ಅಯೋಧ್ಯೆಯಲ್ಲಿ ಸ್ನಾನದ ವೇಳೆ ದಂಪತಿ ಲಿಪ್ಲಾಕ್: ಮುಂದೇನಾಯ್ತು?
ಅಯೋಧ್ಯೆ ಜೂನ್ 22: ರಾಮನಗರಿ ಅಯೋಧ್ಯೆಯಲ್ಲಿ ಮಂಗಳವಾರ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಪತಿಯೊಬ್ಬ ತನ್ನ ಪತ್ನಿಗೆ ಮುತ್ತು ಕೊಟ್ಟಿದ್ದಾನೆ. ಹೀಗೆ ಮಾಡುತ್ತಿದ್ದಾಗ ಅಲ್ಲಿದ್ದ ಇತರರೂ ಅವರಿಬ್ಬರನ್ನೂ ನೋಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಪವಿತ್ರ ಸ್ಥಳದಲ್ಲಿ ಇಂತಹ ಕೃತ್ಯಗಳು ಇಲ್ಲಿ ನಡೆಯುವುದಿಲ್ಲ ಎಂದು ದೂರಿದ್ದಾರೆ. ಆ ನಂತರ ವಾದ ಶುರುವಾಗಿದೆ. ವಿಷಯ ಎಷ್ಟು ಉಲ್ಬಣಗೊಂಡಿತು ಅಂದರೆ ಕೋಪಗೊಂಡ ಜನರು ಆ ವ್ಯಕ್ತಿಯನ್ನು ಮನಬಂದಂತೆ ಥಳಿಸಿದ್ದಾರೆ. ಈ ಸಮಯದಲ್ಲಿ ಹೆಂಡತಿ ಕ್ಷಮಿಸುವಂತೆ ಜನರಿಗೆ ಮನವಿ ಮಾಡಿಕೊಂಡಿದ್ದಾಳೆ. ಆದರೂ ಜನರು ಅವಳ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಮಂಗಳವಾರ ಪತಿ ಮತ್ತು ಹೆಂಡತಿ ರಾಮ ಮಂದಿರದ ನದಿಯಲ್ಲಿ ಸ್ನಾನ ಮಾಡಲು ಅಯೋಧ್ಯೆಗೆ ಬಂದಿದ್ದರು. ಸ್ನಾನದ ಸಮಯದಲ್ಲಿ ಪತಿ ತನ್ನ ಹೆಂಡತಿಯನ್ನು ಚುಂಬಿಸಿದ್ದಾನೆ. ಇದನ್ನು ಕಂಡ ಅಲ್ಲಿದ್ದ ಜನರು ಆತನನ್ನು ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಎರಡು ವಿಡಿಯೋಗಳು ಹೊರಬಿದ್ದಿವೆ. ಒಂದು ವಿಡಿಯೋದಲ್ಲಿ ಪತಿ-ಪತ್ನಿ ಚುಂಬಿಸುತ್ತಿರುವುದು ಕಂಡುಬಂದರೆ, ಮತ್ತೊಂದು ವಿಡಿಯೋದಲ್ಲಿ ಪತಿಗೆ ಥಳಿಸಿರುವುದಿದೆ.

ಪತ್ನಿಯಿಂದ ಹೊಡೆಯದಂತೆ ಮನವಿ
ವಿಡಿಯೊ ಪ್ರಕಾರ, ಎರಡು ಮೂರು ಪುರುಷರು ಪತಿಯನ್ನು ಹಿಡಿದು ಸುಮಾರು 20 ನಿಮಿಷಗಳ ಕಾಲ ಥಳಿಸಿದ್ದಾರೆ. ಈ ವೇಳೆ ಪತ್ನಿ ತನ್ನ ಪತಿಯನ್ನು ಬಿಡುವಂತೆ ಮನವಿ ಮಾಡಿಕೊಂಡಿದ್ದಾಳೆ. ಆದರೂ ಯಾರೂ ಕಿವಿಗೊಡಲಿಲ್ಲ. ಹೊಡೆತದ ರಭಸಕ್ಕೆ ಗಂಡನ ಮೈಮೇಲೆ ಹಲವೆಡೆ ಗಾಯಗಳಾಗಿವೆ.

ಅವಾಚ್ಯ ಶಬ್ದಗಳಿಂದ ನಿಂದನೆ
ವ್ಯಕ್ತಿಯನ್ನು ಸಾರ್ವಜನಿಕವಾಗಿ ಥಳಿಸಲಾಯಿತು ಮತ್ತು ಅಲ್ಲಿದ್ದ ಇತರ ಜನರು ಘಟನೆಯ ವೀಡಿಯೊಗಳನ್ನು ಮಾಡುತ್ತಲೇ ಇದ್ದರು. ಕೆಲವರು ತಮ್ಮ ಕುಟುಂಬದವರೊಂದಿಗೆ ಅಲ್ಲಿದ್ದರು. ಪತಿ-ಪತ್ನಿ ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಸಹಿಸಲಾಗದ ಕೆಲ ಜನರು ದಂಪತಿ ನಡೆಗೆ ಆಕ್ಷೇಪ ವ್ಯಕ್ತಪಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಅನಾಚಾರ ಮಾಡಬಾರದು ಎಂದು ತಿಳಿ ಹೇಳಿದ್ದಾರೆ.

ಭಕ್ತರಲ್ಲಿ ಅಸಮಧಾನ
ಈ ವಿಡಿಯೋ ಒಂದು ವಾರ ಹಳೆಯದು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಇದುವರೆಗೆ ಯಾವುದೇ ದೂರು ಬಂದಿಲ್ಲ. ಈ ವೇಳೆ ಪೊಲೀಸರು ಸದ್ಯ ದೃಶ್ಯವನ್ನು ನೋಡಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿದಲ್ಲ. ಘಟನೆಯ ಬಗ್ಗೆ ರಾಮನ ಭಕ್ತರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಜನರು ಹೊಡೆಯುವ ಮೂಲಕ ಚೆನ್ನಾಗಿ ಪಾಠ ಕಲಿಸಿದ್ದಾರೆ. ಇಂತಹ ಘಟನೆಗಳು ಮುಂದೆ ನಡೆಯಬಾರದು ಎಂದು ಹೇಳಿಕೊಂಡಿದ್ದಾರೆ.

'ಸಮಾಜದ ಜನರಿಗೆ ತಪ್ಪು ಸಂದೇಶ'
ಈ ವೇಳೆ ಸಂತರು ಅಸಮಾಧಾನ ವ್ಯಕ್ತಪಡಿಸಿ ವ್ಯಕ್ತಿಗೆ ಥಳಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಅಸಭ್ಯವಾಗಿ ವರ್ತಿಸುವುದು ಸರಿಯಲ್ಲ ಎಂದು ಶ್ರೀ ರಾಮವಲ್ಲಭಕುಂಜ್ ಮುಖ್ಯಸ್ಥ ಸ್ವಾಮಿ ರಾಜ್ಕುಮಾರ್ ದಾಸ್ ಹೇಳಿದ್ದಾರೆ. ತೀರ್ಥಕ್ಷೇತ್ರಗಳಲ್ಲಿ ಧರ್ಮ ಮತ್ತು ಅಲಂಕಾರಗಳನ್ನು ಅನುಸರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ಅಸಭ್ಯತೆ ನಡೆದರೆ ಸಮಾಜದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಇದೇ ವೇಳೆ ಹನುಮತ್ ನಿವಾಸದ ಮಹಂತ್ ಡಾ.ಮಿಥಿಲೇಶ್ ನಂದಿನಿ ಶರಣ್ ಮಾತನಾಡಿ, ಜನರು ಅವರಿಗೆ ಥಳಿಸಿ ಒಳ್ಳೆಯದನ್ನು ಮಾಡಿದ್ದಾರೆ ಎಂದಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications