ಲಕ್ಷದೀಪೋತ್ಸವದಲ್ಲಿ ಗಮನ ಸೆಳೆದ ಬಳಪದ ಕಲ್ಲಿನ ಪಾತ್ರೆಗಳು
ಇಂದಿನ ಆಧುನಿಕ ಯುಗದಲ್ಲಿ ದಿನದಿಂದ ದಿನಕ್ಕೆ ತಂತಜ್ಞಾನ ಬದಲಾಗುತ್ತಿದೆ. ತಂತ್ರಜ್ಞಾನದ ಜೊತೆಗೆ ಜನರ ಜೀವನ ಶೈಲಿ, ವೇಷ-ಭೂಷಣ, ಉಡುಗೆ-ತೊಡುಗೆ ಅಷ್ಟೇ ಏಕೆ ಅಡುಗೆ ಮಾಡುವ ಪಾತ್ರೆಗಳು ಬದಲಾಗುತ್ತಿವೆ. ಆದರೆ ಇಂದಿಗೂ ತನ್ನ ಪಾರಂಪರಿಕ ವೈಭವವನ್ನು ಹಾಗೆಯ ಉಳಿಸಿಕೊಂಡು ಬಂದಿರುವ ಕೆಲವೇ ಕೆಲವು ವಸ್ತುಗಳಲ್ಲಿ ಬಳಪದ ಕಲ್ಲಿನ ಪಾತ್ರೆಗಳು ಒಂದು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೈದಾನಕ್ಕೆ ಭೇೀಟಿ ನೀಡಿದರೆ ನಮಗೆ ಈ ಬಳಪದ ಕಲ್ಲಿನ ಪಾತ್ರೆಗಳ ವಿಶೇಷ ಮಳಿಗೆಯನ್ನು ಕಾಣಬಹುದು. ಮರೆಯಾಗುತ್ತಿರುವ ಅಪರೂಪದ ಈ ಕಲ್ಲಿನ ಪಾತ್ರೆಗಳ ತಯಾರಿ ಕಾಯಕವನ್ನು ಇಂದಿಗೂ ಉಳಿಸಿಕೊಂಡು ಬಂದಿರುವವರಲ್ಲಿ ಒಬ್ಬರಾದ ಮುಹಮ್ಮದ್ ಹೇಳುವಂತೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಅರುವ ಎಂಬ ಪ್ರದೇಶದಲ್ಲಿ ಈ ಬಳಪದ ಕಲ್ಲುಗಳು ದೊರೆಯುತ್ತವೆ. ಭೂಗರ್ಭದಲ್ಲಿ ದೊರೆಯುವ ಈ ವಿಶಿಷ್ಟ ಕಲ್ಲುಗಳನ್ನು ಬೇಕಾದ ಆಕಾರದಲ್ಲಿ ಕೊಯ್ದು ಫಾಲಿಶ್ ಪೇಪರ್ನಿಂದ ಉಜ್ಜುವ ಮೂಲಕ ವಿವಿಧ ಪಾತ್ರೆಗಳನ್ನು ತಯಾರಿಸಲಾಗುತ್ತದೆ.
ಪ್ರಸ್ತುತ ಐದು ಜನ ಕಾರ್ಮಿಕರು ಕಲ್ಲುಗಳನ್ನು ತೆಗೆಯುವ ಕೆಲಸ ಮಾಡುತಿದ್ದಾರೆ. ಎಲ್ಲಾ ಕಡೆಗಳಲ್ಲೂ ಇಂದು ಕೆಲಸ ಕಾರ್ಯಗಳು ಯಾಂತ್ರಿಕಮಯವಾಗಿರುವಾಗ ಈ ಬಳಪದ ಕಲ್ಲಿನ ಪಾತ್ರೆಗಳನ್ನು ಮಾತ್ರ ಯಾವುದೇ ಯಾಂತ್ರಗಳನ್ನು ಬಳಸದೆ ಕೈಯಿಂದಲೇ ತಯಾರಿಸಲಾಗುತ್ತದೆ.

ಪ್ರತಿ ಪಾತ್ರೆ ತಯಾರಿಸಲು ಒಂದೂವರೆ ಗಂಟೆ
ಪ್ರತೀ ಪಾತ್ರೆಗಳನ್ನು ರೂಪುಗೊಳಿಸಲು ಅರ್ಧ ಗಂಟೆಯಿಂದ ಒಂದೂವರೆ ಗಂಟೆಯವರೆಗೂ ಸಮಯ ತಗುಲುತ್ತದೆ. ಪ್ರಸ್ತುತ ದರ 200 ರಿಂದ 400 ರೂಪಾಯಿಗಳವರೆಗೆ ಈ ಪಾತ್ರೆಗಳನ್ನು ಮಾರಾಟ ಮಾಡಲಾಗುತ್ತದೆ.
ಬೆಳ್ತಂಗಡಿ ತಾಲೂಕಿನಲ್ಲಿ ತಯಾರಾಗುವ ಈ ಪಾತ್ರೆಗಳನ್ನು ಪುತ್ತೂರು, ಕಡಬ, ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ಮತ್ತು ಪಕ್ಕದ ಕೊಡಗು ಜಿಲ್ಲೆಯಲ್ಲೂ ಮಾರಾಟ ಮಾಡುತ್ತಾರೆ. ಅಂಗಡಿಗಳಿಗೆ ಹೋಲ್ಸೇಲ್ ದರದಲ್ಲಿ ಸರಬರಾಜು ಮಾಡಲಾಗುತ್ತದೆ. ತಿಂಗಳಿಗೆ 30 ರಿಂದ 40 ಪಾತ್ರೆಗಳು ಮಾರಾಟವಾಗುತ್ತವೆ.

ಈ ಪಾತ್ರೆಗಳ ಬೇಡಿಕೆ ಕಡಿಮೆಯಾಗಿಲ್ಲ
ಈ ವಿಶಿಷ್ಟ ಬಳಪದ ಕಲ್ಲಿನ ಪಾತ್ರೆಗಳಲ್ಲಿ ರೊಟ್ಟಿ, ನೀರುದೋಸೆ, ಗುಳಿಯಪ್ಪ, ಓಡುದೋಸೆ ಹೀಗೆ ವಿವಿಧ ತಿಂಡಿಗಳನ್ನು ತಯಾರಿಸುವ ಪಾತ್ರೆಗಳು ಲಭ್ಯವಿದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಒಲೆಗಳು ಹೆಚ್ಚಾಗಿರುವುದರಿಂದ ಗ್ಯಾಸ್ ಒಲೆ ಮತ್ತು ಸೌದೆ ಒಲೆಗಳಿಗೆ ಪ್ರತ್ಯೇಕವಾದ ಪಾತ್ರೆಗಳನ್ನೇ ತಯಾರಿಸಿ ಮಾರಲಾಗುತ್ತದೆ. ಕಾಲ ಬದಲಾದರೂ ಈ ಪಾತ್ರೆಗಳ ಬೇಡಿಕೆ ಇಂದಿಗೂ ಕಡಿಮೆಯಾಗಿಲ್ಲ.

ಯುವ ಜನರನ್ನು ಅಕರ್ಷಿಸಿದ ಪಾತ್ರೆಗಳು
ಸುಮಾರು ಹತ್ತು ವರ್ಷಗಳಿಂದ ಧರ್ಮಸ್ಥಳ ದೀಪೋತ್ಸವದಲ್ಲಿ ಇವರು ತಮ್ಮ ಮಾರಾಟ ಮಳಿಗೆಯನ್ನು ತೆರೆಯುತ್ತಿದ್ದಾರೆ. ಕೇವಲ ಮಾರಾಟ ಮಾತ್ರವಲ್ಲದೆ ಸ್ಥಳದಲ್ಲೇ ಪಾತ್ರೆಗಳನ್ನು ತಯಾರಿಸುವುದರಿಂದ ಯುವಜನರಿಗೆ ಈ ಪಾರಂಪರಿಕ ಪಾತ್ರೆಗಳ ಬಗ್ಗೆ ಸಂಪೂರ್ಣ ಮಾಹಿತಿಯು ದೊರೆತಂತಾಗುತ್ತದೆ.

ಇವರ ಕೆಲಸ ಇಂದಿಗೂ ಶ್ಲಾಘನೀಯ
ತಮ್ಮ ಪೂರ್ವಜರು ಪ್ರಾರಂಭ ಮಾಡಿದ ಈ ವಿಶಿಷ್ಟ ಕಾಯವನ್ನು ಮುಹಮ್ಮದ್ ಮತ್ತು ಅವರ ತಂಡವರಾದ ಸಂದೀಪ್, ರಾಘವೇಂದ್ರ, ಬಶೀರ್ ಮತ್ತು ಸತೀಶ್ ಇಂದಿಗೂ ಉಳಿಸಿಕೊಂಡು ಬಂದಿದ್ದಾರೆ. ಆಧುನಿಕತೆಯ ಭರಾಟೆಯಲ್ಲಿ ಸಂಪ್ರದಾಯಗಳು ನಾಶವಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಪ್ರಾಚೀನ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಇವರ ಕೆಲಸ ಮಾತ್ರ ನಿಜಕ್ಕೂ ಶ್ಲಾಘನೀಯ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications