ಯಾವ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಬದಲಾಯ್ತು ಸರ್ಕಾರಿ ಶಾಲೆ, ಎಲ್ಲಿ?
ಸರ್ಕಾರಗಳು ಏನೆಲ್ಲ ಯೋಜನೆಗಳನ್ನು ತಂದರೂ, ಕೋಟಿಗಟ್ಟಲೆ ಹಣ ಸುರಿದರೂ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ ಎನ್ನುವ ದೂರಿದೆ. ಕೆಲವು ಜಿಲ್ಲೆಗಳಲ್ಲಿ ಈಗಲೂ ಸರ್ಕಾರಿ ಶಾಲೆಗಳು ಮೂಲ ಸೌಕರ್ಯಗಳನ್ನು ಎದುರಿಸುತ್ತಿದೆ. ಆದರೆ ಸರ್ಕಾರಿ ಶಾಲೆಯೊಂದು ಖಾಸಗಿ ಶಾಲೆಗೂ ಸೆಡ್ಡು ಹೊಡೆಯುವಂತೆ ತನ್ನ ರೂಪ ಬದಲಿಸಿಕೊಂಡಿದೆ. ಜನಪ್ರತಿನಿಧಿಗಳು ಸಂಕಲ್ಪ ಮಾಡಿದರೆ ಚಮತ್ಕಾರ ಮಾಡಬಹುದು ಎಂಬುದಕ್ಕೆ ಇದು ಉತ್ತಮ ಸಾಕ್ಷಿಯಾಗಿದೆ.
ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಅವರ ಹುಟ್ಟೂರಿನಲ್ಲಿರುವ ಸರ್ಕಾರಿ ಶಾಲೆ ಇದೀಗ ಹೈಟೆಕ್ ಸ್ಪರ್ಶದೊಂದಿಗೆ ಎಲ್ಲರ ಹುಬ್ಬೇರಿಸುವಂತೆ ಬದಲಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯು ಇನ್ನೇನು ಕೊಂಪೆಯಾಗುವ ಸ್ಥಿತಿಯಲ್ಲಿತ್ತು. ಅಷ್ಟರಮಟ್ಟಿಗೆ ಈ ಶಾಲೆಯು ದುಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ರವಿಕುಮಾರ್ ಅವರು ಶಾಲೆಯ ಚಿತ್ರಣವನ್ನೇ ಬದಲಿಸಲು ತೊಡೆತಟ್ಟಿ ಇಂದು ಗೆದ್ದಿದ್ದಾರೆ.

ಸಾಮಾನ್ಯವಾಗಿ ಶಾಲೆಗೆ ಏನಾದರೂ ಸಣ್ಣಪುಟ್ಟ ಬದಲಾವಣೆ ಮಾಡಿ, ಅದನ್ನೇ ಅಭಿವೃದ್ಧಿ ಎಂದು ಬೆನ್ನುತಟ್ಟಿಕೊಳ್ಳುವ ಪ್ರಚಾರಪ್ರಿಯ ರಾಜಕಾರಣಿಗಳ ನಡುವೆ ರವಿಕುಮಾರ್ ಅವರ ಈ ಕಾರ್ಯವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಶಾಲೆಯ ಎಂದು ನಂಬಲಾರದ ರೂಪದಲ್ಲಿ, ಖಾಸಗಿ ಶಾಲೆಗಳೂ ನಾಚಿಕೊಳ್ಳುವಂತೆ ವಿನ್ಯಾಸದಲ್ಲಿ ಹೊಸ ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸಲಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಎಂಎಲ್ಸಿ ಎನ್.ರವಿಕುಮಾರ್ ಅವರು, ನನ್ನ ಹಾಗೂ ವಿವಿಧ ಶಾಸಕರು, ಸಂಸದರ ಅನುದಾನದಲ್ಲಿ ನನ್ನ ಹುಟ್ಟೂರಾದ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಈಗ ಒಂದು ಸುಸಜ್ಜಿತ ಹೈಟೆಕ್ ಮಾದರಿಯಲ್ಲಿ ಸರ್ಕಾರಿ ಶಾಲೆಯನ್ನು ನಿರ್ಮಾಣ ಮಾಡಲಾಗಿದೆ. ಇಂದು ಈ ಹೊಸ ಶಾಲೆ ಲೋಕಾರ್ಪಣೆಗೊಂಡಿದೆ ಎಂದಿದ್ದಾರೆ.
ಸುಮಾರು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಹೈಟೆಕ್ ಶಾಲೆ ನಿರ್ಮಾಣವಾಗಿದೆ. ಸುಸಜ್ಜಿತವಾದ ಕಟ್ಟಡವು ನೋಡಲು ಖಾಸಗಿ ಹೈಟೆಕ್ ಶಾಲೆಯ ಮಾದರಿಯಲ್ಲೇ ಇದೆ. ಸುಮಾರು 20 ಸಾವಿರ ಚರದ ಅಡಿ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ಎದ್ದು ನಿಂತಿದೆ. ಈ ಶಾಲಾ ಕಟ್ಟಡದಲ್ಲಿ ವಿಶಾಲವಾದ ಒಳಾಂಗಣ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಬಯಲು ರಂಗಮಂದಿರ ನಿರ್ಮಿಸಲಾಗಿದೆ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಸ್ಮಾರ್ಟ್ಕ್ಲಾಸ್ ವ್ಯವಸ್ಥೆ ಕೂಡ ಇದೆ. ಮಕ್ಕಳಿಗೆ ಕುಡಿಯುವ ನೀರಿಗಾಗಿ ಬೋರ್ವೆಲ್ ಕೂಡ ಕೊರೆಸಲಾಗಿದ್ದು, ಶುದ್ಧ ಕುಡಿಯುವ ನೀರಿನ ಪೂರೈಕೆಯೂ ಇದೆ.

ಈ ಮೂಲಕ ಎನ್.ರವಿಕುಮಾರ್ ಅವರು ತಮ್ಮ ಹುಟ್ಟೂರಿಗೆ ಹಾಗೂ ಭವಿಷ್ಯದ ಮಕ್ಕಳಿಗೆ ಕೊಡುಗೆ ನೀಡಿದ್ದಾರೆ. ಈ ಬಗ್ಗೆ ನೆಟ್ಟಿಗರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿ ಜನಪ್ರತಿನಿಧಿಯೂ ಈ ರೀತಿ ಸಂಕಲ್ಪ ತೊಟ್ಟರೆ ಹಲವರ ಬದುಕಿಗೆ ಬೆಳಕಾಗುವುದಲ್ಲದೆ, ಸಮಾಜದಲ್ಲಿ ಕ್ರಾಂತಿಯನ್ನೇ ತರಬಹುದು ಎಂದು ಶಹಬ್ಬಾಸ್ಗಿರಿ ಕೊಡುತ್ತಿದ್ದಾರೆ. ಅನುದಾನಗಳನ್ನು ನುಂಗುವವರ ನಡುವೆ ರವಿಕುಮಾರ್ ಹಾಗೂ ಈ ಶಾಲೆಯ ಸ್ವರೂಪ ಬದಲಿಸಲು ಕೈಜೋಡಿಸಿ ಜನಪ್ರತಿನಿಧಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications