾಟ ಶುರು ಮಾಡಿದೆವು. ಆಗ ಅಕಾಸ್ಮಾತ್ತಾಗಿ ಕಣ್ಣಿಗೆ ಬಿದ್ದಿದ್ದೇ ಎ.ಆರ್.ಗರ್ನಿಯವರು ಬರೆದ 'ಲವ್ ಲೆಟರ್ಸ್' ನಾಟಕ.
1986 ರಲ್ಲಿ ಪ್ರಕಟವಾದ ಈ ನಾಟಕ ಸುಮಾರು ದೇಶಗಳಲ್ಲಿ ಪ್ರದರ್ಶನ ಕಂಡು ಜನಪ್ರಿಯಯಾದ ನಾಟಕ. ಪ್ರೇಮಿಗಳಿಬ್ಬರು ತಮ್ಮ ಇಡೀ ಜೀವನದ ಘಟನೆಗಳನ್ನು, ನೋವು ನಲಿವುಗಳನ್ನು , ಗೆಲುವು ಸೋಲುಗಳನ್ನು , ತಾವು ಪರಸ್ಪರ ಬರೆದುಕೊಂಡ ಪತ್ರಗಳ ಮೂಲಕ ಪ್ರೇಕ್ಷಕರ ಮುಂದೆ ತೆರೆದಿಡುತ್ತಾ ಹೋಗುತ್ತಾರೆ. ಇದೊಂದು ಪ್ರೇಮ ಕಥೆ, ಇಬ್ಬರೇ ಕಲಾವಿದರು ಅಭಿನಯಿಸುವ ಕಥೆ. ನಮಗೆ ಬೇಕಾದ ನಾಟಕ ಸಿಕ್ಕಾಗಿತ್ತು .
ಆದರೆ ಕೇವಲ ಇಬ್ಬರು ಕಲಾವಿದರೆಂಬ ಕಾರಣಕ್ಕೆ ಈ ನಾಟಕ ತೆಗೆದುಕೊಂಡದ್ದಲ್ಲ. ಬೇರೆ ಕಾರಣಗಳೂ ಸೇರಿಕೊಂಡವು. ಮೊದಲಿಗೆ ಇದೊಂದು ಭಾವನಾತ್ಮಕ ಪ್ರೇಮ ಕಥೆ. ನಮ್ಮ ಸುತ್ತಲಿನ ಇಡೀ ಜಗತ್ತು ಗದ್ದಲ, ಗೊಂದಲದಲ್ಲಿ ಸಿಲುಕಿರುವಾಗ, ದ್ವೇಷದ ಗಾಳಿಯನ್ನೇ ಉಸಿರಾಡಬೇಕಾದ ಸಂದರ್ಭದಲ್ಲಿ , ಒಂದು ಸೌಮ್ಯವಾದ, ಶಾಂತವಾದ ಪ್ರೀತಿಯ ಕಥೆಯೊಂದನ್ನು ಸಮಾಧಾನದಿಂದ ಪ್ರೇಕ್ಷಕರ ಮುಂದೆ ಹೇಳಬೇಕೆನಿಸಿತ್ತು.
ಹಲವು ಹತ್ತು ಅಭಿಪ್ರಾಯಗಳಿಂದ ದೂರವಾಗಿ ದ್ವೀಪಗಳಾದ ನಮ್ಮನ್ನು ಕೊನೆಗೂ ಪ್ರೀತಿ ಮಾತ್ರ ಬೆಸೆಯಲು ಸಾಧ್ಯ. ಅದು ಈ ನಾಟಕ ಮಾಡಲು ಮೊದಲ ಕಾರಣ. ಮತ್ತೊಂದು ಕಾರಣ, ನಾವೆಲ್ಲರೂ ಆಗಾಗ ಕೇಳುವ ಮಾತು - personal is political ಎಂದು. ಅದೇನೆಂದು ಈ ನಾಟಕದಲ್ಲಿ ನೋಡಬಹುದು. ಮನುಷ್ಯರ ಬದುಕಿನ ವೈಯಕ್ತಿಕ ಬೇರೆ, ಸಾಮಾಜಿಕ ಬೇರೆ ಎಂದು ಮೇಲ್ನೋಟಕ್ಕೆ ಅನಿಸಿದರೂ, ವ್ಯಕ್ತಿಯ ಸಾಮಾಜಿಕ ಶ್ರೇಣಿ, ಲಿಂಗ, ಸ್ಥಾನಮಾನಗಳು, ಬಾಲ್ಯದ ಅನುಭವಗಳು ಆ ವ್ಯಕ್ತಿಯ personal ಅಂದರೆ ವೈಯುಕ್ತಿಕವನ್ನೂ ನಿರ್ಧರಿಸುತ್ತದೆ ಎಂಬುದು ವಾಸ್ತವ. ಅದು ಈ ನಾಟಕದಲ್ಲಿ ಪ್ರಮುಖವಾಗಿ ಕಾಣುವ ಮತ್ತೊಂದು ಅಂಶ ಗಮನಿಸಬಹುದು.
ಇವೆಲ್ಲದರ ಜೊತೆಗೆ ಇದೊಂದು ಪತ್ರ ವಿನಿಮಯದ ನಾಟಕ. ಹೆಸರೇ ಹೇಳುವಂತೆ ಇಬ್ಬರು ಪ್ರೇಮಿಗಳು ತಮ್ಮ ಜೀವನದುದ್ದಕ್ಕೂ ಬರೆದುಕೊಂಡ ಪತ್ರಗಳು ಈ ನಾಟಕದ ಜೀವಾಳ. ಮೊಬೈಲ್ ಮೆಸೇಜುಗಳು, ಸೋಷಿಯಲ್ ಮೀಡಿಯಾಗಳ ಇಂದಿನ ಜಗತ್ತಿನಲ್ಲಿ ಪತ್ರಗಳನ್ನು, ಬರೆಯುವ , ಓದುವ ಅನುಭವ ಖಂಡಿತಾ ಮುದ ನೀಡುವಂತದ್ದು. ಬಾಲ್ಯದಲ್ಲಿ ಪತ್ರಗಳನ್ನು ಬರೆದವರಿಗೆ ಈ ನಾಟಕ ಪತ್ರಗಳ ನೆನಪನ್ನು ತಂದರೆ , ಪತ್ರಗಳನ್ನು ಬರೆಯುವ ಅಭ್ಯಾಸವೇ ಇಲ್ಲದ ಇಂದಿನ ಕಿರಿಯರಿಗೆ ಇದು ಪತ್ರಗಳ ಲೋಕದ ಅಚ್ಚರಿಯನ್ನು ದಾಟಿಸಬಲ್ಲುದೇನೋ !
ಇವೆಲ್ಲ ಕಾರಣಗಳಿಂದ ಈ ನಾಟಕ ಒಂದು ಆಪ್ತವಾದ, ಸುಂದರವಾದ , ಭಾವನಾತ್ಮಕವಾದ ಪ್ರೇಮ ಕಥಾನಕ. ನಾನು ಮೊದಲು ನಿರ್ದೇಶಿಸಿದ ನಾಟಕಗಳಿಗಿಂತ ಭಿನ್ನವಾದ ನಾಟಕವಾದರೂ ಅಷ್ಟೇ ಮುಖ್ಯವಾದ ನಾಟಕ ಇದೆಂದು ನನಗೆ ನಂಬಿಕೆ ಇದೆ! ಎಂದು ಅವರು ಅಭಿಪ್ರಾಯ ಹೊರ ಹಾಕಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications