ಕನ್ನಡ ಅದ್ಭುತ ಭಾಷೆ, ಎಲ್ಲರೂ ಕಲಿತು ಮಾತನಾಡಿ: ಕ್ಯಾಲಿಫೋರ್ನಿಯಾ ಬುರ್ರಿಟೋ ಸಂಸ್ಥಾಪಕ
ಕನ್ನಡ ಎಂದರೆ ಕನ್ನಡಿಗರಿಗೆ ತಾಯಿ ಇದ್ದಂತೆ. ಆದರೆ ಕರ್ನಾಟಕದಲ್ಲಿರುವ ಅದೆಷ್ಟೋ ಮಂದಿಗೆ ಕನ್ನಡ ಅಂದ್ರೆ ಅಸಡ್ಡೆ. ಕೆಲಸಕ್ಕಾಗಿ ಇಲ್ಲಿಗೆ ಬಂದು ವರ್ಷಗಳೇ ಕಳೆದರೂ ಕನ್ನಡ ಕಲಿಯೋ ಮನಸ್ಸೇ ಮಾಡಲ್ಲ. ಬದಲಾಗಿ ನಾವ್ ಕನ್ನಡ ಕಲಿಯಲ್ಲ, ಕನ್ನಡಿಗರು ಸರಿಯಿಲ್ಲ ಅಂತ ಇಲ್ಲಿಯವರ ಮೇಲೆಯೇ ದರ್ಪ ತೋರುವವರೇ ಹೆಚ್ಚು. ಕನ್ನಡ ಉಳಿಸಿ ಎಂದು ಹೋರಾಟ ನಡೆಯುತ್ತಿರೋ ಈ ಸಂದರ್ಭದಲ್ಲಿ ಅಮೆರಿಕ ಮೂಲದ ಉದ್ಯಮಿ ಮತ್ತು ಕ್ಯಾಲಿಫೋರ್ನಿಯಾ ಬುರ್ರಿಟೋ ಸಂಸ್ಥಾಪಕ ಬರ್ಟ್ ಮುಲ್ಲರ್ ಕನ್ನಡಿಗರ ಮನಗೆದ್ದಿದ್ದಾರೆ. ಕನ್ನಡದ ಬಗ್ಗೆ ಅವರು ಹೇಳಿರುವ ಮಾತುಗಳು ನಿಜಕ್ಕೂ ಹೃದಯ ಉಕ್ಕಿ ಬರುವಂತಿದೆ.
ಹೌದು ಕ್ಯಾಲಿಫೋರ್ನಿಯಾ ಬುರ್ರಿಟೋ ಸಂಸ್ಥಾಪಕ ಬರ್ಟ್ ಮುಲ್ಲರ್ ಅವರು ಬೇರೆ ಊರುಗಳಿಂದ ಕರ್ನಾಟಕಕ್ಕೆ ಬರುವ ಜನರಿಗೆ ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ. ಬೆಂಗಳೂರು ಭಾರತದ ಅಮೆರಿಕ ಇದ್ದಂತೆ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವ ಪ್ರತಿಯೊಬ್ಬರೂ ಕನ್ನಡ ಕಲಿಯಲು ಮತ್ತು ಮಾತನಾಡಲು ಪ್ರಯತ್ನಿಸಬೇಕು ಎಂದು ಮುಲ್ಲರ್ ಸಲಹೆ ನೀಡಿದ್ದಾರೆ.

13ನೇ ವಯಸ್ಸಿನಲ್ಲಿ ಅಮೆರಿಕ ತೊರೆದು ಭಾರತಕ್ಕೆ ಬಂದಿದ್ದ ಬರ್ಟ್ ಮುಲ್ಲರ್ ಇಲ್ಲಿಯೇ ಶಿಕ್ಷಣ ಮುಗಿಸಿ, ದಕ್ಷಿಣ ಕ್ಯಾಲಿಫೋರ್ನಿಯಾ ಶೈಲಿಯ ಬುರ್ರಿಟೋ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದರು. ಇತ್ತೀಚೆಗೆ ಸಂದರ್ಶನ ನೀಡಿರುವ ನೀಡಿರುವ ಅವರು ಕನ್ನಡದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ನಾವು ನಮ್ಮದಲ್ಲದ ಸ್ಥಳಕ್ಕೆ ಹೋದಾಗ ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪವಾದರೂ ಕಲಿಯಲು ಪ್ರಯತ್ನಿಸಬೇಕು ಎನ್ನುವುದು ನನ್ನ ಅಭಿಪ್ರಾಯ. ನಾನು ಕೂಡ ಸ್ವಲ್ಪ ಕನ್ನಡ ಮಾತನಾಡುತ್ತೇನೆ. ಕನ್ನಡ ನಿಜಕ್ಕೂ ಅದ್ಭುತ ಭಾಷೆಯಾಗಿದ್ದು, ಕರ್ನಾಟಕಕ್ಕೆ ಬರುವ ಪ್ರತಿಯೊಬ್ಬರೂ ಕನ್ನಡ ಕಲಿಯಬೇಕು. ಕನ್ನಡದಲ್ಲೇ ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.
ಅಂಬರೀಶ್-ಸುದೀಪ್ ಸಿನಿಮಾ ನೋಡಿದ್ದೇನೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ ಉಳಿದಿದ್ದ ಬರ್ಟ್ ಮುಲ್ಲರ್ ಅವರು ಕನ್ನಡ ನಟರಾದ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹಲವು ಸಿನಿಮಾಗಳನ್ನು ನೋಡಿರುವುದಾಗಿಯೂ ಸಂದರ್ಶನದಲ್ಲಿ ಹೇಳಿದ್ದಾರೆ. 35 ವರ್ಷದ ಮುಲ್ಲರ್ 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿಳಿದಿದ್ದರು. ಬಳಿಕ ಅವರ ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ ಮುಲ್ಲರ್ ಬೆಂಗಳೂರಿನಲ್ಲಿಯೇ ಉಳಿಯಲು ನಿರ್ಧರಿಸಿದ್ದರು. ನಂತರ ಅವರು ಇಲ್ಲಿಯೇ "ಕ್ಯಾಲಿಫೋರ್ನಿಯಾ ಬುರ್ರಿಟೋ" ರೆಸ್ಟೋರೆಂಟ್ ತೆರೆಯುವ ಮೂಲಕ ಯಶಸ್ವಿ ಉದ್ಯಮಿಯಾಗಿದ್ದಾರೆ. ಈ ವಿಡಿಯೋ ನೋಡಿ ಕನ್ನಡಿಗರೆಲ್ಲ ಖುಷಿಯಾಗಿದ್ದು, ಮುಲ್ಲರ್ ಅವರನ್ನು ಕನ್ನಡದ ಕಂದ ಎಂದು ಕರೆದಿದ್ದಾರೆ.

ಅಮೇರಿಕನ್ ಉದ್ಯಮಿಯಾದ ಬರ್ಟ್ ಮುಲ್ಲರ್ ಮೆಕ್ಸಿಕನ್-ಪ್ರೇರಿತ ಪಾಕಪದ್ಧತಿಯನ್ನು ಭಾರತೀಯ ಅಭಿರುಚಿಗಳಿಗೆ ಪರಿಚಯಿಸುವ ಕನಸಿನೊಂದಿಗೆ ಬೆಂಗಳೂರಿಗೆ ತೆರಳಿದರು. ಇಂದು ಅವರ ಕ್ಯಾಲಿಫೋರ್ನಿಯಾ ಬುರ್ರಿಟೋ ಭಾರತದಾದ್ಯಂತ 103 ಮಳಿಗೆಗಳನ್ನು ಹೊಂದಿದ್ದು, ವಾರ್ಷಿಕ 196 ಕೋಟಿ ಆದಾಯ ಹೊಂದಿರುವ ಬ್ರ್ಯಾಂಡ್ ಆಗಿ ಬೆಳೆದಿದೆ.
-
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Bengaluru BMTC: ಡ್ರೈವರ್ ಸಾಹೇಬ್ರೆ ಶಾಲಾ ಮಕ್ಕಳು ಕಾಣಿಸಿದರೆ ಬಸ್ ನಿಲ್ಲಿಸಿ: ಕಂಡಕ್ಟರ್ ವಿಡಿಯೋ ವೈರಲ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications