ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚಿಸಿದ ಪ್ರಾಧಿಕಾರ
ನವದೆಹಲಿ, ಆಗಸ್ಟ್ 31: ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಮತ್ತೊಮ್ಮೆ ರಾಜ್ಯಕ್ಕೆ ಕಹಿ ಸುದ್ದಿ ಸಿಕ್ಕಿದೆ. ಪೂರ್ವನಿಗದಿಯಂತೆ ತಮಿಳುನಾಡಿಗೆ ಮಳೆನಾಡಿನ ಅವಧಿಯ ಕಾವೇರಿ ನದಿ ನೀರು ಹರಿಸುವಂತೆ ಪ್ರಾಧಿಕಾರ ಇಂದು ಸೂಚಿಸಿದೆ.
ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳುಗಳಲ್ಲಿ ತಮಿಳುನಾಡಿಗೆ ಹರಿಸಬೇಕಾದ ನೀರಿನ ಪ್ರಮಾಣ 30.6 ಟಿಎಂಸಿ ಬಾಕಿಯನ್ನು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್. ಕೆ ಹಲ್ದರ್ ಸೂಚಿಸಿದ್ದಾರೆ.
ತಮಿಳುನಾಡಿನ ಮೆಟ್ಟೂರ್ ಅಣೆಕಟ್ಟಿಗೆ ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆಗಸ್ಟ್ 31ರಂದು ಸೂಚಿಸಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ 11ನೇ ಸಭೆಯಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ನೀರು ಹರಿಸುವಂತೆ ಸಿಡಬ್ಲುಎಂಎ ಅಧ್ಯಕ್ಷತೆ ವಹಿಸಿದ್ದ ಹಲ್ದರ್ ಸೂಚಿಸಿದರು. ಕರ್ನಾಟಕದ ಅಣೆಕಟ್ಟುಗಳಲ್ಲಿ ನೀರಿನ ಒಳ ಹರಿವು ಕಡಿಮೆ ಇದೆ ಎಂಬ ಕರ್ನಾಟಕದ ವಾದವನ್ನು ಪುರಸ್ಕರಿಸಲಿಲ್ಲ.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಸದಸ್ಯರು ಮತ್ತು ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳದ ಸದಸ್ಯರು ಉಪಸ್ಥಿತರಿದ್ದರು. ತಮಿಳುನಾಡು ಪರವಾಗಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ, ಕಾವೇರಿ ತಾಂತ್ರಿಕ ಸಮಿತಿಯ ಅಧ್ಯಕ್ಷರು ಉಪಸ್ಥಿತರಿದ್ದರು. ತಮಿಳುನಾಡಿಗೆ ಹರಿಸಬೇಕಾದ ನೀರಿನ ಪ್ರಮಾಣ ಇನ್ನಿತರ ವಿವರ ಮುಂದಿದೆ...

ಆಗಸ್ಟ್ ಅಂತ್ಯಕ್ಕೆ 86 ಟಿಎಂಸಿ ಅಡಿ ನೀರು ಹರಿಸಬೇಕು
ಕಾವೇರಿ ನದಿ ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್ ಆದೇಶದ ಅನ್ವಯ ಪ್ರತಿ ತಿಂಗಳು ಇಂತಿಷ್ಟು ನೀರು ಹರಿಸಬೇಕು ಎಂದು ನಿಗದಿಯಾಗಿದೆ. ಅದರಂತೆ ಜೂನ್ ತಿಂಗಳಿನಲ್ಲಿ 9.19 ಟಿಎಂಸಿ, ಜುಲೈ ತಿಂಗಳಿನಲ್ಲಿ 31.24 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಕರ್ನಾಟಕ ಹರಿಸಬೇಕಾಗಿತ್ತು. ಆಗಸ್ಟ್ ಅಂತ್ಯಕ್ಕೆ 86 ಟಿಎಂಸಿ ಅಡಿಗಳಷ್ಟು ನೀರು ಹರಿಸಬೇಕಾಗಿದ್ದು, ಸದ್ಯ 57 ಟಿಎಂಸಿ ನೀರು ಹರಿಸಲಾಗಿದೆ ಎಂದು ಕರ್ನಾಟಕ ತಿಳಿಸಿದೆ. ನೀರು ಹಂಚಿಕೆ ಸಂಬಂಧ ಪುದುಚೇರಿ ಹಾಗೂ ತಮಿಳುನಾಡಿನ ನಡುವೆ ಆಗಿರುವ ಒಪ್ಪಂದ ಮುಂದುವರೆಯಲಿದೆ ಎಂದು ಸಭೆಯ ನಂತರ ಹಲ್ದರ್ ಹೇಳಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 67.16 ಟಿಎಂಸಿ ಅಡಿ. ಯೋಜನೆ ಪೂರ್ಣಗೊಂಡರೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು ಎಂದು ಸರ್ಕಾರ ಹೇಳಿದೆ. ಮೇಕೆದಾಟು ಯೋಜನೆಯ ಒಟ್ಟು ವೆಚ್ಚ 5912 ಕೋಟಿ ರೂ. ಗಳು. ಆದರೆ, ಸಭೆಯಲ್ಲಿ ಈ ಬಗ್ಗೆ ತಮಿಳುನಾಡು ಪ್ರತಿನಿಧಿಗಳು ಆಕ್ಷೇಪ ತೆಗೆದರು.
ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ 2013ರಲ್ಲಿ ಪ್ರಸ್ತಾವನೆ ಸಿದ್ಧಪಡಿಸಿತ್ತು. ಯೋಜನೆಗೆ ತಮಿಳುನಾಡು, ಪುದುಚೇರಿ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಯೋಜನೆ ಜಾರಿಯಾದರೆ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣ ಕಡಿಮೆಯಾಗಲಿದೆ ಎಂಬುದು ತಮಿಳುನಾಡು ಸರ್ಕಾರದ ವಾದವಾಗಿದೆ. ಮೇಕೆದಾಟು ಯೋಜನೆ ಹಾಗೂ ಗುಂಡಾರು ಯೋಜನೆ ಬಗ್ಗೆ ವಾದ -ಪ್ರತಿವಾದ ಮುಂದುವರೆದಾಗ ಚರ್ಚೆಯನ್ನು ಮುಂದೂಡಲಾಯಿತು.

ಜಲಾಶಯಗಳು ಇನ್ನೂ ತುಂಬಿಲ್ಲ
ಕೆಆರ್ ಎಸ್ , ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯ ತುಂಬಿಲ್ಲ. ಬೆಂಗಳೂರಿಗೆ ಪ್ರತಿ ತಿಂಗಳಿಗೆ 4 ಟಿಎಂಸಿಯಷ್ಟು ಕುಡಿಯುವ ನೀರಿನ ಬೇಡಿಕೆ ಇರುವುದರಿಂದ, ರಾಜ್ಯದಲ್ಲಿ ಮುಂಗಾರು ವಿಳಂಬ, ಅಣೆಕಟ್ಟಿಗೆ ಒಳಹರಿವು ಹೆಚ್ಚಾಗದಿರುವುದರಿಂದ ನೀರು ಹರಿಸಲು ಕಷ್ಟ ಎಂದು ಕರ್ನಾಟಕದ ಪ್ರತಿನಿಧಿಗಳು ಹೇಳಿದರು.
ಕಾವೇರಿಕೊಳ್ಳದ ಜಲಾಶಯಗಳ ನೀರಿನ ಮಟ್ಟ( ಆಗಸ್ಟ್ 31)
- ಹಾರಂಗಿ: 871.08 ಮೀ(ಪೂರ್ಣ ಮಟ್ಟ 871.38 ಮೀ/2859.0 ಅಡಿ)
- ಹೇಮಾವತಿ: 889.05 ಮೀ (890.58ಮೀ/2922.0 ಅಡಿ)
- ಕೃಷ್ಣರಾಜ ಸಾಗರ: 35.79 ಮೀ (38.04 ಮೀ/124.80 ಅಡಿ)
- ಕಬಿನಿ: 695.20 ಮೀ (696.13 ಮೀ/2284.0 ಅಡಿ)
ಕಾವೇರಿಕೊಳ್ಳದ ಜಲಾಶಯಗಳ ಒಟ್ಟು ಸಾಮರ್ಥ್ಯ 114.57 ಟಿಎಂಸಿ ಇಂದಿನ ಮಟ್ಟ 98.05 ಟಿಎಂಸಿ (109.89 ಟಿಎಂಸಿ ಕಳೆದ ವರ್ಷ ಇದೇ ಅವಧಿ)
* ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ.

ಸುಪ್ರೀಂಕೋರ್ಟ್ ಕಾವೇರಿ ವಿವಾದ ಅಂತಿಮ ತೀರ್ಪು
ಕರ್ನಾಟಕದಿಂದ ತಮಿಳುನಾಡಿಗೆ ವಾರ್ಷಿಕವಾಗಿ 177 ಟಿಎಂಸಿ ಅಡಿ ಕಾವೇರಿ ಬಿಡಬೇಕು, ಆದರೆ, ಅಗತ್ಯಕ್ಕೆ ತಕ್ಕಂತೆ ಕರ್ನಾಟಕ ರಾಜ್ಯವು ತನ್ನ ನೀರಾವರಿ ಸಂಪತ್ತನ್ನು ವಿಸ್ತರಿಸಿಕೊಳ್ಳಬಹುದು ಎನ್ನಲಾಗಿದೆ. ಹೀಗಾಗಿ ಅಣೆಕಟ್ಟು ನಿರ್ಮಾಣದ ಕರ್ನಾಟಕದ ಪ್ರಸ್ತಾವನೆಗೆ ಬಲ ಸಿಕ್ಕಿದೆ.ಆದರೆ, ಪ್ರಸ್ತಾವಿತ ಮೇಕೇದಾಟು ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ, ಪ್ರಧಾನಿ ಮೋದಿ ಅವರಿಗೆ ತಮಿಳುನಾಡು ಸರ್ಕಾರ ಪತ್ರ ಬರೆದಿದೆ. ಒಟ್ಟಾರೆ, ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪಿನಂತೆ ವಾರ್ಷಿಕ ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಲಭ್ಯವಾಗಿದೆ. ಇದರಲ್ಲಿ 4.75 ಟಿಎಂಸಿ ನೀರು ಬೆಂಗಳೂರಿನ ಕುಡಿಯುವ ನೀರಿಗೆ ಬಳಕೆ ಮಾಡಬಹುದು.
ಅಂತಿಮ ತೀರ್ಪು: ತಮಿಳುನಾಡಿಗೆ ಕರ್ನಾಟಕದಿಂದ ಹರಿಸಬೇಕಾದ ನೀರಿನ ಪ್ರಮಾಣವೆಷ್ಟು?-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications