ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ, ಅಂತಿಮ ತನಿಖಾ ವರದಿ ಬಹಿರಂಗ

|
Google Oneindia Kannada News

ನವದೆಹಲಿ, ಜನವರಿ 14: ಸಿಡಿಎಸ್ ಬಿಪಿನ್ ರಾವತ್ ಅವರಿದ್ದ ವಾಯುಪಡೆಯ ಹೆಲಿಕಾಪ್ಟರ್ ದುರಂತ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಅಂತಿಮ ತನಿಖಾ ವರದಿ ಬಹಿರಂಗಗೊಂಡಿದೆ. ಈ ವರದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಕೈ ಸೇರಲಿದೆ. ದುರಂತ ನಡೆದ ದಿನದಿಂದಲೇ ಆರಂಭವಾಗಿದ್ದ ತನಿಖೆ ಒಂದು ತಿಂಗಳ ನಂತರ ಪೂರ್ಣಗೊಂಡಿದೆ. ದುರಂತ ಘಟನೆಗೆ ಕಾರಣವಾಗಿರಬಹುದಾದ ಎಲ್ಲ ಸನ್ನಿವೇಶಗಳನ್ನು ತನಿಖಾ ತಂಡವು ವಿಶ್ಲೇಷಿಸಿದ್ದು, ಪ್ರಾಥಮಿಕ ತನಿಖೆಯ ಬಳಿಕ ಈ ದುರಂತಕ್ಕೆ ಪ್ರತಿಕೂಲ ಹವಾಮಾನದಲ್ಲಿ ಹೆಲಿಕಾಪ್ಟರ್ ಹಾರಾಟವೇ ಕಾರಣ, ತಾಂತ್ರಿಕ ದೋಷವಲ್ಲ ಎಂದು ತಿಳಿದು ಬಂದಿದೆ.

"ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಮೋಡಗಳಿಗೆ ಪ್ರವೇಶಿಸಿದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇದು ಪೈಲಟ್‌ನ ಪ್ರಾದೇಶಿಕ ದಿಗ್ಭ್ರಮೆಗೆ ಕಾರಣವಾಯಿತು, ಇದರ ಪರಿಣಾಮವಾಗಿ ನಿಯಂತ್ರಿತ ಫ್ಲೈಟ್ ಇನ್ಟು ಟೆರೇನ್ (CFIT) ಹಂತ ತಲುಪಿದೆ. ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಅಪಘಾತದ ಅತ್ಯಂತ ಸಂಭವನೀಯ ಕಾರಣವನ್ನು ನಿರ್ಧರಿಸಲು ಲಭ್ಯವಿರುವ ಎಲ್ಲಾ ಸಾಕ್ಷಿಗಳನ್ನು ಪ್ರಶ್ನಿಸುವುದರ ಜೊತೆಗೆ, ವಿಮಾನದ ಡೇಟಾವನ್ನು ವಿಶ್ಲೇಷಿಸಿದ ನಂತರ ತಂಡವು ಈ ಕಾರಣ ಕಂಡುಹಿಡಿದಿದೆ.

CDS Bipin Rawats Chopper Crash: Pilot Error In Cloudy Weather, Here is Inquiry Finds

ಪೈಲಟ್‌ನ ಸಂಪೂರ್ಣ ನಿಯಂತ್ರಣದಲ್ಲಿರುವಾಗ ಹಾರಾಟ ಯೋಗ್ಯವಾದ ವಿಮಾನವು ಅಜಾಗರೂಕತೆಯಿಂದ ಭೂಪ್ರದೇಶ, ನೀರು ಅಥವಾ ಅಡಚಣೆಗೆ ಹಾರಿದಾಗ CFIT ಸಂಭವಿಸುತ್ತದೆ. IATA (ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್) ಪ್ರಕಾರ, CFIT ಪದವು ಭೂಪ್ರದೇಶ, ನೀರು ಅಥವಾ ಇನ್ನೊಂದು ಅಡಚಣೆಯೊಂದಿಗೆ ನಿಯಂತ್ರಣದ ನಷ್ಟದ ಸೂಚನೆಯಿಲ್ಲದೆ ವಿಮಾನದಲ್ಲಿ ಘರ್ಷಣೆ ಸಂಭವಿಸುವ ಅಪಘಾತಗಳನ್ನು ಸೂಚಿಸುತ್ತದೆ.

ಯುನೈಟೆಡ್ ಸ್ಟೇಟ್ಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ CFIT ಪ್ರಕಾರ ''...ವಿಮಾನವು ಪಾಸಿಟಿವ್ ನಿಯಂತ್ರಣದಲ್ಲಿರುವಾಗ ಭೂಪ್ರದೇಶದೊಂದಿಗೆ (ನೆಲ, ಪರ್ವತ, ನೀರಿನ ದೇಹ, ಅಥವಾ ಅಡಚಣೆ) ಉದ್ದೇಶಪೂರ್ವಕವಲ್ಲದ ಘರ್ಷಣೆ." ಎನ್ನಲಾಗಿದೆ.

ತನಿಖೆ:
ಏರ್ ಮಾರ್ಷಲ್ ಮಾನವೇಂದ್ರ ಸಿಂಗ್​​ ನೇತೃತ್ವದ ಭಾರತೀಯ ವಾಯುಪಡೆಯ (ಐಎಎಫ್) ಉನ್ನತ ಅಧಿಕಾರಿಗಳು ತನಿಖೆ ನಡೆಸಿದ್ದು, ಈ ತಂಡವು ಹೆಲಿಕಾಪ್ಟರ್​​ನಲ್ಲಿ ಸಂಭವಿಸಿರಬಹುದಾದ ಮಾನವ ದೋಷ ಅಥವಾ ಹೆಲಿಕಾಪ್ಟರ್ ಲ್ಯಾಂಡಿಂಗ್‌ ತಯಾರಿಯಲ್ಲಿ ನಡೆದಿರಬಹುದಾದ ಸಮಸ್ಯೆಯ ಸಂಭವನೀಯ ಸನ್ನಿವೇಶಗಳನ್ನು ಪರಿಶೀಲನೆ ನಡೆಸಿದ್ದಾರೆ.
ಹೆಲಿಕಾಪ್ಟರ್‌ ದುರಂತ ಯಾವುದೇ ತಾಂತ್ರಿಕ ದೋಷದಿಂದ ಆಗಿಲ್ಲ ಎಂದು ವಾಯಪಡೆಯ ಮೂಲಗಳು ಹೇಳಿದ್ದರೂ ಕೂಡಾ, ಅಧಿಕೃತವಾಗಿ ದೃಢೀಕರಣವಿಲ್ಲದ ಕಾರಣದಿಂದ ಈ ವಿಚಾರದ ಬಗ್ಗೆಯೂ ತನಿಖೆ ನಡೆಸಲಾಗಿದೆ.

ವಿಡಿಯೋ: ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್ ಅಪಘಾತದ ಕೊನೆಯ ಕ್ಷಣಗಳು ಸೆರೆವಿಡಿಯೋ: ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್ ಅಪಘಾತದ ಕೊನೆಯ ಕ್ಷಣಗಳು ಸೆರೆ

ಡಿಸೆಂಬರ್ 8ರಂದು, ಭಾರತೀಯ ವಾಯುಸೇನೆ ನಿರ್ವಹಿಸುತ್ತಿದ್ದ Mi-17V-5 ಹೆಲಿಕಾಪ್ಟರ್ ಸೂಲೂರು ಏರ್ ಫೋರ್ಸ್ ಸ್ಟೇಷನ್‌ನಿಂದ ಹೊರಟು ತಮಿಳುನಾಡಿನ ಕೊಯಮತ್ತೂರು ಮತ್ತು ವೆಲ್ಲಿಂಗ್ಟನ್ ನಡುವೆ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಇತರ 13 ಮಂದಿ ಹುತಾತ್ಮರಾಗಿದ್ದರು.

ತಮಿಳುನಾಡಿವ ಕೂನೂರ್​ ಬಳಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು ಇತರ 12 ಸೇನಾ ಅಧಿಕಾರಿಗಳು ಮೃತಪಟ್ಟ ಪ್ರಕರಣದ ತನಿಖಾ ವರದಿಯನ್ನು ಮೂರೂ ಸೇವೆಗಳ (ಭೂಸೇನೆ, ವಾಯುಸೇನೆ, ನೌಕಾಪಡೆ) ತನಿಖಾ ತಂಡ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ರಿಗೆ ಸಲ್ಲಿಸಲಿದೆ ಎಂದು ಹೇಳಲಾಗಿದೆ.

Mi-17V5 ಸೇನಾ ಹೆಲಿಕಾಪ್ಟರ್ ಇದು ವಿವಿಐಪಿ ಹೆಲಿಕಾಪ್ಟರ್ ಆಗಿದ್ದು, ಪ್ರಮುಖ ವ್ಯಕ್ತಿಗಳು ಪ್ರಯಾಣ ಮಾಡುವಾಗ ಎಲ್ಲ ರೀತಿಯ ಪರಿಶೀಲನೆ ಮಾಡಿಯೇ ಕಳಿಸಲಾಗುತ್ತದೆ. ಹಾಗಿದ್ದಾಗ್ಯೂ ಕೂಡ ತಮಿಳುನಾಡಿನ ಬಳಿ ಪತನಗೊಂಡು ಪ್ರಮುಖ ಅಧಿಕಾರಿಗಳು ಮೃತಪಟ್ಟಿದ್ದರು. ಚಾಪರ್​ ಪತನಕ್ಕೆ ಕಾರಣವೇನು ಎಂಬ ಬಗ್ಗೆ ಸೇನೆಯ ಮೂರೂ ವಿಭಾಗಗಳಿಂದ ತನಿಖಾ ತಂಡ ನಿಯೋಜಿಸಲಾಗಿದ್ದು, ಅವರು ತಮ್ಮ ತನಿಖಾ ವರದಿಯನ್ನು ಇಂದು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಇನ್ನು ಸಿಡಿಎಸ್​ ಜನರಲ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳು ಪ್ರಯಾಣ ಮಾಡುತ್ತಿದ್ದ ಈ ಚಾಪರ್​ ತುಂಬ ಕೆಳಗೆ ಹೋಗುತ್ತಿತ್ತು.

Recommended Video

ಟೆಸ್ಟ್ ಸರಣಿ ಸೋಲಿಗೆ ಯಾರು ಕಾರಣ ಎಂದು ತಿಳಿಸಿದ‌ Virat Kohli | Oneindia Kannada

ಹೆಲಿಕಾಪ್ಟರ್​ ಅಪಘಾತದ ಕೊನೇ ಹಂತದಲ್ಲಿ ಅದರಲ್ಲಿ ಇದ್ದ ಪೈಲಟ್​​ಗಳು ಸಮೀಪದ ಏರ್​ಸ್ಟೇಶನ್​​ಗಳಿಗೆ ಯಾವುದೇ ಕರೆ ಮಾಡಿಲ್ಲ. ಹೀಗಾಗಿ ಅವರಿಗೆ ಕೊನೇ ಕ್ಷಣದವರೆಗೂ ಎಮರ್ಜನ್ಸಿ ಇದೆ ಎಂದು ಅನ್ನಿಸಲಿಲ್ಲ ಎನ್ನಿಸುತ್ತದೆ. ಎಲ್ಲವೂ ಒಂದೇ ಬಾರಿಗೆ ಆಗಿಹೋಯಿತು ಎಂದೂ ತನಿಖಾ ತಂಡಗಳ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಎಎನ್​ಐ ತಿಳಿಸಿದೆ.

English summary
Pilot error caused the chopper crash that led to Chief of Defence Staff General Bipin Rawat's death last month, according to preliminary findings of the inquiry team investigating the matter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X