Todays Chanakya Exit Poll: ಮಹಾಘಟಬಂಧನ್ ಮೈತ್ರಿಕೂಟಕ್ಕೆ ಗದ್ದುಗೆ
ಪಾಟ್ನಾ, ನವೆಂಬರ್.07: ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊೆೆಂಡಿದೆ. ರಾಜ್ಯದಲ್ಲಿ ಆರ್ ಜೆಡಿ-ಕಾಂಗ್ರೆಸ್ಸಿನ ಮಹಾಘಟಬಂಧನ್ ಮೈತ್ರಿಕೂಟ, ಜೆಡಿಯು-ಬಿಜೆಪಿ-ಎಚ್ಎಎಂನ ಎನ್ ಡಿಎ ಮೈತ್ರಿಕೂಟ ಹಾಗೂ ಲೋಕಜನಶಕ್ತಿ ಪಕ್ಷಗಳ ಭವಿಷ್ಯವನ್ನು ಚುನಾವಣಾ ಸಮೀಕ್ಷೆಗಳ ಮೂಲಕ ವಿಶ್ಲೇಷಿಸಲಾಗುತ್ತದೆ.
2020ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. ಅಕ್ಟೋಬರ್.28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. ಶನಿವಾರ 3ನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ಭಾರತದ ಸಂಸತ್ ಚುನಾವಣೆ ಹಾಗೂ ವಿಧಾನಸಭಾ ಚುನಾವಣಾ ಮತದಾನೋತ್ತರ ಸಮೀಕ್ಷೆಗಳ ಪೈಕಿ "ಟುಡೇ ಚಾಣಕ್ಯ" ಸಮೀಕ್ಷೆಯು ಅತ್ಯಂತ ವಿಶ್ವಾಸಾರ್ಹ ಎನಿಸಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶದ ಕುರಿತು "ಟುಡೇ ಚಾಣಕ್ಯ" ನಡೆಸಿರುವ ಮತದಾನೋತ್ತರ ಸಮೀಕ್ಷೆ ಅಂಕಿ-ಅಂಶಗಳು ಹೇಗಿದೆ. ಯಾವ ಮಹಾಘಟಬಂಧನ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪೈಕಿ ಗದ್ದುಗೆ ಗಿಟ್ಟಿಸಿಕೊಳ್ಳುವವರು ಯಾರು. ರಾಜ್ಯದಲ್ಲಿ ಲೋಕಜನಶಕ್ತಿ ಪಕ್ಷ ಕಿಂಗ್ ಮೇಕರ್ ಆಗುತ್ತಾ ಎಂಬ ಪ್ರಶ್ನೆಗಳಿಗೆ ಟುೇ ಚಾಣಕ್ಯ ಮತದಾನೋತ್ತರ ಸಮೀಕ್ಷೆಯಲ್ಲಿ ಉತ್ತರ ಸಿಕ್ಕಿದೆ.

ಬಿಹಾರದಲ್ಲಿ ಮಹಾಘಟಬಂಧನಕ್ಕೆ ಗದ್ದುಗೆ:
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದರ ಕುರಿತು ಟುಡೇಸ್ ಚಾಣುಕ್ಯ ಚುನಾವಣಾ ಮತದಾನೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ಹೇಳಿದೆ. ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟಬಂಧನ್ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದಿದೆ.
ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟವು ಶೇ.44ರಷ್ಟು ಮತಗಳನ್ನು ಪಡೆದುಕೊಂಡಿದ್ದು, ಎನ್ ಡಿಎ ಮೈತ್ರಿಕೂಟವು ಶೇ.33ರಷ್ಟು ಮತಗಳನ್ನು ಪಡೆದುಕೊಂಡಿದೆ ಎಂದು ಚಾಣಕ್ಯ ಸಮೀಕ್ಷೆಯಲ್ಲಿ ತಿಳಿಸಿದೆ.
2015ರ ಬಿಹಾರ ಚುನಾವಣೆ ಫಲಿತಾಂಶ:
ಕಳೆದ 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ಪಕ್ಷವು 80 ಸ್ಥಾನ ಜಯಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು 71 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಬಿಜೆಪಿ, ಲೋಕಜನಶಕ್ತಿ ಪಕ್ಷ, ಹಿಂದೂಸ್ತಾನ್ ಅವಂ ಮೋರ್ಚಾ ಮತ್ತು ರಾಷ್ಟ್ರೀಯ ಲೋಕಸಮತಾ ಪಕ್ಷಗಳನ್ನೊಳಗೊಂಡ ಎನ್ ಡಿಎ ಮೈತ್ರಿಕೂಟವು 53 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ಮಹಾಘಟಬಂಧನ್ ಮೈತ್ರಿಕೂಟಕ್ಕೆ ಅಧಿಕಾರ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದರ ಕುರಿತು ಟುಡೇಸ್ ಚಾಣುಕ್ಯ ಚುನಾವಣಾ ಮತದಾನೋತ್ತರ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ಹೇಳಿದೆ. ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾಘಟಬಂಧನ್ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದಿದೆ. ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟವು ಶೇ.44ರಷ್ಟು ಮತಗಳನ್ನು ಪಡೆದುಕೊಂಡಿದ್ದು, ಎನ್ ಡಿಎ ಮೈತ್ರಿಕೂಟವು ಶೇ.33ರಷ್ಟು ಮತಗಳನ್ನು ಪಡೆದುಕೊಂಡಿದೆ ಎಂದು ಚಾಣಕ್ಯ ಸಮೀಕ್ಷೆಯಲ್ಲಿ ತಿಳಿಸಿದೆ.

"ಚಾಣಕ್ಯ"ನ ಪ್ರಕಾರ ಯಾರಿಗೆಷ್ಟು ಸ್ಥಾನ?
ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಟುಡೇಸ್ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. 2020ರಲ್ಲಿ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಅಧಿಕಾರಕ್ಕೆ ಬರಲಿದೆ ಎಂದು ಚಾಣಕ್ಯ ಭವಿಷ್ಯ ನುಡಿದಿದೆ. ಮಹಾಘಟಬಂಧನ್ 169-191 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಎನ್ ಡಿಎ ಮೈತ್ರಿಕೂಟ 44-56, ಇತರೆ 4-12 ಸ್ಥಾನ ಗಳಿಸಲಿದೆ ಎಂದು ಟುಡೇಸ್ ಚಾಣಕ್ಯ ಚುನಾವಣೋತ್ತರ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಬಿಹಾರದಲ್ಲಿ ನಡೆಯುವುದಿಲ್ಲವೇ ನಿತೀಶ್-ಮೋದಿ ಮೋದಿ
ಬಿಹಾರದಲ್ಲಿ 15 ವರ್ಷ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ ನಿತೀಶ್ ಕುಮಾರ್ ವಿರುದ್ಧ ಈ ಬಾರಿ ಆಡಳಿತ ವಿರೋಧಿ ಅಲೆಯಿದೆ ಎಂಬ ಮಾತುಗಳು ಆರಂಭದಿಂದಲೂ ಕೇಳಿ ಬರುತ್ತಿದ್ದವು. ಈ ಹಿನ್ನೆಲೆ ಎನ್ ಡಿಎ ಮೈತ್ರಿಕೂಟದಲ್ಲೇ ಗುರುತಿಸಿಕೊಂಡಿದ್ದ ಎಲ್ ಜೆಪಿ ಕೂಡ ನಿತೀಶ್ ವಿರುದ್ಧ ಬಂಡಾಯದ ಬಾವುಟ ಹಾರಿಸಿ, ಎನ್ ಡಿಎ ಮೈತ್ರಿಕೂಟದಿಂದಲೇ ಹೊರ ನಡೆದಿತ್ತು. ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆಯನ್ನೇ ಮಹಾಘಟಬಂಧನ್ ಮೈತ್ರಿಕೂಟವು ಸರಿಯಾಗಿ ಮತದಾರರ ಎದುರಿನಲ್ಲಿ ಪ್ರಸ್ತುತಪಡಿಸುವಲ್ಲಿ ಯಶಸ್ವಿಯಾಗಿದೆ. ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತದಾರರ ಮನ ಮುಟ್ಟುವಲ್ಲಿ ಸಫಲರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

2015ರಲ್ಲಿ ನಡೆದ ಚುನಾವಣೆಯ ಫಲಿತಾಂಶ
ಕಳೆದ 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ಪಕ್ಷವು 80 ಸ್ಥಾನ ಜಯಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು 71 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಬಿಜೆಪಿ, ಲೋಕಜನಶಕ್ತಿ ಪಕ್ಷ, ಹಿಂದೂಸ್ತಾನ್ ಅವಂ ಮೋರ್ಚಾ ಮತ್ತು ರಾಷ್ಟ್ರೀಯ ಲೋಕಸಮತಾ ಪಕ್ಷಗಳನ್ನೊಳಗೊಂಡ ಎನ್ ಡಿಎ ಮೈತ್ರಿಕೂಟವು 53 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications