Bihar Exit Poll: ಸಮೀಕ್ಷೆಗಳ ಸಮೀಕ್ಷೆಯಲ್ಲಿ ಯಾರಿಗೆ ಜಯ?
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ನೇತೃತ್ವದ ಮಹಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿವೆ ಎಂದು ಅಭಿಪ್ರಾಯ ಮಂಡಿಸಿವೆ. ಒಟ್ಟಾರೆ ಎಲ್ಲ ಸಮೀಕ್ಷೆಗಳನ್ನು ಒಂದೆಡೆ ಕಲೆಹಾಕಿ ಅವುಗಳನ್ನು ಅಧ್ಯಯನಕ್ಕೆ ಒಳಪಡಿಸಿದರೂ ಬಿಹಾರದಲ್ಲಿ ಮಹಾಮೈತ್ರಿಕೂಟ ಸರಳ ಬಹುಮತ ಪಡೆದುಕೊಳ್ಳಲು ಸಾಧ್ಯವಾಗಲಿದೆ.
243 ಸೀಟುಗಳಿರುವ ಬಿಹಾರದಲ್ಲಿ ಸರಳ ಬಹುಮತಕ್ಕೆ ಬೇಕಿರುವುದು 122 ಮತಗಳು. ಆದರೆ ಸಮೀಕ್ಷೆಗಳ ಸಮೀಕ್ಷೆಗಳ ಪ್ರಕಾರ ತೇಜಸ್ವಿ ಯಾದವ್ ಅವರ ಮೈತ್ರಿಕೂಟಕ್ಕೆ 124 ಸೀಟುಗಳು ಸುಲಭವಾಗಿ ದಕ್ಕಲಿದೆ. ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ 100-110 ಸೀಟುಗಳಷ್ಟೇ ಸಿಗಲಿವೆ. ಹೀಗಾಗಿ ಸಮೀಕ್ಷೆಗಳ ಪ್ರಕಾರ ಬಿಹಾರದಲ್ಲಿನ ಎನ್ಡಿಎ ಸರ್ಕಾರದ ಪ್ರತಿನಿಧಿಗಳು ಇನ್ನು ವಿರೋಧಪಕ್ಷದ ಸ್ಥಾನದಲ್ಲಿ ಕೂರಬೇಕಾಗಲಿದೆ. ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ 6 ಕ್ಷೇತ್ರಗಳಲ್ಲಿ ಗೆಲ್ಲಲಿದೆ.
ಟೈಮ್ಸ್ ನೌ- ಸಿ ವೋಟರ್ ಎನ್ಡಿಎಗೆ 116 ಸೀಟುಗಳನ್ನು ನೀಡಿದ್ದರೆ, ಮಹಾಘಟಬಂಧನ ಅದಕ್ಕಿಂತ ನಾಲ್ಕು ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಎಂದಿದೆ. ಇನ್ನು ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಲಿದೆ. ಹೀಗಾಗಿ ಅತಂತ್ರ ವಿಧಾನಸಭೆ ಉಂಟಾಗಲಿದೆ ಎಂದು ಅದು ತಿಳಿಸಿದೆ.

ರಿಪಬ್ಲಿಕ್ ಟಿವಿ-ಜನ್ ಕಿ ಬಾತ್ ಸಮೀಕ್ಷೆಯು ವಿರೋಧಪಕ್ಷದಲ್ಲಿರುವ ಮೈತ್ರಿಕೂಟಕ್ಕೆ 118-138 ಸೀಟುಗಳ ಗೆಲುವಿನ ಭವಿಷ್ಯ ನುಡಿದಿದೆ. ಆಡಳಿತಾರೂಢ ಪಕ್ಷಗಳು ಸೇರಿ 91-117ಸೀಟುಗಳನ್ನು ಗೆಲ್ಲಲಿವೆ. ಎಲ್ಜೆಪಿಗೆ 5-8 ಸೀಟುಗಳು ಸಿಗಲಿವೆ.
ಟಿವಿ 9- ಭಾರತ್ ವರ್ಷ್ ತೇಜಸ್ವಿ ಯಾದವ್ ನೇತೃತ್ವದ ತಂಡಕ್ಕೆ 120 ಸೀಟುಗಳು ಮತ್ತು ಎನ್ಡಿಎಗೆ 115 ಸೀಟುಗಳು ಸಿಗಲಿದೆ ಎಂದು ಹೇಳಿದೆ. ಎಲ್ಜೆಪಿ ನಾಲ್ಕು ಸೀಟುಗಳನ್ನು ಗೆಲ್ಲಬಹುದು ಎಂದು ತಿಳಿಸಿದೆ.
ದೈನಿಕ್ ಭಾಸ್ಕರ್ ಸಮೀಕ್ಷೆ ಮಾತ್ರ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ನಿತೀಶ್ ಕುಮಾರ್ ಸಾರಥ್ಯದ ಎನ್ಡಿಎ 120-127 ಸೀಟುಗಳನ್ನು ಪಡೆದುಕೊಳ್ಳಲಿದೆ. ಮಹಾ ಮೈತ್ರಿಕೂಟವು 71-81 ಸೀಟುಗಳನ್ನು ಗೆಲ್ಲಲಿದೆ. ಎಲ್ಜೆಪಿ 12-23 ಸೀಟುಗಳಲ್ಲಿ ಗೆಲ್ಲಲಿದೆ. ಇತರೆ 19-27 ಕ್ಷೇತ್ರಗಳಲ್ಲಿ ಜಯಗಳಿಸಲಿದೆ.
ಎನ್ಡಿಟಿವಿ ನೀಡಿರುವ ಸಮೀಕ್ಷೆಗಳ ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಯುಪಿಎ ನಿಚ್ಚಳ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications