ಕೊರೊನಾವೈರಸ್ ಸೋಂಕು ಟ್ರ್ಯಾಕ್: ಆರೋಗ್ಯ App ಬಳಕೆ ಹೇಗೆ?
ಬೆಂಗಳೂರು, ಏಪ್ರಿಲ್ 2: ಕೊರೊನಾವೈರಸ್ ವಿರುದ್ಧ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರ ಸಹಕಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತೊಮ್ಮೆ ಬಯಸಿವೆ. ಸೋಂಕಿತರ ಮೇಲೆ ನಿಗಾ ಇಡಲು ರಾಜ್ಯ ಸರ್ಕಾರ ಕೊರೊನಾ ವಾಚ್ ಆಪ್ ಬಿಡುಗಡೆ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಆರೋಗ್ಯ ಆಪ್(Aarogya App) ಹೊರ ತಂದಿದೆ.
ಕೊರೊನಾವೈರಸ್ ಸೋಂಕು, ಹೋಂ ಕ್ವಾರಂಟೈನ್ ಇರುವವರು ನಡೆದುಕೊಳ್ಳಬೇಕಾದ ರೀತಿ ನೀತಿ, ಲಾಕ್ಡೌನ್ ನಿಯಮದ ಬಗ್ಗೆ ಫೇಸ್ಬುಕ್, ವಾಟ್ಸಾಪ್, ಟೆಲಿಗ್ರಾಂ, ಇನ್ಸ್ಟಾಗ್ರಾಂ, ಟಿಕ್ ಟಾಕ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಈಗ ಮತ್ತೊಂದು ಆಂಡ್ರಾಯ್ಡ್ ಆಪ್ ನಿಮ್ಮ ಮುಂದಿಡಲಾಗಿದೆ. ಈ ಮೂಲಕ ಸೋಂಕಿತ ವ್ಯಕ್ತಿಗಳನ್ನು ಟ್ರ್ಯಾಕ್ ಮಾಡಿ, ಆರೊಗ್ಯವಂತರಿಗೆ ರೋಗ ಹರಡದಂತೆ ತಡೆಗಟ್ಟಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ವಾಟ್ಸಾಪ್ ಹಾಗೂ ಫೇಸ್ಬುಕ್ ಮೆಸೇಂಜರ್ ಆಪ್ ಮೂಲಕ ರಿಯಲ್ ಟೈಂನಲ್ಲಿ ಚಾಟ್ ಬಾಟ್ ಬಳಸಿ ಮಾಹಿತಿ ಪಡೆಯುವ ಸೌಲಭ್ಯ ಸದ್ಯ ಬಳಕೆಯಲ್ಲಿದೆ. ಆಂಡ್ರಾಯ್ಡ್ ಅಪ್ಲಿಕೇಷನ್ ನಲ್ಲಿ ಅಪೋಲೋ ಆಸ್ಪತ್ರೆಯ ಎಐ ಆಧಾರಿತ ಚಾಟ್ ಬಾಟ್ ಮಾದರಿಯಲ್ಲಿ ಕನ್ನಡ ಭಾಷೆಯಲ್ಲೇಮಾಹಿತಿ ಹಾಗೂ ನೆರವು ಪಡೆದುಕೊಳ್ಳಬಹುದು.

ಈ ಆಪ್ ಮೂಲಕ ಕೊವಿಡ್19 ಪಾಸಿಟಿವ್ ರೋಗಿಗಳ ಚಲನವಲನಗಳನ್ನು ರಿಯಲ್ ಟೈಮಲ್ಲಿ ಟ್ರ್ಯಾಕ್ ಮಾಡಬಹುದು. ಕೊರೊನಾ ಸೋಂಕಿತರು, ಹೋಂ ಕ್ವಾರಂಟೈನ್ ಆಗಿರುವವರು ಎಲ್ಲೆಲ್ಲಿದ್ದಾರೆ ಎಂದು ಗುರುತಿಸಬಹುದು. ಒಂದು ವೇಳೆ ಸೋಂಕಿತ ವ್ಯಕ್ತಿಯೇನಾದರೂ ಆರೋಗ್ಯವಂತರ ಬಳಿಗೆ(1 ಮೀಟರ್ ಅಂತರ) ಸುಳಿದರೆ ಅಲರ್ಟ್
ವೈದ್ಯಕೀಯ ನೆರವು ಪಡೆಯುವುದು ಎಲ್ಲಿ? ಕೈಗೆ ಕ್ವಾರಂಟೈನ್ ಸ್ಟ್ಯಾಂಪ್ ಇರುವವರು ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಯಾರಿಗೆ ಕರೆ ಮಾಡಿ ತಿಳಿಸಬೇಕು ಎಂಬೆಲ್ಲ ಮಾಹಿತಿ ಈ ಆಪ್ ನಲ್ಲಿದೆ. ಗೂಗಲ್ ಪ್ಲೇಸ್ಟೋರಿನಲ್ಲಿ NIC eGov Mobile AppsTools ಅಭಿವೃದ್ಧಿಪಡಿಸಿರುವ Aarogya Setu ಆಪ್ ಮಾತ್ರ ಡೌನ್ಲೋಡ್ ಮಾಡಿಕೊಳ್ಳಿ.

ಕೊರೊನಾ ಕುರಿತ ಸಹಾಯವಾಣಿ
ಮೈಗೋವ್ ಕೊರೊನಾ ಸಹಾಯಕೇಂದ್ರ ವಾಟ್ಸಾಪ್ ಚಾಟ್ಬಾಟ್ ಬಿಟ್ಟು ಕೇಂದ್ರ ಸಹಾಯವಾಣಿ ಮತ್ತು ಆಯಾ ರಾಜ್ಯಗಳ ಸಹಾಯವಾಣಿ ಕೇಂದ್ರಗಳು ಕಾರ್ಯರೂಪದಲ್ಲಿದೆ ಸಹಾಯವಾಣಿ ಸಂಖ್ಯೆ + 91-11-23978046ಗೆ ಕರೆ ಮಾಡಿ ನೊವೆಲ್ ಕೊರೊನಾ ವೈರಾಣು ಕುರಿತ ಮಾಹಿತಿ, ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ. Karnataka Health Dept - 080-46848600. ರಾಜ್ಯ ಸಹಾಯವಾಣಿ - 104 Helpline - 080-6669200 ರಾಷ್ಟ್ರೀಯ ಸಹಾಯವಾಣಿ - 1075
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications