Get Updates
Get notified of breaking news, exclusive insights, and must-see stories!

ಯಡಿಯೂರಪ್ಪ ಅತ್ಯಾಪ್ತ ಮಾಜಿ ಸಚಿವ ಸಿಎಂ ಉದಾಸಿ ವ್ಯಕ್ತಿಚಿತ್ರ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅತ್ಯಾಪ್ತರಾಗಿದ್ದ ಮಾಜಿ ಸಚಿವ, ಶಾಸಕ ಸಿಎಂ ಉದಾಸಿ ಅವರು ವ್ಯಕ್ತಿ ಚಿತ್ರ ಇಲ್ಲಿದೆ.

ಮಾಜಿ ಸಚಿವ, ಶಾಸಕ ಸಿಎಂ ಉದಾಸಿ ಅವರು ಅಣ್ಣಾವ್ರು ಎಂದೇ ಖ್ಯಾತರಾಗಿದ್ದರು, ಉದಾಸಿ ಅವರು ತಮ್ಮ ಸುದೀರ್ಘ ರಾಜಕಾರಣದಲ್ಲಿ ಹಾಲವಾರು ಏಳು ಬೀಳುಗಳನ್ನು ಕಂಡವರು.

ರಾಜ್ಯ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದ ಅವರು ರಾಜ್ಯದ ರಸ್ತೆಗಳಿಗೆ ಹೊಸಕಾಯಕಲ್ಪ ನೀಡಿದವರು. ರಸ್ತೆಗಳು ಅಭಿವೃದ್ಧಿ ಆದರೆ ರಾಜ್ಯ ಅಭಿವೃದ್ಧಿಯಾದಂತೆ ಎಂಬ ತತ್ವದಡ ಕಾರ್ಯ ನಿರ್ವಹಿಸಿದ್ದ ಅವರು ಗ್ರಾಮೀಣಾಭಿವೃದ್ಧಿಯ ರೂವಾರಿ, ಜಿಲ್ಲೆಯ ಹಿರಿಯ ರಾಜಕಾರಣಿ, ರೈತರ ಕಣ್ಮಣಿ ಹಾಗೂ ಹಾನಗಲ್ಲ ತಾಲೂಕಿನ ಅಭಿವೃದ್ಧಿಯ ಹರಿಕಾರರು ಹೌದು.

 CM Udasi: Age, Biography, Education, Political Carrier, Net Worth

ರಾಜಕೀಯ ಜೀವನದಲ್ಲಿ ರಾಜಕೀಯ ಗುರು ಇಲ್ಲದೇ ಸತತ ಹೋರಾಟ ಹಾಗೂ ನಾಯಕತ್ವದ ಗುಣಗಳಿಂದ ಪರಸಭಾ ಸದಸ್ಯರಾಗಿ, ಪುರಸಭೆ ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರಾಗಿ ಕೆಲಸ ನಿರ್ವಹಿಸಿ ರಾಜ್ಯಾದ್ಯಂತ ಹೆಸರು ಮಾಡಿದ ಸಿ.ಎಂ.ಉದಾಸಿ ಅವರದು ಒಂದು ವಿಶಿಷ್ಟ ವ್ಯಕ್ತಿತ್ವ.

ಶರಣಸಾವಿತ್ರಮ್ಮಮಹಾಲಿಂಗಪ್ಪನವರ ಮತ್ರರಾಗಿ ಫೆ 2. 1937ರಲ್ಲಿ ಜನಿಸಿದ ಚನ್ನಬಸಪ್ಪ ಉದಾಸಿ ಅವರು ಹಾನಗಲ್ಲ ತಾಲೂಕಿನಲ್ಲಿ ವಿದ್ಯಾಭ್ಯಾಸ ಆರಂಭಿಸಿ ಆರ್ಥಿಕ ತೊಂದರೆಯಿಂದ ಹಾವೇರಿಗೆ ತೆರಳಿ ಹಾವೇರಿಯಲ್ಲಿ ವಾರದ ಮನೆಯ ಊಟ ಮಾಡಿ, ಪ್ರಾಥಮಿಕ ಶಿಕ್ಷಣ ಮುಗಿಸಿದರು.

ಬಡತನದಿಂದಾಗಿ ಉನ್ನತ ಶಿಕ್ಷಣದಿಂದವಂಚಿತರಾದರು. ಮುಂದೆ ವ್ಯಾಪಾರ ಮತ್ತು ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಈ ಎರಡೂ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಮಾಡಿದರು.

ವಿದ್ಯಾಭ್ಯಾಸ ಮೊಟಕುಗೊಳಿಸಿ ವ್ಯಾಪಾರ ವೃತ್ತಿ ಆರಂಭಿಸಿದ ಇವರು ಹಗಲಿರುಳು ವ್ಯಾಪಾರ ತೊಡಗಿದ್ದ ಉದಾಸಿಯವರಿಗೆ ರಾಜಕೀಯ ಮಾತ್ರ ದೂರ ಉಳಿದಿತ್ತು. ಆದರೆ 1974ರಲ್ಲಿ ಹಿರಿಯರ ಒತ್ತಾಸೆಗೆ ಮಣಿದು ಪುರಸಭೆಗೆ ಸ್ಪರ್ಧಿಸಿ ಪ್ರಥಮ ಅಧ್ಯಕ್ಷರಾಗಿಯೂ ಆಯ್ಕೆಯಾದರು. ಪುನಃ 1980ರಲ್ಲಿ ಅಧ್ಯಕ್ಷ ಅವಧಿ ಮುಗಿದ ನಂತರ ವ್ಯಾಪಾರದಲ್ಲಿ ಮುಂದುವರೆದ ಇವರಿಗೆ ತಾಲೂಕಿನ ರೈತರು, ಹಾಗೂ ರಾಜಕೀಯ ಮುಖಂಡರು ಬೆನ್ನು ಬಿಡದೇ ಒತ್ತಾಯ ಮಾಡಿದ್ದರಿಂದಾಗಿ 1983ರಲ್ಲಿ ಪಕ್ಷೇತರರ ಅಭ್ಯರ್ಥಿಯಾಗಿ ಹಾನಗಲ್ಲ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದರು.

ನಂತರ ರಾಮಕೃಷ್ಣ ಹೆಗಡೆ ಅವರ ಸರಕಾರದಲ್ಲಿ ಉದಾಸಿಯವರು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ನಷ್ಟದಲ್ಲಿದ್ದ ನಿಗಮವನ್ನು ಲಾಭದಲ್ಲಿ ತಂದರು. 1985ರಲ್ಲಿ ನಡೆದ ಚುನಾವಣೆಯಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು.

ಸಚಿವರಾದ ನಂತರ ಶಿಕ್ಷಣ ಕ್ಷೇತ್ರಕ್ಕೆ ಸೇರಿದಂತೆ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ವತ್ತು ನೀಡಿದ ಅವರು, ತಾಲೂಕಿನಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜ್, ಮೊರಾರ್ಜಿ ವಸತಿ ಶಾಲೆ, ಪಾಲಿಟೆಕ್ನಿಕ್, ಪದವಿ ಕಾಲೇಜು ಹೀಗೆ ಹಲವಾರು ಕಾಲೇಜುಗಳನ್ನು ಆರಂಭಿಸುವ ಮೂಲಕ ಶಿಕ್ಷಣರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದ್ದಾರೆ. ಉದಾಸಿಯವರು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಹಿಂದುಳಿದ ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ನಿರಂತರ ವಾಗಿ ಶ್ರಮಿಸುತ್ತಿದ್ದಾರೆ.

ಉದಾಸಿಯವರು ರೈತರ, ತಾಲೂಕಿನ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ, ತಾಲೂಕಿನ ಅಭಿವೃದ್ಧಿಗೆ ಅದರಲ್ಲೂ ವಿಶೇಷವಾಗಿ ರೈತರಿಗೆ ಪ್ರತಿವರ್ಷ ಬೆಳೆಸಾಲ, ಬೆಳೆವಿಮಾ ಪರಿಹಾರ ಒದಗಿಸಿಕೊಡುವಲ್ಲಿ ವಿಶೇಷ ಕಾಳಜಿ ವಹಿಸಿದರು. ನಂತರದ 1989ರ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅವಿಭವಿಸಿದರೂ ಅಂಜದೇ ತಮ್ಮ ಜನಪರ ಕಾರ್ಯ ಶ್ರಮಿಸುತ್ತಿದ್ದಾರೆ ಗಳನ್ನು ಮುಂದುವರೆಸಿದರು.

ನಂತರ ೧೯೯೪ಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನತಾದಳದಿಂದ ಚುನಾಯಿತರಾಗಿ ಜೆ.ಎಚ್.ಪಟೇಲ್ ಅವರ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡರು. ಈ ಅವಧಿಯಲ್ಲಿಯೇ ತಾಲೂಕಿನ ಅನೇಕ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದರು.

ನಂತರ 1999ರ ಚುನಾವಣೆಯಲ್ಲಿ ಸೋಲುಂಡ ಅವರು, ಬದಲಾದ ರಾಜಕೀಯ ಸ್ಥಿತಿಗತಿಯಲ್ಲಿ ಜನತಾದಳ ತೊರೆದು, ಭಾರತೀಯ ಜನತಾ ಪಕ್ಷ ಸೇರಿ ಜಿಲ್ಲೆಯಲ್ಲಿರುವ ತಮ್ಮ ಬೆಂಬಲಿಗರನ್ನು ಕೂಡಾ ಭಾರತೀಯ ಜನತಾ ಪಕ್ಷಕ್ಕೆ ಕರೆತಂದು, 2004ರ ಚುನಾವಣೆಯಲ್ಲಿ ತಾವೂ ಆಯ್ಕೆಯಾಗುವ ಮೂಲಕ ತಮ್ಮ ಬೆಂಬಲಿಗ ಯುವ ನಾಯಕರಾದ
ಶಿವರಾಜ ಸಜ್ಜನರ, ನೆಹರೂ ಓಲೇಕಾರ, ಜಿ.ಶಿವಣ್ಣ ಅವರನ್ನು ಬಿಜೆಪಿಗೆ ಕರೆತಂದು ಟಿಕೆಟ್ ಕೊಡಿಸಿ ಶಾಸಕರನ್ನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ನಂತರ ಬಿಜೆಪಿ-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾಗಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದರು. ನಂತರ 2008ರ ಚುನಾವಣೆಯಲ್ಲಿಯು ಸಹ ಗೆಲುವು ಸಾಧಿಸುವ ಮೂಲಕ ಜಿಲ್ಲೆಯಲ್ಲಿ ೫ ಬಿಜೆಪಿ ಶಾಸಕರು ಆಯ್ಕೆ ಯಾಗಲು ಶ್ರಮಿಸಿದರು.

2013ರ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಆಯ್ಕೆಯಾದರು. ಇವರ ಹಾಗೂ ಇವರ ಎದುರಾಳಿ ಮನೋಹರ ತಹಶೀಲ್ದಾರ ನಡುವೆ ಸೋಲು-ಗೆಲುವಿನ ಜುಗಲ್ ಬಂದಿ ನಡೆದುಕೊಂಡು ಬಂದಿತ್ತು.

2018 ವಿಧಾನಸಭಾ ಚುನಾವಣೆಯಲ್ಲಿ ಉದಾಸಿ ಅವರು ಎದರಾಳಿ ಬದಲಾಗಿದ್ದರು. ಶ್ರೀನಿವಾಸ ಮಾನೆ ಅವರು ಸಿ.ಎಂ.ಉದಾಸಿ ಅವರ ಎದುರಾಳಿಯಾಗಿ ತೀವೃ ಪೈಪೋಟಿ ನೀಡಿದ್ದರು. ಕೊನೆಯ ಕ್ಷಣದಲ್ಲಿ ಸಿ.ಎಂ.ಉದಾಸಿ ಅವರು ಗೆಲವು ದಾಖಲಿಸಿದ್ದರು. ಸಿ.ಎಂ.ಉದಾಸಿ ಅವರ ಪುತ್ರ ಶಿವಕುಮಾರ ಉದಾಸಿ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲವು ದಾಖಲಿಸುವ ಮೂಲಕ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹಾವೇರಿ ಜಿಲ್ಲೆಯ ರಚನೆಯ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲಅವರ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಉದಾಸಿ ಅವರು ಹಾಗೂ ಪರಿಸರ ಮತ್ತು ಬಂಧಿಖಾನೆ ಸಚಿವರಾಗಿದ್ದ ಬಸವರಾಜ ಶಿವಣ್ಣನವರ ಇಬ್ಬರು ಸೇರಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಹಾವೇರಿ ಜಿಲ್ಲೆ ಘೋಷಿಸುವಲ್ಲಿಯು ಇವರ ಪಾತ್ರ ಮಹತ್ವದ್ದಾಗಿದೆ.

ಸಿ.ಎಂ. ಉದಾಸಿ ಅವರು ಜಿಲ್ಲೆಯ ಹಾಗೂ ಹಾನಗಲ್ಲ ತಾಲೂಕಿನ ಜನತೆಯ ನೆಚ್ಚಿನ ನಾಯಕರಾಗಿ, ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಸದಾ ಕ್ರಿಯಾಶೀಲರಾಗಿದ್ದ ಉದಾಸಿ ಇತ್ತೀಚಿನ ದಿನಗಳಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+