ಲೈಂಗಿಕ ಕ್ರಿಯೆ ಮತ್ತು ಲಾಕ್ಡೌನ್: ಪ್ರಸಿದ್ದ ಕಾಂಡೋಮ್ ಕಂಪೆನಿ ಹೇಳಿದ್ದೇನು?
ಬೆಂಗಳೂರು, ಮೇ 4: ಕೊರೊನಾ ಹಾವಳಿಯಿಂದ ಜಗತ್ತಿನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಕೊರೊನಾ ತಡೆಗಟ್ಟಲು ಲಾಕ್ಡೌನ್ ಒಂದೇ ಅಸ್ತ್ರವಾಗಿರುವುದರಿಂದ ಜನ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿದ್ದಾರೆ.
Recommended Video
ಲಾಕ್ಡೌನ್ ಜಾರಿಯಾದ ನಂತರ ಜನರು ಸಾಮಾನ್ಯ ದಿನಗಳಿಗಿಂತ ಜೀವನ ನಡೆಸಲು ಆಗುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ ವಿಚಿತ್ರ ಸಂಗತಿಯೊಂದು ಬೆಳಕಿಗೆ ಬಂದಿದೆ. ಲಾಕ್ಡೌನ್ ನಿಂದಾಗಿ ಜನ ಕಡಿಮೆ ಲೈಂಗಿಕ ಚಟುವಟಿಕೆ ನಡೆಸಿದ್ದಾರೆ ಎಂಬ ಸಂಗತಿ ಹೊರ ಬಿದ್ದಿದೆ. ಇದನ್ನು ನಾವು ಹೇಳುತ್ತಿಲ್ಲ. ಕಾಂಡೋಮ್ ತಯಾರಿಕೆಯಲ್ಲಿ ಖ್ಯಾತಿ ಗಳಿಸಿರುವ ಡುರೆಕ್ಸ ನ Reckitt Benckiser ಸಂಸ್ಥೆ ಬಹಿರಂಗಪಡಿಸಿದೆ.
ಲಾಕ್ಡೌನ್ ಜಾರಿಯಾದ ಮೇಲೆ ಜನರಿಗೆ ಲೈಂಗಿಕ ಚಟುವಟಿಕೆ ನಡೆಸಲು ಅನುಕೂಲಕರ ವಾತಾವರಣ ಸಿಕ್ಕದೇ ಇರುವುದೇ ಲೈಂಗಿಕ ಚಟುವಟಿಕೆ ಕಡಿಮೆಯಾಗಲು ಕಾರಣ ಎಂದು ಡುರೆಕ್ಸ ನ Reckitt Benckiser ಸಂಸ್ಥೆ ಬಹಿರಂಗಪಡಿಸಿದೆ.

ಸೀಮಿತ ಅವಕಾಶಗಳನ್ನು ನೀಡಿದ್ದರಿಂದ
ಲಾಕ್ಡೌನ್ ಲೈಂಗಿಕ ಚಟುವಟಿಕೆಗಳಿಗೆ ಸೀಮಿತ ಅವಕಾಶಗಳನ್ನು ನೀಡಿದ್ದರಿಂದ ಮಾರ್ಚ್ ನಿಂದ ಇಲ್ಲಿಯವರೆಗೆ ಭಾರತ, ಯುರೋಪ್ ಸೇರಿದಂತೆ ಹೆಚ್ಚಿನ ಮಾರುಕಟ್ಟೆಗಳಲ್ಲಿ ಕಾಂಡೋಮ್ ಮಾರಾಟ ಕುಸಿಯಿತು ಎಂದು ಡುರೆಕ್ಸ ನ ಎಂಡಿ ಲಕ್ಷ್ಮಣ ನರಸಿಂಹನ್ ಹೇಳಿದ್ದಾರೆ. ಲಾಕ್ಡೌನ್ನಿಂದ ಲೈಂಗಿಕ ಕ್ರಿಯೆ ನಡೆಸಬಹುದಾದ ಜೋಡಿಗಳು ಸಾಮಾನ್ಯಕ್ಕಿಂತ ಕಡಿಮೆ ಆತ್ಮೀಯರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಶೇ 50 ರಿಂದ 65 ರಷ್ಟು ಕುಸಿದಿದೆ
ಸಾಮಾನ್ಯ ದಿನಗಳಿಗಿಂತ ಕಾಂಡೋಮ್ ಮಾರಾಡ ಶೇ 50 ರಿಂದ 65 ರಷ್ಟು ಕುಸಿದಿದೆ. ಇದಕ್ಕೆ ಪ್ರಮುಖ ಕಾರಣವೇ ಲಾಕ್ಡೌನ್. ಜೋಡಿಗಳಿಗೆ ಲೈಂಗಿಕ ಕ್ರಿಯೆ ನಡೆಸಲು ಹೋಟೆಲ್, ವಸತಿ ಗೃಹಗಳು, ರೆಸಾರ್ಟ್ಗಳು ಸಿಕ್ಕದೇ ಇರುವುದು ಪ್ರಮುಖ ಕಾರಣ. ಲಾಕ್ಡೌನ್ ನಿಂದ ಎಲ್ಲವೂ ಬಂದ್ ಆಗಿರುವುದರಿಂದ ಇದು ಸಹಜವೇ ಆಗಿದೆ ಎಂದು ಲಕ್ಷ್ಮಣ ನರಸಿಂಹನ್ Tribune News ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೊರೊನಾ ಆತ್ಮೀಯತೆಯ ನಂಟನ್ನು ಕಸಿದುಕೊಂಡಿದೆ
ಯುರೋಪ್ನಲ್ಲಿ ಲಾಕ್ಡೌನ್ ತೆರವುಗೊಳಿಸಿದ ನಂತರವೂ ಕಾಂಡೋಮ್ ಮಾರಾಟದಲ್ಲಿ ಏರುಗತಿ ಕಾಣಿಸಲಿಕ್ಕಿಲ್ಲ ಎಂಬ ಆತಂಕವನ್ನು ಡುರೆಕ್ಸ್ ಹೊರಹಾಕಿದ್ದಾರೆ. ಕೊರೊನಾ ಯುರೋಪ್ ದೇಶಗಳಲ್ಲಿ ಆತ್ಮೀಯತೆಯ ನಂಟನ್ನು ಕಸಿದುಕೊಂಡಿದೆ. ಇದರಿಂದ ಮುಂದೆ ಜನ ಆತ್ಮೀಯತೆ ನಂಟು ಕಳೆದುಕೊಳ್ಳಬಹುದು ಎಂಬುದಾಗಿ ಲಕ್ಷ್ಮಣ ನರಸಿಂಹನ್ ಹೇಳಿದ್ದಾರೆ.

ಬೆಲೆ ಕಟ್ಟಲಾಗದ ಸಂತೋಷವನ್ನೂ ಸಹ ಕಳೆದುಕೊಂಡಿದ್ದಾರೆ
ಕೊರೊನಾ ವೈರಸ್ ಗೆ ಸೂಕ್ತ ಔಷಧಿ ಕಂಡು ಹಿಡಿಯದ ಹೊರತು ಎಲ್ಲ ಕ್ಷೇತ್ರಗಳಿಗೂ ಅದರ ಬಿಸಿ ತಟ್ಟಲಿದೆ. ಲಾಕ್ಡೌನ್ ನಿಂದಾಗಿ ಜನ ಕೇವಲ ಲೈಂಗಿಕ ಕ್ರಿಯೆ ನಡೆಸುವುದನ್ನಷ್ಟೇ ಕಳೆದುಕೊಂಡಿಲ್ಲ. ಅವರ ಬೆಲೆ ಕಟ್ಟಲಾಗದ ಸಂತೋಷವನ್ನೂ ಸಹ ಕಳೆದುಕೊಂಡಿದ್ದಾರೆ. ಇದರಿಂದ ಕಲಿಯಬೇಕಾದ ಪಾಠವೂ ಸಾಕಷ್ಟಿದೆ ಎಂದು ಲಕ್ಷ್ಮಣ ನರಸಿಂಹನ್ Tribune news ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications