ಸರ್ಕಾರಿ ನೌಕರರಿಗೆ ನೆಮ್ಮದಿಯ ಸುದ್ದಿ, ಕೊನೆಗೂ ತುಟ್ಟಿಭತ್ಯೆ ಹೆಚ್ಚಳ!
ನವದೆಹಲಿ, ಅಕ್ಟೋಬರ್ 21: ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತಂತೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಸರ್ಕಾರಿ ನೌಕರರಿಗೆ ಶೇ 3ರಷ್ಟು ಡಿಎ ಹೆಚ್ಚಳಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಲಾಗಿದ್ದು, ಸದ್ಯದ ಮಾಹಿತಿಯಂತೆ ಡಿಎ ಶೇ 17ರಿಂದ ಶೇ 31ಕ್ಕೇರಿಕೆಯಾಗಲಿದೆ. ಈ ಕುರಿತಂತೆ ಅಧಿಕೃತ ಆದೇಶವನ್ನು ನಿರೀಕ್ಷಿಸಲಾಗಿದೆ. ಶೇ 4ರಷ್ಟು ಡಿಎ ಹೆಚ್ಚಳವಾಗಿ ಶೇ 28ರಷ್ಟು ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ, ತುಟ್ಟಿಭತ್ಯೆ ಪರಿಹಾರ(ಡಿಆರ್) ಕೂಡಾ ಶೇ 3ರಷ್ಟಿದೆ.
ಜುಲೈ 1ರಿಂದಲೇ ಅನ್ವಯವಾಗುವಂತೆ ಡಿಎ ಲಭಿಸಲಿದೆ. ಈ ಕುರಿತಂತೆ ಅಧಿಕೃತ ಆದೇಶ ಶೀಘ್ರದಲ್ಲೇ ಪ್ರಕಟವಾಗಲಿದೆ. ಕಳೆದ ಒಂದೂವರೆ ವರ್ಷಗಳಿಂದ ಡಿಎ ಹೆಚ್ಚಳ ಮಾಡಲಾಗಿಲ್ಲ. ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿದೆ. ಜುಲೈ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದ್ದು, ಶೇ 31ಕ್ಕೇರಲಿದೆ. ಆದರೆ, 18 ತಿಂಗಳ ಬಾಕಿ ಮೊತ್ತ ಸಿಗುವುದಿಲ್ಲ.

ಕೇಂದ್ರ ಬೊಕ್ಕಸಕ್ಕೆ ವಾರ್ಷಿಕ ಎಷ್ಟು ಹೊರೆ
ಡಿಎ ಹೆಚ್ಚಳ ಘೋಷಣೆ ಮಾಡಿದರೆ, ಕೇಂದ್ರ ಬೊಕ್ಕಸಕ್ಕೆ ವಾರ್ಷಿಕ 9,488.70ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ, ಕಳೆದ ಆರ್ಥಿಕ ವರ್ಷ 2020-21ರಲ್ಲಿ 14,595 ಕೋಟಿ ರು ನಷ್ಟಿತ್ತು. ಡಿಎ ಹೆಚ್ಚಳದಿಂದಾಗಿ 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 68.62 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ.ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು ಸ್ಥಗಿತಗೊಳಿಸಲಾಗಿತ್ತು.

ದಿನಕ್ಕೆ 9 ಗಂಟೆಗಳ ಕಾಲ ಕೆಲಸ
ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ. ರೈಲ್ವೆ ಇಲಾಖೆಯಲ್ಲಿ ಮಾತ್ರ ಎರಡು ಪಾಳಿಯಲ್ಲಿ ಕೆಲಸ ಮಾಡಲು ಹೊಸ ಸಚಿವರು ಕೆಲವು ವಿಭಾಗಕ್ಕೆ ಅನ್ವಯವಾಗುವಂತೆ ಆದೇಶ ನೀಡಿದ್ದರು. ಇನ್ನು ವಾರದಲ್ಲಿ ಎರಡು ದಿನ ರಜೆ ಬದಲಿಗೆ ಮೂರು ದಿನ ರಜೆ ಅಥವಾ ವಾರಕ್ಕೆ 4 ದಿನಗಳು ಮಾತ್ರ ಕಾರ್ಯ ನಿರ್ವಹಿಸುವ ಬಗ್ಗೆ ಚಿಂತನೆ ನಡೆದಿತ್ತು. ಆದರೆ, ಇದು ಸದ್ಯಕ್ಕೆ ಕಾರ್ಯಸಾಧುವಲ್ಲ ಎಂದು ಕೈಬಿಡಲಾಗಿದೆ.

ಗ್ರಾಹಕ ದರ ಸೂಚಿ ಪ್ರಮಾಣದ ಮೇಲೆ ಭತ್ಯೆ
ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.34 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.26 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ4.59 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ 3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಮುಂದಿನ ಅವಧಿ ಜನವರಿ 2020ಕ್ಕೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ. ಜುಲೈ 2021ಕ್ಕೆ ಹೊಂದಾಣಿಕೆ ರಹಿತ ಸಿಪಿಐ ಶೇ 5.4ರಷ್ಟಿತ್ತು. ಸೆಪ್ಟೆಂಬರ್ 2021ರಲ್ಲಿ ಶೇ 5.3ರಷ್ಟಿದೆ. ರೀಟೈಲ್ ಹಣದುಬ್ಬರ ಶೇ 4.35ರಷ್ಟಿದೆ.

ಕನಿಷ್ಠ ವೇತನ ಏರಿಕೆ ಮಾಡಲು ಬೇಡಿಕೆ
ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಕನಿಷ್ಠ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆ ಇನ್ನೂ ಈಡೇರಿಲ್ಲ. ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆದಿದ್ದರೂ ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾಗುವುದಿಲ್ಲ.

ತುಟ್ಟಿಭತ್ಯೆ ಹೆಚ್ಚಳ ಲೆಕ್ಕಾಚಾರ ಹೇಗೆ?
ತುಟ್ಟಿ ಭತ್ಯೆ(dearness allowance): ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ.
ತುಟ್ಟಿಭತ್ಯೆ ಹೆಚ್ಚಳ ಮಾಡುವುದು ಹೇಗೆ? ಕೇಂದ್ರ ಸರ್ಕಾರಿ ನೌಕರರ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕಳೆದ 12 ತಿಂಗಳಿಗೆ 115.76/115.76X100. ಸಾರ್ವಜನಿಕ ವಲಯದ ಸಿಬ್ಬಂದಿ ಡಿಎ ಪರ್ಸಂಟೇಜ್: ಅಖಿಲ ಭಾರತ ಗ್ರಾಹಕ ದರ ಸೂಚಿ ಸರಾಸರಿ (ಬೇಸ್ ವರ್ಷ -2001=100) ಕೊನೆ 3 ತಿಂಗಳಿಗೆ 126.33/126.33X100.
ತುಟ್ಟಿಭತ್ಯೆ ಇತಿಹಾಸ: 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. ಅಂದಿನ ಇಂದಿನವರೆಗೂ(ಈಗ ದರ ಶೇ 31ಕ್ಕೇರಿದೆ) ಬೇಡಿಕೆ ಮುಂದಿಡಲಾಗುತ್ತಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ ಎಂದು ವಾದಿಸುತ್ತಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications