ಸಂವಿಧಾನ ದಿನ: ಮರೆಯಲಾಗದ ಅಂಬೇಡ್ಕರ್ ರ ಹತ್ತು ಮಾತುಗಳು
ನವದೆಹಲಿ, ನವೆಂಬರ್ 26: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತಕ್ಕೆ ಸಂವಿಧಾನ ರಚಿಸಿ, ದೇಶಕ್ಕೆ ಭದ್ರ ಬುನಾದಿ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು, ಸಂವಿಧಾನ ರಚನಾ ಕರಡು ಸಮಿತಿಯ ಅಧ್ಯಕ್ಷರಾಗಿದ್ದವರು, ಮಹಾನ್ ಮಾನವತಾವಾದಿ 'ಡಾ.ಬಿ.ಆರ್.ಅಂಬೇಡ್ಕರ್' ರವರು. ಇವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದೇ ಕರೆಯುತ್ತಾರೆ.
ಭಾರತದ ಸಂವಿಧಾನವು ನವೆಂಬರ್ 26, 1949 ರಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ಅಂಗೀಕರಿಸಲ್ಪಟ್ಟಿತು. ಜನೇವರಿ 26, 1950 ರಂದು ಜಾರಿಗೆ ತರಲಾಯಿತು. ಈ ದಿನ ಸಂವಿಧಾನವನ್ನು ಇಡೀ ಭಾರತ ಒಪ್ಪಿಕೊಂಡ ದಿನದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯಂತೆ 2015 ರಿಂದ 'ಸಂವಿಧಾನ ದಿನ'ವನ್ನಾಗಿ ಆಚರಿಸಲಾಗುತ್ತದೆ.

ಶೋಷಿತ ವರ್ಗಗಳು, ನನ್ನ ಕಣ್ಣುಗಳು
1) ಮಹಿಳೆಯರಿಗೆ ಸಮಾನತೆಯನ್ನು ಹಾಗೂ ಗೌರವವನ್ನು ನೀಡದ ಸಮಾಜ ಎಂದೂ ಆದರ್ಶ ಸಮಾಜವಾಗಾರದು.
2) ಭಾರತದ ಶೋಷಿತ ವರ್ಗಗಳ ಹಿತಕಾಯಲೆಂದೇ ನಾನು ಮೊದಲು ಭಾರತ ಸಂವಿಧಾನ ಕರಡು ರಚನಾ ಸಮಿತಿಗೆ ಬಂದೆ, ದುರ್ಬಲ ವರ್ಗಗಳಿಗೆ ಮಾನವ ಹಕ್ಕುಗಳನ್ನು ಗಳಿಸಿಕೊಡಬೇಕೆಂಬುದೇ ನನ್ನ ಜೀವನದ ಧ್ಯೇಯ.

ಚಿಂತನೆ ಇಲ್ಲದ ವ್ಯಕ್ತಿ ಇದ್ದೂ ಸತ್ತಂತೆ
3) ಮನುಷ್ಯ ಚಿರಂಜೀವಿ ಆಗಲಾರ. ಆದರೆ ಆತನ ಚಿಂತನೆಗಳು ಶಾಶ್ವತವಾಗಿ ಉಳಿಯುತ್ತವೆ.
4) ಒಂದು ಗಿಡಕ್ಕೆ ನೀರು ಎಷ್ಟು ಅವಶ್ಯವಿದೆಯೋ, ಹಾಗೆಯೇ ಒಂದು ಚಿಂತನೆ ಪ್ರಸರಣವಾಗುವುದು ಅಷ್ಟೇ ಅಗತ್ಯ. ಇಲ್ಲವಾದರೆ ಎರಡೂ ಸಾಯುತ್ತವೆ.

ನಮ್ಮ ಸಾಧನೆಗಳು ಮಾತನಾಡುವಂತಿರಬೇಕು
5) ದೇಶದ ಹಿತಕ್ಕಿಂತ ಪಕ್ಷದ ಹಿತವನ್ನೇ ಪ್ರಧಾನವೆಂದು ಪರಿಗಣಿಸುವ ರಾಜಕೀಯ ಪಕ್ಷಗಳ ಹುನ್ನಾರದ ಬಗ್ಗೆ ಇಡೀ ದೇಶ ಎಚ್ಚರದಿಂದಿರಬೇಕಾಗುತ್ತದೆ. ಇಲ್ಲದೇ ಹೋದರೆ ದೇಶದ ಸ್ವಾತಂತ್ರ್ಯ, ಏಕತೆ ಹಾಗೂ ಸಂವಿಧಾನದ ಮೇಲೆ ಅಪಾಯದ ಕಾರ್ಮೋಡ ಕವಿಯುತ್ತವೆ.
6) ಸತ್ತ ಮೇಲೆ ಬದುಕಬೇಕು ಎಂದರೆ ಒಂದು ಕೆಲಸ ಮಾಡಿ ಹೋಗಿ, "ಜನ ಓದುವ ಹಾಗೆ ಏನಾದರೂ ಒಂದು ಬರೆದಿಟ್ಟು ಹೋಗಿ, ಇಲ್ಲವಾದರೆ ಜನ ನಿಮ್ಮ ಬಗ್ಗೆ ಬರೆಯುವ ಹಾಗೆ ಏನಾದರೂ ಕಾರ್ಯ ಮಾಡಿ ಹೋಗಿ."

ಶಿಕ್ಷಣವೇ ಶಕ್ತಿ
7) ಭಾರತದ ಜನತೆ ದೇವಸ್ಥಾನಗಳಿಗೆ ಸಾಲುಗಟ್ಟಿ ನಿಲ್ಲುವಂತೆ ಗ್ರಂಥಾಲಯಗಳಿಗೆ ಸಾಲುಗಟ್ಟಿ ಯಾವಾಗ ನಿಲ್ಲುತ್ತಾರೋ, ಅಂದು ಭಾರತ ಜಗತ್ತಿನ ಗುರುವಾಗಲಿದೆ.
8) ಶಿಕ್ಷಣ ಪ್ರಬಲ ಮತ್ತು ಪರಿಣಾಮಕಾರಿ ಅಸ್ತ್ರ ಎಂಬುದನ್ನು ಅರಿಯಬೇಕು.

ಆದರ್ಶ ಬದುಕು ಅಳವಡಿಸಿಕೊಳ್ಳಬೇಕು
9) ಜಾತಿಪದ್ಧತಿ ನಾಶವಾದರೆ ಮಾತ್ರ ಹಿಂದೂ ಸಮಾಜ ಆತ್ಮ ರಕ್ಷಣೆಗೆ ಸಮರ್ಥವಾಗಬಲ್ಲದು. ಇಂಥ ಆಂತರಿಕ ಶಕ್ತಿ ಇಲ್ಲದೆ ಹೋದರೆ ಸ್ವರಾಜ್ಯವೆಂಬುದು ಹಿಂದೂಗಳ ಪಾಲಿಗೆ ಗುಲಾಮಗಿರಿಯತ್ತ ಇಡುವ ಇನ್ನೊಂದು ಹೆಜ್ಜೆಯೇ ಆದೀತು.
10) ನನ್ನ ಜೈಕಾರ ಮಾಡುವುದಕ್ಕಿಂತ ನಾನು ತೋರಿಸಿದ ಮಾರ್ಗದಲ್ಲಿ ನಡೆಯಿರಿ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications