Boycott Pathan: 'ಥಿಯೇಟರ್ಗಳನ್ನು ಸುಟ್ಟುಹಾಕಿ' ಎಂದ ಅಯೋಧ್ಯೆ ಮಹಾಂತ
ನವದೆಹಲಿ, ಡಿಸೆಂಬರ್ 15: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟಿಸಿರುವ ಪಠಾಣ್ ಚಿತ್ರವು ಹಿಂದೂವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಚಿತ್ರದ 'ಬೇಷರಮ್ ರಂಗ್' ಹಾಡಿನ ವಿರುದ್ಧ ಸಾಮಾಜಿಕ ಮಾದ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಬೇಷರಮ್ ರಂಗ್ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಉಡುಪು ಧರಿಸಿದ್ದಾಳೆ ಎನ್ನುವುದೇ ಹಿಂದೂವಾಗಿಗಳ ಖ್ಯಾತೆಗೆ ಕಾರಣವಾಗಿದೆ.
ಕೇಸರಿ ಬಿಕಿನಿಯು ಹಿಂದೂ ಧರ್ಮಕ್ಕೆ ಹಾನಿಯುಂಟು ಮಾಡುತ್ತದೆ ಎಂಬ ಆರೋಪದ ಮೇಲೆ ಹಾಡನ್ನು ನಿಷೇಧಿಸಬೇಕೆಂದು ಒತ್ತಾಯಿಸಲಾಗಿದೆ.

ಈ ಸಂಬಂಧ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಗುರುವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ, ಅಯೋಧ್ಯೆಯ ಮಹಂತ್ ಹನುಮಾನ್ ಗರ್ಹಿ ರಾಜು ದಾಸ್, ಚಲನಚಿತ್ರವನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
'ಪಠಾಣ್ ಚಿತ್ರವನ್ನು ಪ್ರದರ್ಶನ ಮಾಡುವ ಥಿಯೇಟರ್ಗಳಿಗೆ ಬೆಂಕಿ ಹಚ್ಚುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ' ಎಂದು ಮಹಂತ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ತಮ್ಮ ದೂರಿನಲ್ಲಿ, ದೀಪಿಕಾ ಪಡುಕೋಣೆ ಕೇಸರಿ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದರಿಂದ ಹಾಡು ಅಸಭ್ಯ ಮತ್ತು ಅಶ್ಲೀಲವಾಗಿದೆ. ಇದು ಹಿಂದೂ ಭಾವನೆಗಳನ್ನು ನೋಯಿಸುತ್ತದೆ ಎಂದು ವಕೀಲರು ಹೇಳಿದ್ದಾರೆ.
ಹಾಡಿನ ಹೆಸರು 'ಬೇಷರಂ ರಂಗ್' (ನಾಚಿಕೆಯಿಲ್ಲದ ಬಣ್ಣ), ಮತ್ತು ಇದು ಕೇಸರಿ ಬಣ್ಣವನ್ನು ಪೂಜಿಸುವವರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ವಕೀಲರು ತಮ್ಮ ದೂರಿನಲ್ಲಿ ಬರೆದಿದ್ದಾರೆ.

'ಕೇಸರಿಯು ತ್ಯಾಗ, ಜ್ಞಾನ, ಪರಿಶುದ್ಧತೆ ಮತ್ತು ಸೇವೆಯ ಸಂಕೇತವಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಈ ಹಾಡಿನಲ್ಲಿ ಅಶ್ಲೀಲ ನಡೆಗಳನ್ನು ಪ್ರದರ್ಶಿಸುವ ಮೂಲಕ ಹೆಮ್ಮೆ ಮತ್ತು ಭಕ್ತಿಯ ಬಣ್ಣವನ್ನು ಅವಮಾನಿಸುವ ಕೆಲಸವನ್ನು ಬಾಲಿವುಡ್ ಮಾಡಿದೆ. ಈ ಮೂಲಕ ಕೇಸರಿಯನ್ನು ನಾಚಿಕೆಯಿಲ್ಲದ ಸಂಕೇತವೆಂದು ತೋರಿಸಲಾಗಿದೆ' ಎಂದು ವಕೀಲರು ಬರೆದಿದ್ದಾರೆ.
ಈ ಸಂಬಂಧ ಅಯೋಧ್ಯೆಯ ಮಹಂತ್ ರಾಜು ದಾಸ್ ಅವರು ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಾಡು ನೋವುಂಟುಮಾಡುತ್ತದೆ ಮತ್ತು ಶಾರುಖ್ ಖಾನ್ ಹಿಂದೂ ಧರ್ಮವನ್ನು ಹಲವಾರು ಬಾರಿ ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
'ಬಾಲಿವುಡ್ ಮತ್ತು ಹಾಲಿವುಡ್ ಯಾವಾಗಲೂ ಸನಾತನ ಧರ್ಮವನ್ನು ಗೇಲಿ ಮಾಡಲು ಪ್ರಯತ್ನಿಸುತ್ತವೆ. ದೀಪಿಕಾ ಪಡುಕೋಣೆ ಅವರು ಕೇಸರಿ ಬಳಸುತ್ತಿರುವ ರೀತಿ ನಮಗೆ ನೋವುಂಟು ಮಾಡುತ್ತದೆ. ಕೇಸರಿ ಬಿಕಿನಿಯನ್ನು ಧರಿಸುವ ಅವಶ್ಯಕತೆ ಏನಿತ್ತು? ಚಲನಚಿತ್ರವನ್ನು ಬಹಿಷ್ಕರಿಸುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ಚಿತ್ರ ಪ್ರದರ್ಶನಗೊಳ್ಳುವ ಥಿಯೇಟರ್ಗಳನ್ನು ಸುಟ್ಟು ಹಾಕಿ, ಇಲ್ಲದಿದ್ದರೆ ಅವರಿಗೆ ಅರ್ಥವಾಗುವುದಿಲ್ಲ. ಕೆಟ್ಟದ್ದನ್ನು ಎದುರಿಸಲು ನೀವು ದುಷ್ಟರಾಗಬೇಕು' ಎಂದೂ ಹೇಳಿದ್ದಾರೆ.
'ಇದು ಸರಿಯಲ್ಲ ಎಂದು ನಾನು ಭಾವಿಸುತ್ತೇನೆ ಮತ್ತು ಅದನ್ನು ಸರಿಪಡಿಸಲು ನಾನು ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ಹೇಳುತ್ತೇನೆ. ಈ ಹಿಂದೆಯೂ ದೀಪಿಕಾ ಪಡುಕೋಣೆ ಜೆಎನ್ಯುನಲ್ಲಿ (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) 'ತುಕ್ಡೆ ತುಕ್ಡೆ ಗ್ಯಾಂಗ್' ಬೆಂಬಲಕ್ಕೆ ಬಂದರು' ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಬುಧವಾರ ಹೇಳಿದ್ದಾರೆ.
ಪಠಾಣ್ ಚಿತ್ರಕ್ಕೆ ಒಂದು ಕಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ, 'ಬೇಷರಮ್ ರಂಗ್' ಹಾಡಿಗೆ ಯುಟ್ಯೂಬ್ನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ.
ಹಾಡು ಬಿಡುಗಡೆಯಾಗಿ ಎರಡು ದಿನ ಕಳೆದರೂ, ಯುಟ್ಯೂಬ್ನಲ್ಲಿ ನಂ. ಒನ್ ಟ್ರೆಂಡಿಂಗ್ನಲ್ಲಿದೆ. ಕಳೆದ 48 ಗಂಟೆಗಳಲ್ಲಿ 3 ಕೋಟಿ 60 ಲಕ್ಷಕ್ಕೂ ಹೆಚ್ಚು ಜನ ಬೇಷರಮ್ ರಂಗ್ ಹಾಡನ್ನೂ ವೀಕ್ಷಣೆ ಮಾಡಿದ್ದಾರೆ.
ಚಿತ್ರ ಸಾಹಿತಿ ಕುಮಾರ್ ಸಾಹಿತ್ಯದೊಂದಿಗೆ ವಿಶಾಲ್-ಶೇಖರ್ ಸಂಯೋಜಿಸಿದ ಹಾಟ್ ಹಾಡು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಡುವಿನ ಹಾಟ್ ಕೆಮಿಸ್ಟ್ರಿಯನ್ನು ಎತ್ತಿ ತೋರಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications