ಯಾವ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಬದಲಾಯ್ತು ಸರ್ಕಾರಿ ಶಾಲೆ, ಎಲ್ಲಿ?
ಸರ್ಕಾರಗಳು ಏನೆಲ್ಲ ಯೋಜನೆಗಳನ್ನು ತಂದರೂ, ಕೋಟಿಗಟ್ಟಲೆ ಹಣ ಸುರಿದರೂ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ ಎನ್ನುವ ದೂರಿದೆ. ಕೆಲವು ಜಿಲ್ಲೆಗಳಲ್ಲಿ ಈಗಲೂ ಸರ್ಕಾರಿ ಶಾಲೆಗಳು ಮೂಲ ಸೌಕರ್ಯಗಳನ್ನು ಎದುರಿಸುತ್ತಿದೆ. ಆದರೆ ಸರ್ಕಾರಿ ಶಾಲೆಯೊಂದು ಖಾಸಗಿ ಶಾಲೆಗೂ ಸೆಡ್ಡು ಹೊಡೆಯುವಂತೆ ತನ್ನ ರೂಪ ಬದಲಿಸಿಕೊಂಡಿದೆ. ಜನಪ್ರತಿನಿಧಿಗಳು ಸಂಕಲ್ಪ ಮಾಡಿದರೆ ಚಮತ್ಕಾರ ಮಾಡಬಹುದು ಎಂಬುದಕ್ಕೆ ಇದು ಉತ್ತಮ ಸಾಕ್ಷಿಯಾಗಿದೆ.
ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಅವರ ಹುಟ್ಟೂರಿನಲ್ಲಿರುವ ಸರ್ಕಾರಿ ಶಾಲೆ ಇದೀಗ ಹೈಟೆಕ್ ಸ್ಪರ್ಶದೊಂದಿಗೆ ಎಲ್ಲರ ಹುಬ್ಬೇರಿಸುವಂತೆ ಬದಲಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯು ಇನ್ನೇನು ಕೊಂಪೆಯಾಗುವ ಸ್ಥಿತಿಯಲ್ಲಿತ್ತು. ಅಷ್ಟರಮಟ್ಟಿಗೆ ಈ ಶಾಲೆಯು ದುಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ರವಿಕುಮಾರ್ ಅವರು ಶಾಲೆಯ ಚಿತ್ರಣವನ್ನೇ ಬದಲಿಸಲು ತೊಡೆತಟ್ಟಿ ಇಂದು ಗೆದ್ದಿದ್ದಾರೆ.

ಸಾಮಾನ್ಯವಾಗಿ ಶಾಲೆಗೆ ಏನಾದರೂ ಸಣ್ಣಪುಟ್ಟ ಬದಲಾವಣೆ ಮಾಡಿ, ಅದನ್ನೇ ಅಭಿವೃದ್ಧಿ ಎಂದು ಬೆನ್ನುತಟ್ಟಿಕೊಳ್ಳುವ ಪ್ರಚಾರಪ್ರಿಯ ರಾಜಕಾರಣಿಗಳ ನಡುವೆ ರವಿಕುಮಾರ್ ಅವರ ಈ ಕಾರ್ಯವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಶಾಲೆಯ ಎಂದು ನಂಬಲಾರದ ರೂಪದಲ್ಲಿ, ಖಾಸಗಿ ಶಾಲೆಗಳೂ ನಾಚಿಕೊಳ್ಳುವಂತೆ ವಿನ್ಯಾಸದಲ್ಲಿ ಹೊಸ ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸಲಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಎಂಎಲ್ಸಿ ಎನ್.ರವಿಕುಮಾರ್ ಅವರು, ನನ್ನ ಹಾಗೂ ವಿವಿಧ ಶಾಸಕರು, ಸಂಸದರ ಅನುದಾನದಲ್ಲಿ ನನ್ನ ಹುಟ್ಟೂರಾದ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಈಗ ಒಂದು ಸುಸಜ್ಜಿತ ಹೈಟೆಕ್ ಮಾದರಿಯಲ್ಲಿ ಸರ್ಕಾರಿ ಶಾಲೆಯನ್ನು ನಿರ್ಮಾಣ ಮಾಡಲಾಗಿದೆ. ಇಂದು ಈ ಹೊಸ ಶಾಲೆ ಲೋಕಾರ್ಪಣೆಗೊಂಡಿದೆ ಎಂದಿದ್ದಾರೆ.
ಸುಮಾರು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಹೈಟೆಕ್ ಶಾಲೆ ನಿರ್ಮಾಣವಾಗಿದೆ. ಸುಸಜ್ಜಿತವಾದ ಕಟ್ಟಡವು ನೋಡಲು ಖಾಸಗಿ ಹೈಟೆಕ್ ಶಾಲೆಯ ಮಾದರಿಯಲ್ಲೇ ಇದೆ. ಸುಮಾರು 20 ಸಾವಿರ ಚರದ ಅಡಿ ವ್ಯಾಪ್ತಿಯಲ್ಲಿ ಹೊಸ ಕಟ್ಟಡ ಎದ್ದು ನಿಂತಿದೆ. ಈ ಶಾಲಾ ಕಟ್ಟಡದಲ್ಲಿ ವಿಶಾಲವಾದ ಒಳಾಂಗಣ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಬಯಲು ರಂಗಮಂದಿರ ನಿರ್ಮಿಸಲಾಗಿದೆ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಸ್ಮಾರ್ಟ್ಕ್ಲಾಸ್ ವ್ಯವಸ್ಥೆ ಕೂಡ ಇದೆ. ಮಕ್ಕಳಿಗೆ ಕುಡಿಯುವ ನೀರಿಗಾಗಿ ಬೋರ್ವೆಲ್ ಕೂಡ ಕೊರೆಸಲಾಗಿದ್ದು, ಶುದ್ಧ ಕುಡಿಯುವ ನೀರಿನ ಪೂರೈಕೆಯೂ ಇದೆ.

ಈ ಮೂಲಕ ಎನ್.ರವಿಕುಮಾರ್ ಅವರು ತಮ್ಮ ಹುಟ್ಟೂರಿಗೆ ಹಾಗೂ ಭವಿಷ್ಯದ ಮಕ್ಕಳಿಗೆ ಕೊಡುಗೆ ನೀಡಿದ್ದಾರೆ. ಈ ಬಗ್ಗೆ ನೆಟ್ಟಿಗರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿ ಜನಪ್ರತಿನಿಧಿಯೂ ಈ ರೀತಿ ಸಂಕಲ್ಪ ತೊಟ್ಟರೆ ಹಲವರ ಬದುಕಿಗೆ ಬೆಳಕಾಗುವುದಲ್ಲದೆ, ಸಮಾಜದಲ್ಲಿ ಕ್ರಾಂತಿಯನ್ನೇ ತರಬಹುದು ಎಂದು ಶಹಬ್ಬಾಸ್ಗಿರಿ ಕೊಡುತ್ತಿದ್ದಾರೆ. ಅನುದಾನಗಳನ್ನು ನುಂಗುವವರ ನಡುವೆ ರವಿಕುಮಾರ್ ಹಾಗೂ ಈ ಶಾಲೆಯ ಸ್ವರೂಪ ಬದಲಿಸಲು ಕೈಜೋಡಿಸಿ ಜನಪ್ರತಿನಿಧಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications