Bride Kidnap Video: ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವಿನ ಅಪಹರಣಕ್ಕೆ ಯತ್ನ: ವಿಡಿಯೋ
ವರನ ಕಣ್ಣಿಗೆ ಮೆಣಸಿನ ಪುಡಿ ಹಾಕಿ ವಧುವಿನ ಅಪಹರಣ ಮಾಡಿದ ವಿಚಿತ್ರ ಘಟನೆ ಆಂಧ್ರಪ್ರದೆಶದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ವಧುವನ್ನು ಅಮಾನವೀಯವಾಗಿ ಎಳೆದಾಡಿರುವುದು ಕಂಡು ಬಂದಿದೆ.
ವಿವಾಹ ಕಾರ್ಯಕ್ರಮದಲ್ಲಿ ವಧುವಿನ ಕುಟುಂಬದವರು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಕರೆದೊಯ್ಯಲು ಪ್ರಯತ್ನಿಸಿರುವುದು ಕಂಡು ಬಂದಿದೆ. ಅಪಹರಣವನ್ನು ತಡೆಯಲು ಪ್ರಯತ್ನಿಸುತ್ತಿರುವವರನ್ನು ತಡೆಯಲು ಮೆಣಸಿನ ಪುಡಿಯನ್ನು ಬಳಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವರನ ಸಂಬಂಧಿಕರು ಅಸ್ತವ್ಯಸ್ತರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಗಿದ್ದೇನು?
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಧುವನ್ನು ಆಕೆಯ ಕುಟುಂಬಸ್ಥರು ಅಪಹರಿಸುವ ಯತ್ನ ನಡೆದಿದೆ. ಈ ಘರ್ಷಣೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ ವರನ ಕುಟುಂಬಸ್ಥರ ಮೇಲೂ ವಧುವಿನ ಮನೆಯವರು ಮೆಣಸಿನ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ.
ಆಂಧ್ರಪ್ರದೇಶದ ನರಸರಾವ್ಪೇಟೆ ಜಿಲ್ಲೆಯ ಕಾಲೇಜೊಂದರಲ್ಲಿ ಪಶುವೈದ್ಯಕೀಯ ವಿಜ್ಞಾನದಲ್ಲಿ ಡಿಪ್ಲೊಮಾ ಓದುತ್ತಿದ್ದಾಗ ಸ್ನೇಹಾ ಮತ್ತು ವೆಂಕಟನಂ ನಡುವೆ ಸ್ನೇಹವಾಗಿತ್ತು. ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿದೆ. ಪ್ರೀತಿಸಿ ಏಪ್ರಿಲ್ 13ರಂದು ವಿಜಯವಾಡದ ಪ್ರಸಿದ್ಧ ದುರ್ಗಾ ದೇವಸ್ಥಾನದಲ್ಲಿ ಅವರು ವಿವಾಹವಾಗಿದ್ದರು.
Attempt to #KidnapBride from marriage hall by sprinkling chilli powder; couple, both classmates at veterinary college, had eloped & married at Vijayawada Durga temple on 13th; Groom informed his family, they organised formal event on 21st, from where bride family tried to abduct pic.twitter.com/jXy0l0e2P9
— Uma Sudhir (@umasudhir) April 22, 2024
ಮದುವೆಯ ನಂತರ ಸ್ನೇಹ ಅವರು ವೆಂಕಟನಂ ಅವರ ಮನೆಗೆ ತೆರಳಿದರು. ವೆಂಕಟನಂ ಅವರ ಕುಟುಂಬ ಸದಸ್ಯರು ಏಪ್ರಿಲ್ 21ರಂದು ವಿವಾಹ ಸಮಾರಂಭವನ್ನು ಆಯೋಜಿಸಲು ನಿರ್ಧರಿಸಿದರು. ಈ ಕಾರ್ಯಕ್ರಮಕ್ಕೆ ಸ್ನೇಹಾ ಅವರ ಕುಟುಂಬದವರಿಗೂ ಮಾಹಿತಿ ನೀಡಿ ಆಹ್ವಾನಿಸಲಾಗಿತ್ತು.

ಆದರೆ ಸಮಾರಂಭಕ್ಕೆ ಬಂದ ಸ್ನೇಹಾಳ ತಾಯಿ ಮತ್ತು ಇತರ ಸಂಬಂಧಿಕರು (ಪದ್ಮಾವತಿ, ಚರಣ್ ಕುಮಾರ್, ಚಂದು ಮತ್ತು ನಕ್ಕ ಭರತ್) ಒಳಗೆ ನುಗ್ಗಿ ವರನ ಕುಟುಂಬದವರಿಗೆ ಮೆಣಸಿನ ಪುಡಿಯನ್ನು ಎರಚಿದ್ದಾರೆ. ಅವರ ಮಗಳನ್ನು ಅಪಹರಿಸಿ ಕರೆದೊಯ್ಯಲು ಪ್ರಯತ್ನಿಸಿದ್ದಾರೆ.
ವರ, ಆತನ ಕುಟುಂಬ ಹಾಗೂ ಆತನ ಸ್ನೇಹಿತರು ಇದನ್ನು ವಿರೋಧಿಸಿ ಅಪಹರಣ ಯತ್ನವನ್ನು ವಿಫಲಗೊಳಿಸಿದ್ದಾರೆ. ಘರ್ಷಣೆಯಲ್ಲಿ ವರನ ಸಂಬಂಧಿಕರಲ್ಲೊಬ್ಬರಾದ ವೀರಬಾಬು ಗಂಭೀರವಾಗಿ ಗಾಯಗೊಂಡಿದ್ದು, ರಾಜಮಹೇಂದ್ರವರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಮಾತನಾಡಿದ ಸ್ನೇಹಾ, 'ನನ್ನ ತಾಯಿ, ನನ್ನ ಸಹೋದರ ಮತ್ತು ಸೋದರಸಂಬಂಧಿ ಬಂದು ನನ್ನನ್ನು ಕಿಡ್ನಾಪ್ ಮಾಡಲು ಯತ್ನಿಸಿ ಅಕ್ಕಪಕ್ಕದವರ ಮೇಲೆ ಮೆಣಸಿನ ಪುಡಿ ಎರಚಿದ್ದಾರೆ' ಎಂದು ಹೇಳಿದ್ದಾರೆ. ಈ ಘಟನೆ ವಿರುದ್ಧ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications