ರಾಮನಗರ: ನಾಲ್ಕು ವರ್ಷಗಳ ಬಳಿಕ ನಲ್ಲಿಗುಡ್ಡೆ ಕೆರೆಯಲ್ಲಿ ಜಲಸಂಚಲನ
ರಾಮನಗರ, ಅಕ್ಟೋಬರ್ 23: ಹಿಂಗಾರು ಮಳೆಯ ಚಮತ್ಕಾರಕ್ಕೆ ಭರ್ತಿಯಾಗದೆ ಉಳಿದಿದ್ದ ಕೆರೆಗಳು ಭರ್ತಿಯಾಗಲಾರಂಭಿಸಿವೆ. ಇದೀಗ ರಾಮನಗರ ಜಿಲ್ಲೆಯ ಬಿಡದಿ ಪಟ್ಟಣದ ಹೊರವಲಯದಲ್ಲಿರುವ ನಲ್ಲಿಗುಡ್ಡೆ ಕೆರೆ ನಾಲ್ಕು ವರ್ಷಗಳ ಬಳಿಕ ಮತ್ತೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದ್ದು, ಈ ಸುಂದರ ದೃಶ್ಯ ಸುತ್ತಮುತ್ತಲ ಜನರನ್ನು ಆಕರ್ಷಿಸಲಾರಂಭಿಸಿದೆ.
ಕೆರೆ ತುಂಬಿ ದಂಡೆಯ ಮೇಲೆ ಜಲಧಾರೆಯಾಗಿ ಧುಮ್ಮಿಕ್ಕಿ ಹರಿದು ಹೋಗುತ್ತಿರುವ ನೀರ ಚೆಲುವಿಗೆ ಮರಳಾದ ನಿಸರ್ಗ ಪ್ರೇಮಿಗಳು ಇತ್ತ ದೌಡಾಯಿಸುತ್ತಿದ್ದಾರೆ. ಈ ಕೆರೆಯು ಬಿಡದಿ ಪಟ್ಟಣ ಹಾಗೂ ಈ ಭಾಗದ ಹತ್ತಾರು ಹಳ್ಳಿಗಳಿಗೆ ಕುಡಿಯುವ ನೀರಿನ ಆಸರೆಯಾಗಿದೆ. ಇರುವ ಕೆರೆಗಳ ಪೈಕಿ ಶುದ್ಧತೆಯನ್ನು ಕಾಪಾಡಿಕೊಂಡಿರುವ ಈ ಕೆರೆ, ಭರ್ತಿಯಾಗಿ ಚಂದ್ರಾಕಾರದಲ್ಲಿ ಹರಿದು ಹೋಗುತ್ತಿರುವ ದೃಶ್ಯ ಮನಮೋಹಕವಾಗಿದೆ.

ಕೆರೆಯ ಚೆಲುವಿಗೆ ಮಾರುಹೋದ ಪ್ರವಾಸಿಗರು
ಇನ್ನು ಕೆರೆ ಭರ್ತಿಯಾಗಿರುವ ಕುರಿತಂತೆ ನೋಡುವುದಾದರೆ 2004ರಲ್ಲಿ ಒಮ್ಮೆ ತುಂಬಿ ಕೋಡಿ ಹರಿದಿದ್ದು ಬಿಟ್ಟರೆ ಆ ನಂತರ ಭರ್ತಿಯಾಗಿರಲಿಲ್ಲ. ಆದರೆ 2017ರಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿದಿತ್ತು. ಆ ಬಾರಿ ಭರ್ತಿಯಾಗಿತ್ತು. ಆದಾದ ನಂತರ ನಾಲ್ಕು ವರ್ಷಕ್ಕೆ ಈ ಬಾರಿಯೇ ಭರ್ತಿಯಾಗಿರುವುದಾಗಿದೆ. ಹೀಗಾಗಿ ಗತ ವೈಭವ ಮರಳಿ ಬಂದಿದ್ದು, ಕೆರೆ ಭರ್ತಿಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಪ್ರವಾಸಿಗರು ಇತ್ತ ಮುಖ ಮಾಡಿದ್ದು, ಒಂದಷ್ಟು ಸಮಯವನ್ನು ಕೆರೆಯ ಚೆಲುವನ್ನು ಆಸ್ವಾದಿಸುತ್ತಾ ಕಳೆಯುತ್ತಿದ್ದಾರೆ.

380 ಹೆಕ್ಟೇರ್ ಪ್ರದೇಶಕ್ಕೆ ನೀರಿನ ಸೌಲಭ್ಯ
ನಲ್ಲಿಗುಡ್ಡೆ ಕೆರೆ ಭರ್ತಿಯಾದರೆ ಸುಮಾರು 380 ಹೆಕ್ಟೇರ್ ಪ್ರದೇಶಕ್ಕೆ ನೀರಿನ ಸೌಲಭ್ಯ ದೊರೆಯಲಿದೆ. ಕೆರೆಯು ಸುಮಾರು 216.45 ದಶಲಕ್ಷ ಘನ ಅಡಿಗಳಷ್ಟು(ಎಂಸಿಎಫ್ಸಿ) ಪ್ರಮಾಣದ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ. ತಗ್ಗು ಪ್ರದೇಶದಲ್ಲಿರುವ ಕಾರಣ ಸುತ್ತಲಿನ 67 ಕಿ.ಮೀ ವ್ಯಾಪ್ತಿಯಲ್ಲಿ ಮಳೆ ಬಂದರೆ ಅಲ್ಲಿನ ನೀರು ಹಳ್ಳ- ಕೊಳ್ಳಗಳ ಮೂಲಕ ಹರಿದು ಬರುತ್ತದೆ. ಕೆರೆಗೆ 25 ಅಡಿ ಎತ್ತರದ ಏರಿಯನ್ನು ಕಟ್ಟಿ ನೀರನ್ನು ಸಂಗ್ರಹಿಸಿಡಲಾಗುತ್ತಿದೆ. ಇಲ್ಲಿ ನೀರು ಸಂಗ್ರಹಣೆಯಾಗುವುದರಿಂದ ಬರೀ ನೀರು ಮಾತ್ರ ಸರಬರಾಜಾಗದೆ, ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲವೂ ವೃದ್ಧಿಯಾಗಲಿದೆ.

ಕೆರೆಯಲ್ಲಿ 25 ಅಡಿಯಷ್ಟು ನೀರು ಸಂಗ್ರಹ
ಸದ್ಯ ಕೆರೆಯಲ್ಲಿ 25 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಒಳಹರಿವಿನಷ್ಟೇ ನೀರು ಕೋಡಿಯ ಮೂಲಕ ಹೊರ ಹೋಗುತ್ತಿದೆ. ಈ ನೀರು ಬಾನಂದೂರು, ಇಟ್ಟಮಡು ಗ್ರಾಮಗಳ ಮೂಲಕ ಸಾಗಿ ವೃಷಭಾವತಿ ನದಿ ಸೇರಿ ಬಳಿಕ ಕನಕಪುರದ ಸಮೀಪ ಅರ್ಕಾವತಿ ನದಿಯೊಂದಿಗೆ ಜತೆಯಾಗಿ ಮೇಕೆದಾಟು ಬಳಿ ಕಾವೇರಿ ನದಿಯಲ್ಲಿ ಸಂಗಮವಾಗುತ್ತದೆ.
ಈ ಕೆರೆಯನ್ನು ಕಳೆದ ಏಳೆಂಟು ವರ್ಷಗಳ ಹಿಂದೆ ಕೋಕಾ ಕೋಲ ಕಂಪನಿ ವತಿಯಿಂದ 55 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿ ನಡೆಸಿ ಹೂಳು ತೆಗೆದು, ಏರಿಯನ್ನೂ ಎತ್ತರಿಸಲಾಗಿತ್ತು. 2017ರಲ್ಲಿ ಕೆರೆ ತುಂಬಿದರೂ ತೂಬು ದುಸ್ಥಿತಿಯಲ್ಲಿದ್ದ ಕಾರಣ ನೀರು ವ್ಯರ್ಥವಾಗಿ ನಾಲೆಯಲ್ಲಿ ಹರಿದು ಪೋಲಾಗಿತ್ತು. ಈಗಲೂ ಅದು ಮುಂದುವರೆದಿದ್ದು, ನೀರು ಪೋಲಾಗುವುದನ್ನು ತಡೆಯುಂತೆ ನಾಗರಿಕರು ಮನವಿ ಮಾಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಸಾಮಾಜಿಕಕ ಕಾರ್ಯಕರ್ತ ಮುತ್ತಣ್ಣ, ಹತ್ತಾರು ವರ್ಷಗಳಿಂದ ಖಾಲಿಯಾಗಿದ್ದ ಕೆರೆ- ಕಟ್ಟೆಗಳು ಇದೀಗ ಮಳೆರಾಯನ ಕೃಪೆಯಿಂದ ಭರ್ತಿಯಾಗಿವೆ. ಕೆರೆಗಳಲ್ಲಿರುವ ನೈಸರ್ಗಿಕ ನೀರನ್ನು ಸಂರಕ್ಷಿಸಲು ಜಿಲ್ಲಾ ಮತ್ತು ತಾಲೂಕು ಆಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ನೀರಿನ ಸಂರಕ್ಷಣೆಗೆ ಆದ್ಯತೆ ನೀಡಲಿ
2017ರಲ್ಲಿ ನಲ್ಲಿಗುಡ್ಡೆ ಕೆರೆ ತುಂಬಿದರೂ ಸಹ ಅಮೂಲ್ಯವಾದ ನೀರನ್ನು ಸಂರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಕೊಳವೆ ಬಾವಿಗಳಿಂದ ಪ್ಲೋರೈಡ್ ಸಹಿತ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಕೆರೆಯ ನೀರನ್ನು ಸಂರಕ್ಷಿಸಿ ಶುದ್ಧೀಕರಿಸಿ ಸರಬರಾಜು ಮಾಡುವುದರಿಂದ ಸುಮಾರು ಮೂರ್ನಾಲ್ಕು ವರ್ಷಗಳ ಕಾಲವಾದರೂ ಕುಡಿಯುವ ನೀರಿಗೆ ಅಭಾವ ಎದುರಾಗದಂತೆ ನೋಡಿಕೊಳ್ಳಬಹುದು ಎಂದು ಮುತ್ತಣ್ಣ ಅಭಿಪ್ರಾಯಪಟ್ಟಿದ್ದಾರೆ.
ಕೆರೆಯ ತೂಬಿನಿಂದ ನೀರು ಹಗಲು- ರಾತ್ರಿ ನಿರಂತರವಾಗಿ ಹರಿದು ಹೋಗುತ್ತಿದೆ. ನೀರಿನ ಹೊರ ಹರಿವು ನಿಲ್ಲಿಸಿದ್ದರೆ, ಇಷ್ಟರಲ್ಲಿ ಕೆರೆ ಕೋಡಿ ಬೀಳುವ ಹಂತಕ್ಕೆ ಬರುತ್ತಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ವ್ಯರ್ಥವಾಗಿ ಹರಿದು ಪೋಲಾಗುತ್ತಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನೀರಿನ ಹೊರ ಹರಿವನ್ನು ನಿಲ್ಲಿಸಬೇಕು. ಹಾಗೂ ಕೋಡಿ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications