ಅಕ್ಷಯ ತೃತೀಯದಂದು ಬಾಲ್ಯ ವಿವಾಹ..ಏನಿದು ಅನಿಷ್ಟ ಪದ್ಧತಿ?
ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಮುಗಿಬೀಳುವುದು ಇತ್ತೀಚೆಗೆ ಹೆಚ್ಚಾಗುತ್ತದೆ. ಆದರೆ ಇದನ್ನು ಮೀರಿ ಈ ದಿನಗಳಲ್ಲಿ ಬಾಲ್ಯವಿವಾಹ ಮಾಡಿದರೆ ಒಳಿತಾಗುತ್ತದೆ ಎಂಬ ಮೂಢನಂಬಿಕೆಯೂ ಜನರಲ್ಲಿದೆ ಎಂದರೆ ಅಚ್ಚರಿಯಾಗಬಹುದು ಆದರೆ ಇದು ಸತ್ಯ. ನಾವೆಲ್ಲರೂ ಒಂದಲ್ಲ ಒಂದು ನಂಬಿಕೆಗೆ ಜೋತು ಬಿದ್ದವರೇ ಆದರೆ ಮೂಢನಂಬಿಕೆ ಯಾವುದು? ನಂಬಿಕೆ ಯಾವುದು? ಎಂಬುದನ್ನು ಅರಿತುಕೊಳ್ಳದೆ ವಿವಾಹದ ವಿಚಾರದಲ್ಲಿ ಅನಾದಿ ಕಾಲದಿಂದ ರೂಢಿಗೆ ಬಂದ ಮೂಢನಂಬಿಕೆಯನ್ನು ಅನುಸರಿಸಿದರೆ ಅದು ಹೆತ್ತವರನ್ನು ಸಂಕಷ್ಟಕ್ಕೆ ದೂಡುವುದಲ್ಲದೆ, ಮಕ್ಕಳ ಭವಿಷ್ಯದ ಮೇಲೆಯೂ ಪರಿಣಾಮ ಬೀರಲಿದೆ.
ಹಿಂದಿನ ಕಾಲದಲ್ಲಿ ಬಹುತೇಕರು ಅವಿದ್ಯಾವಂತರಾಗಿದ್ದರು. ಹೀಗಾಗಿ ಯಾವುದನ್ನೂ ವಿಮರ್ಶಿಸಿ ನೋಡುತ್ತಿರಲಿಲ್ಲ. ಅಲ್ಲದೆ ಕೆಲವರು ತಮ್ಮ ಅನುಕೂಲಕ್ಕಾಗಿ ಇತರರನ್ನು ದಾರಿ ತಪ್ಪಿಸುವ ಸಂಪ್ರದಾಯಕ್ಕೆ ಮುನ್ನುಡಿ ಬರೆದಿದ್ದು ಅದನ್ನೇ ಮತ್ತೆ ಕೆಲವರು ಮುಂದುವರೆಸಿದರು. ಅವತ್ತಿನ ಕಾಲಕ್ಕೆ ಅದನ್ನು ಪ್ರಶ್ನೆ ಮಾಡದೆ ಒಪ್ಪಿಕೊಂಡು ಬಂದ ಪರಿಣಾಮ ಮುಂದುವರೆಯುತ್ತಿದೆ. ಆದರೂ ಕೆಲವೊಂದು ಮೂಢನಂಬಿಕೆಗಳಿಗೆ ಆಯಾಯ ಕಾಲಘಟ್ಟದಲ್ಲಿ ಸಮಾಧಿ ಕಟ್ಟಲಾಗಿದೆ. ಕೆಲವೊಂದು ಇವತ್ತಿಗೂ ಮುಂದುವರೆದುಕೊಂಡು ಬಂದಿರುವುದು ದುರಂತದ ಸಂಗತಿಯಾಗಿದೆ.

ಇತ್ತೀಚೆಗಿನ ವರ್ಷಗಳಲ್ಲಿ ಹಲವು ಸಂಪ್ರದಾಯಗಳಿಗೆ ಹೊಳಪು ಬಂದಿದೆ. ಹಾಗೆಯೇ ಗೊಡ್ಡು ಸಂಪ್ರದಾಯಕ್ಕೆ ಎಳ್ಳು ನೀರು ಬಿಡಲಾಗಿದೆ. ಆದರೂ ಕೆಲವು ಇನ್ನೂ ಆಚರಣೆಯಲ್ಲಿದೆ ಎನ್ನುವುದೇ ಬೇಸರ ತರುತ್ತಿದೆ. ಅಂತಹ ಸಂಪ್ರದಾಯವನ್ನು ನಿಷೇಧಿಸಿ ಅದರ ಸುತ್ತಲೂ ಕಣ್ಗಾವಲು ಇಟ್ಟರೂ ಕಣ್ಣಿಗೆ ಮಣ್ಣೆರಚಿ ನಡೆಯುತ್ತವೆ. ಅನಾದಿ ಕಾಲದಿಂದ ನಡೆದು ಬಂದ ಅನಿಷ್ಟ ಪದ್ಧತಿಯಾಗಿರುವ ಬಾಲ್ಯ ವಿವಾಹವನ್ನು ಇವತ್ತು ನಿಷೇಧ ಮಾಡಲಾಗಿದೆ. ಆದರೂ ಅದು ಕಣ್ತಪ್ಪಿ ನಡೆಯುತ್ತಲೇ ಇದೆ. ಅದರಂತೆ ಅಕ್ಷಯ ತೃತೀಯ ದಿನದಂದು ಬಾಲ್ಯವಿವಾಹ ಮಾಡುವ ಪದ್ಧತಿ ಆಧುನಿಕತೆ ಭರಾಟೆಯಲ್ಲಿರುವ 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಅಚ್ಚರಿಯ ಸಂಗತಿಯಾಗಿದೆ.
ಅನಿಷ್ಟ ಪದ್ಧತಿಗೆ ಇತಿಶ್ರೀ ಹಾಡಬೇಕಿದೆ
ಈ ಬಾರಿ ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆಯಿದ್ದು, ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ರಾಜ್ಯಮಟ್ಟದಲ್ಲಿ ಸರ್ಕಾರ ಸೂಚಿಸಿದೆ. ಆಯಾಯ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯದಂತೆ ಎಚ್ಚರದಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇವತ್ತಿನ ಈ ಕಾಲದಲ್ಲಿಯೂ ಇಂತಹದೊಂದು ಆಚರಣೆ ಕದ್ದುಮುಚ್ಚಿ ನಡೆಯುತ್ತಿರುವುದು ನಾವೆಲ್ಲರೂ ಅಚ್ಚರಿ ಪಡುವಂತಾಗಿದೆ.

ಕಾನೂನು ಪ್ರಕಾರ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅಕ್ಷಯ ತೃತೀಯದಂದು ಬಾಲ್ಯ ವಿವಾಹ ಮಾಡುವ ಅನಿಷ್ಟ ಪದ್ಧತಿಗೆ ಇತಿಶ್ರೀ ಹಾಡುವುದು ಎಲ್ಲರ ಕರ್ತವ್ಯವಾಗಿದೆ. ಇವತ್ತಿನ ದಿನಮಾನದಲ್ಲಿ ಬಾಲ್ಯವಿವಾಹ ನಡೆಸುವುದು ಕಷ್ಟವೇ ಆ ರೀತಿಯಾದರೆ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ವಿವಾಹವನ್ನು ತಡೆಹಿಡಿದ ಪ್ರಕರಣಗಳು ಬಹಳಷ್ಟಿವೆ. ಹೀಗಿದ್ದರೂ ನಡೆಯುತ್ತಿವೆ ಎಂದರೆ ಒಂದು ಕ್ಷಣ ಯೋಚನೆ ಮಾಡುವ ವಿಷಯವೇ.
ಬಾಲ್ಯವಿವಾಹಕ್ಕೆ ದಂಡ ಸಹಿತ ಜೈಲು ಶಿಕ್ಷೆ
ಇನ್ನು ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016 ಪ್ರಕಾರ ಮದುವೆಯನ್ನು ಏರ್ಪಡಿಸಿದ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ.

ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ. ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ. ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರಕರಣಗಳು ಪತ್ತೆಯಾದರೆ ದೂರು ನೀಡಿ
ಒಂದು ವೇಳೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸುವಂತೆ ತಿಳಿಸಲಾಗಿದೆ. ಇನ್ನಾದರೂ ಇಂತಹದೊಂದು ಮೂಢನಂಬಿಕೆಯನ್ನು ಯಾರಾದರೂ ಹೊಂದಿದ್ದರೆ ದಯವಿಟ್ಟು ಅಂತಹ ತಪ್ಪು ನಿರ್ಧಾರಕ್ಕೆ ಮುಂದಾಗಬೇಡಿ ಮಕ್ಕಳ ಭವಿಷ್ಯವನ್ನು ಹಾಳುಮಾಡಬೇಡಿ ಎನ್ನುವುದು ಕಳಕಳೀಯ ಮನವಿಯಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications