ಕೋವಿಡ್-19: ಎಲ್ಲಾ ವಿಜ್ಞಾನಿಗಳ ಕಣ್ಣು BCG ಲಸಿಕೆ ಮೇಲೆ.!
ಮಹಾಮಾರಿ ಕೊರೊನಾ ವೈರಸ್ ನಿಂದ ಇಡೀ ವಿಶ್ವವೇ ಹೆಣಗಾಡುತ್ತಿದೆ. ಕೋವಿಡ್-19 ನಿಂದಾಗಿ ಇಲ್ಲಿಯವರೆಗೂ 1,14,980 ಪ್ರಾಣ ಕಳೆದುಕೊಂಡಿದ್ದಾರೆ. ದಿನೇ ದಿನೇ ಸೋಂಕಿತರ ಸಂಖ್ಯೆ ಮತ್ತು ಸಾವಿನ ಪ್ರಮಾಣ ಏರುಗತಿಯಲ್ಲಿ ಸಾಗುತ್ತಲೇ ಇದೆ.
ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ ಹೋರಾಡಿ ಇಲ್ಲಿಯವರೆಗೂ 4,31,613 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆದರೂ, ಕೋವಿಡ್-19 ಗೆ ನಿರ್ದಿಷ್ಟ ಔಷಧಿಯನ್ನು ಈವರೆಗೂ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಕೊರೊನಾ ವೈರಸ್ ನ ಬಗ್ಗು ಬಡಿಯಲು ಔಷಧಿ ಮತ್ತು ಲಸಿಕೆಯ ಅಭಿವೃದ್ಧಿ ಕಾರ್ಯದಲ್ಲಿ ಹಲವು ಸಂಶೋಧಕರು ಮತ್ತು ವಿಜ್ಞಾನಿಗಳು ತೊಡಗಿದ್ದಾರೆ.
ಈ ನಡುವೆ ಬಹುತೇಕ ವಿಜ್ಞಾನಿಗಳು ಮತ್ತು ಸಂಶೋಧಕರ ಕಣ್ಣು ಬಿಸಿಜಿ ಲಸಿಕೆ ಮೇಲೆ ಬಿದ್ದಿದೆ. ಭಾರತ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ದಶಕಗಳಿಂದ ಬಳಕೆಯಲ್ಲಿರುವ ಬಿಸಿಜಿ ಲಸಿಕೆ ಕೊರೊನಾ ವೈರಸ್ ವಿರುದ್ಧ ಪರಿಣಾಮಕಾರಿಯಾಗುತ್ತಾ ಎಂಬುದರ ಕುರಿತು ಅಧ್ಯಯನ, ಪ್ರಯೋಗ ನಡೆಯುತ್ತಿದೆ.

ಬಿಸಿಜಿ ಲಸಿಕೆ ಕುರಿತು
ಕ್ಷಯ ರೋಗ (ಟ್ಯೂಬರ್ ಕ್ಯುಲಾಸಿಸ್) ವಿರುದ್ಧ ಹೋರಾಡಲು ಬಿಸಿಜಿ - Bacillus Calmette Guerin ಲಸಿಕೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಟಿಬಿ ಕಾಯಿಲೆಗೆ ಕಾರಣವಾಗುವ ಬ್ಯಾಕ್ಟೀರಿಯಾ ವಿರುದ್ಧ ಬಿಸಿಜಿ ಲಸಿಕೆ ರಕ್ಷಣೆ ನೀಡುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಸದ್ಯ ಇಡೀ ಜಗತ್ತನ್ನು ಭಾದಿಸುತ್ತಿರುವ ಕೋವಿಡ್-19ಗೆ 'ನೋವೆಲ್ ಕೊರೊನಾ ವೈರಸ್' ಕಾರಣವಾಗಿರುವುದು ಎಲ್ಲರಿಗೂ ಗೊತ್ತಿದೆ. ಟಿಬಿ ಹೊರತಾಗಿ ಇತರೆ ಸೂಕ್ಷ್ಮ ಜೀವಿಗಳಿಂದಲೂ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಬಿಸಿಜಿ ಲಸಿಕೆ ಸಹಕಾರಿಯಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ.

ಡಾ.ಡೆನಿಸ್ ಫಾಸ್ಟ್ ಮನ್ ಏನಂತಾರೆ.?
''ಬಿಸಿಜಿ ಲಸಿಕೆಯಿಂದ ಟ್ಯೂಬರ್ ಕ್ಯುಲಾಸಿಸ್ ಹೊರತಾಗಿಯೂ ಜನರಿಗೆ ಸಕಾರಾತ್ಮಕ ಲಾಭವಾಗಿರುವುದು ಕ್ಲಿನಿಕಲ್ ಪ್ರಯೋಗದಲ್ಲಿ ಕಂಡುಬಂದಿದೆ'' ಎಂದು Massachusetts ಜನರಲ್ ಆಸ್ಪತ್ರೆಯ ಇಮ್ಯೂನೋಬಯಾಲಜಿ ನಿರ್ದೇಶಕ ಮತ್ತು ಹಾರ್ವರ್ಡ್ ಮೆಡಿಕಲ್ ಸ್ಕೂಲ್ ನ ಸಹಾಯಕ ಪ್ರಾಧ್ಯಾಪಕ ಡಾ.ಡೆನಿಸ್ ಫಾಸ್ಟ್ ಮನ್ ತಿಳಿಸಿದ್ದಾರೆ. ಟೈಪ್ 1 ಡಯಾಬಿಟೀಸ್ ಹೊಂದಿರುವವರ ಮೇಲೆ ಬಿಸಿಜಿ ಲಸಿಕೆ ಪರಿಣಾಮ ಬೀರುವ ಕುರಿತು ಡಾ.ಫಾಸ್ಟ್ ಮನ್ ಅಧ್ಯಯನ ನಡೆಸಿದ್ದಾರೆ.

ಪ್ರಯೋಗ ನಡೆಯುತ್ತಿದೆ
ಕೊರೊನಾ ವೈರಸ್ ಮೇಲೆ ಬಿಸಿಜಿ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದರೆ, ಬಿಸಿಜಿ ಲಸಿಕೆಯಿಂದ ದೇಹದಲ್ಲಿ ಪ್ರತಿರಕ್ಷಣಾ ಪ್ರತಿಕ್ರಿಯೆ ಉಂಟು ಮಾಡುವುದು ಸ್ಪಷ್ಟ ಎಂಬ ನಂಬಿಕೆ ಹಲವು ವಿಜ್ಞಾನಿಗಳಲ್ಲಿದೆ. ಕೊರೊನಾ ವೈರಸ್ ಮೇಲೆ ಬಿಸಿಜಿ ಲಸಿಕೆಯ ಪರಿಣಾಮಕಾರಿತ್ವವನ್ನು ತಿಳಿದುಕೊಳ್ಳಲು ಆಸ್ಟ್ರೇಲಿಯಾ ಮತ್ತು ನೆದರ್ ಲ್ಯಾಂಡ್ಸ್ ನಲ್ಲಿ ಕ್ಲಿನಿಕಲ್ ಪ್ರಯೋಗಗಳನ್ನು ಚಾಲ್ತಿಯಲ್ಲಿವೆ.
-
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications