ಸಂವಿಧಾನ ದಿನ: ಮರೆಯಲಾಗದ ಅಂಬೇಡ್ಕರ್ ರ ಹತ್ತು ಮಾತುಗಳು
ನವದೆಹಲಿ, ನವೆಂಬರ್ 26: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತಕ್ಕೆ ಸಂವಿಧಾನ ರಚಿಸಿ, ದೇಶಕ್ಕೆ ಭದ್ರ ಬುನಾದಿ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು, ಸಂವಿಧಾನ ರಚನಾ ಕರಡು ಸಮಿತಿಯ ಅಧ್ಯಕ್ಷರಾಗಿದ್ದವರು, ಮಹಾನ್ ಮಾನವತಾವಾದಿ 'ಡಾ.ಬಿ.ಆರ್.ಅಂಬೇಡ್ಕರ್' ರವರು. ಇವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದೇ ಕರೆಯುತ್ತಾರೆ.
ಭಾರತದ ಸಂವಿಧಾನವು ನವೆಂಬರ್ 26, 1949 ರಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಅಂಗೀಕರಿಸಲ್ಪಟ್ಟಿತು. ಜನೇವರಿ 26, 1950 ರಂದು ಜಾರಿಗೆ ತರಲಾಯಿತು. ಈ ದಿನ ಸಂವಿಧಾನವನ್ನು ಇಡೀ ಭಾರತ ಒಪ್ಪಿಕೊಂಡ ದಿನದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯಂತೆ 2015 ರಿಂದ 'ಸಂವಿಧಾನ ದಿನ'ವನ್ನಾಗಿ ಆಚರಿಸಲಾಗುತ್ತದೆ.

ಶೋಷಿತ ವರ್ಗಗಳು, ನನ್ನ ಕಣ್ಣುಗಳು
1) ಮಹಿಳೆಯರಿಗೆ ಸಮಾನತೆಯನ್ನು ಹಾಗೂ ಗೌರವವನ್ನು ನೀಡದ ಸಮಾಜ ಎಂದೂ ಆದರ್ಶ ಸಮಾಜವಾಗಾರದು.
2) ಭಾರತದ ಶೋಷಿತ ವರ್ಗಗಳ ಹಿತಕಾಯಲೆಂದೇ ನಾನು ಮೊದಲು ಭಾರತ ಸಂವಿಧಾನ ಕರಡು ರಚನಾ ಸಮಿತಿಗೆ ಬಂದೆ, ದುರ್ಬಲ ವರ್ಗಗಳಿಗೆ ಮಾನವ ಹಕ್ಕುಗಳನ್ನು ಗಳಿಸಿಕೊಡಬೇಕೆಂಬುದೇ ನನ್ನ ಜೀವನದ ಧ್ಯೇಯ.

ಚಿಂತನೆ ಇಲ್ಲದ ವ್ಯಕ್ತಿ ಇದ್ದೂ ಸತ್ತಂತೆ
3) ಮನುಷ್ಯ ಚಿರಂಜೀವಿ ಆಗಲಾರ. ಆದರೆ ಆತನ ಚಿಂತನೆಗಳು ಶಾಶ್ವತವಾಗಿ ಉಳಿಯುತ್ತವೆ.
4) ಒಂದು ಗಿಡಕ್ಕೆ ನೀರು ಎಷ್ಟು ಅವಶ್ಯವಿದೆಯೋ, ಹಾಗೆಯೇ ಒಂದು ಚಿಂತನೆ ಪ್ರಸರಣವಾಗುವುದು ಅಷ್ಟೇ ಅಗತ್ಯ. ಇಲ್ಲವಾದರೆ ಎರಡೂ ಸಾಯುತ್ತವೆ.

ನಮ್ಮ ಸಾಧನೆಗಳು ಮಾತನಾಡುವಂತಿರಬೇಕು
5) ದೇಶದ ಹಿತಕ್ಕಿಂತ ಪಕ್ಷದ ಹಿತವನ್ನೇ ಪ್ರಧಾನವೆಂದು ಪರಿಗಣಿಸುವ ರಾಜಕೀಯ ಪಕ್ಷಗಳ ಹುನ್ನಾರದ ಬಗ್ಗೆ ಇಡೀ ದೇಶ ಎಚ್ಚರದಿಂದಿರಬೇಕಾಗುತ್ತದೆ. ಇಲ್ಲದೇ ಹೋದರೆ ದೇಶದ ಸ್ವಾತಂತ್ರ್ಯ, ಏಕತೆ ಹಾಗೂ ಸಂವಿಧಾನದ ಮೇಲೆ ಅಪಾಯದ ಕಾರ್ಮೋಡ ಕವಿಯುತ್ತವೆ.
6) ಸತ್ತ ಮೇಲೆ ಬದುಕಬೇಕು ಎಂದರೆ ಒಂದು ಕೆಲಸ ಮಾಡಿ ಹೋಗಿ, "ಜನ ಓದುವ ಹಾಗೆ ಏನಾದರೂ ಒಂದು ಬರೆದಿಟ್ಟು ಹೋಗಿ, ಇಲ್ಲವಾದರೆ ಜನ ನಿಮ್ಮ ಬಗ್ಗೆ ಬರೆಯುವ ಹಾಗೆ ಏನಾದರೂ ಕಾರ್ಯ ಮಾಡಿ ಹೋಗಿ."

ಶಿಕ್ಷಣವೇ ಶಕ್ತಿ
7) ಭಾರತದ ಜನತೆ ದೇವಸ್ಥಾನಗಳಿಗೆ ಸಾಲುಗಟ್ಟಿ ನಿಲ್ಲುವಂತೆ ಗ್ರಂಥಾಲಯಗಳಿಗೆ ಸಾಲುಗಟ್ಟಿ ಯಾವಾಗ ನಿಲ್ಲುತ್ತಾರೋ, ಅಂದು ಭಾರತ ಜಗತ್ತಿನ ಗುರುವಾಗಲಿದೆ.
8) ಶಿಕ್ಷಣ ಪ್ರಬಲ ಮತ್ತು ಪರಿಣಾಮಕಾರಿ ಅಸ್ತ್ರ ಎಂಬುದನ್ನು ಅರಿಯಬೇಕು.

ಆದರ್ಶ ಬದುಕು ಅಳವಡಿಸಿಕೊಳ್ಳಬೇಕು
9) ಜಾತಿಪದ್ಧತಿ ನಾಶವಾದರೆ ಮಾತ್ರ ಹಿಂದೂ ಸಮಾಜ ಆತ್ಮ ರಕ್ಷಣೆಗೆ ಸಮರ್ಥವಾಗಬಲ್ಲದು. ಇಂಥ ಆಂತರಿಕ ಶಕ್ತಿ ಇಲ್ಲದೆ ಹೋದರೆ ಸ್ವರಾಜ್ಯವೆಂಬುದು ಹಿಂದೂಗಳ ಪಾಲಿಗೆ ಗುಲಾಮಗಿರಿಯತ್ತ ಇಡುವ ಇನ್ನೊಂದು ಹೆಜ್ಜೆಯೇ ಆದೀತು.
10) ನನ್ನ ಜೈಕಾರ ಮಾಡುವುದಕ್ಕಿಂತ ನಾನು ತೋರಿಸಿದ ಮಾರ್ಗದಲ್ಲಿ ನಡೆಯಿರಿ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications