IPL 2025: ಆರ್ಸಿಬಿ ಗೆಲುವಿಗಾಗಿ ಮಹಾ ಕುಂಭಮೇಳದಲ್ಲಿ ವಿಶೇಷ ಪ್ರಾರ್ಥನೆ
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಅತಿ ದೊಡ್ಡ ಧಾರ್ಮಿಕ ಉತ್ಸವಾಗಿರುವ ಮಹಾ ಕುಂಭಮೇಳಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಈಗಾಗಲೇ ಒಂದು ತಿಂಗಳಲ್ಲಿಯೇ 50 ಕೋಟಿ ಭಕ್ತರು ಭಾಗಿಯಾಗಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸುಮಾರು 45 ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆಯಿತ್ತು ಆದರೆ ಆಯೋಜಕರ ನಿರೀಕ್ಷೆಗೂ ಮೀರಿದ ಜನದಟ್ಟಣೆಯಾಗುತ್ತಿದ್ದು, ಮುಗಿಯುವ ವೇಳೆ ಅರವತ್ತು ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆಯಿದೆ.
144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ಕರ್ನಾಟದದಿಂದಲೂ ಅಸಂಖ್ಯಾತ ಜನರು ತೆರಳುತ್ತಿದ್ದು, ಇನ್ನೂ ಲಕ್ಷಾಂತರ ಭಕ್ತರು ಮಹಾ ಕುಂಭಮೇಳಕ್ಕೆ ತೆರಳಲು ಸಜ್ಜಾಗುತ್ತಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ಮಹಾ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಇನ್ನೂ ಎಂಟು ದಿನಗಳ ಕಾಲ ಮಹಾ ಕುಂಭಮೇಳ ನಡೆಯಲಿದೆ.

ಕರ್ನಾಟದದಿಂದಲೂ ಸಾವಿರಾರು ಭಕ್ತರು ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರುಳುತ್ತಿದ್ದು, ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯದ ದೇವೇಂದ್ರ ಎನ್ನುವವರು ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರಳಿ ಸುದ್ದಿಯಾಗಿದ್ದಾರೆ. ಮಹಾ ಕುಂಭಮೇಳಕ್ಕೆ ಹೋದ ದೇವೇಂದ್ರ ವೈಯಕ್ತಿಕ ಯಶಸ್ಸು ಮಾತ್ರವಲ್ಲ, ಜನರಿಗಾಗಿ ಏಳು ಬೇಡಿಕೆಗಳನ್ನು ದೇವರ ಮುಂದಿಟ್ಟು ಪುಣ್ಯಸ್ನಾನ ಮಾಡಿದ್ದಾರೆ. ಅದರಲ್ಲಿ ಎರಡು ಬೇಡಿಕೆಗಳು ಎಲ್ಲರ ಗಮನ ಸೆಳೆದಿದೆ.
ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಸಂಪೂರ್ಣ ನಿಂತು ಹೋಗಬೇಕು, ಈ ಬಾರಿ ಆರ್ಸಿಬಿ ಅಭಿಮಾನಿಗಳ ಆಸೆ ಈಡೇರಬೇಕು ಎನ್ನುವ ದೇವೇಂದ್ರ ಅವರ ಬೇಡಿಕೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಉಳಿದಂತೆ 25 ವರ್ಷ ಮೇಲ್ಪಟ್ಟ ಎಲ್ಲರಿಗೂ ಕಂಕಣ ಭಾಗ್ಯ ಸಿಗಲಿ, ಮಲೆನಾಡಿನ ಒತ್ತುವರಿ ಸಮಸ್ಯೆ ಬಗೆಹರಿಯಲಿ,

ರಾಜನ ಅಳ್ವಿಕೆ ಹೋಗಲಿ, ಪ್ರಜೆಗಳು ರಾಜರಾಗಲಿ, ಕಾಲ ಕಾಲಕ್ಕೆ ತಕ್ಕಂತೆ ಮಳೆಯಾಗಿ ರೈತರ ಬೆಳೆ ಉತ್ತಮವಾಗಲಿ, ಮಲೆನಾಡಿನ ಭಾಗದಲ್ಲಿ ಪ್ರಾಣಿಗಳಿಂದ ಆಗುತ್ತಿರುವ ಪ್ರಾಣಿ ಹಾನಿ ನಿಲ್ಲಲಿ ಎಂದು ತಮ್ಮ ಏಳು ಬೇಡಿಕೆಗಳನ್ನು ದೇವೇಂದ್ರ ಬ್ಯಾನರ್ನಲ್ಲಿ ಮುದ್ರಿಸಿಕೊಂಡು ಬಂದಿದ್ದರು. ಇನ್ನು ವಿಶೇಷವೆಂದರೆ ತಮ್ಮ ಬೇಡಿಕೆ ಈಡೇರಿಕೆಗೆ ಪ್ರಾರ್ಥಿಸಿ ದೇವೇಂದ್ರ ಗಂಗಾ, ಯಮುನಾ ಮತ್ತು ಸರಸ್ವತಿ ಮಹಾ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 101 ಬಾರಿ ಮುಳುಗೆದಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications