ಇದು ಶಾಲೆಯಲ್ಲ, ಟ್ಯೂಷನ್ ಸಹ ಅಲ್ಲ: ಮಂಗಳಗಟ್ಟಿ ಗ್ರಾಮದಲ್ಲಿ ವಿಶಿಷ್ಟ ಮನೆಪಾಠ
ಧಾರವಾಡ, ಜು. 2: ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮ ಅಲ್ಲಿನ ವಿಶಿಷ್ಟ ಕಾರ್ಯಗಳು ಗ್ರಾಮದ ಅಭ್ಯುದಯಕ್ಕೆ ಕಾರಣವಾಗುತ್ತಿದೆ. ಮಂಗಳಗಟ್ಟಿ ಗ್ರಾಮದಲ್ಲಿ ಪ್ರತಿನಿತ್ಯ 200ಕ್ಕೂ ಅಧಿಕ ಮಕ್ಕಳು ಸ್ವಯಂಪ್ರೇರಿತರಾಗಿ ಸೇವಾ ಭಾರತಿ ಟ್ರಸ್ಟ್, ಜನನಿ ಪ್ರತಿಷ್ಠಾನ ಹಾಗೂ ಗ್ರಾಮವಿಕಾಸ ಸಹಯೋಗದಲ್ಲಿ ನಡೆಯುವ ಮನೆಪಾಠಗಳಲ್ಲಿ ತಪ್ಪದೇ ಪಾಲ್ಗೊಳ್ಳುತ್ತಾರೆ. ಶಾಲೆಯೂ ಅಲ್ಲ, ಟ್ಯೂಷನ್ ಸಹ ಅಲ್ಲ. ಆದರೂ ಮಕ್ಕಳು ಪ್ರತಿನಿತ್ಯ ಪುಸ್ತಕ ಹಿಡಿದು ಕಲಿಯಲು ಬರುತ್ತಾರೆ. ಸೃಜನಶೀಲ ಚಟುವಟಿಕೆಗಳಲ್ಲಿ ತಲ್ಲೀನರಾಗುತ್ತಾರೆ.
ಈ ಮನೆಪಾಠಗಳ ಕುರಿತು ಮಾತು ಹಂಚಿಕೊಂಡ ಗ್ರಾಮವಿಕಾಸದ ಕಾರ್ಯಕರ್ತ ಚಂದ್ರಗೌಡ ಪಾಟೀಲ, "ಕಳೆದ ಒಂಬತ್ತು ತಿಂಗಳಿನಿಂದ ಮಂಗಳಗಟ್ಟಿಯಲ್ಲಿ ಮನೆಪಾಠಗಳು ನಡೆಯುತ್ತಿವೆ. ಆರಂಭದಲ್ಲಿ ಕೇವಲ 20 ವಿದ್ಯಾರ್ಥಿಗಳು ಬರುತ್ತಿದ್ದರು. ಈಗ 220 ವಿದ್ಯಾರ್ಥಿಗಳು ಪ್ರತಿನಿತ್ಯ ಮನೆಪಾಠಕ್ಕೆ ಸ್ವಯಂಪ್ರೇರಿತರಾಗಿ ಬರುತ್ತಾರೆ. ವಿದ್ಯಾರ್ಥಿಗಳು ಹೆಚ್ಚಾದಂತೆ ಈಗ 4 ಮನೆಪಾಠ ಕೇಂದ್ರಗಳು ನಡೆಯುತ್ತಿದ್ದು, 8 ಜನ ಬೋಧಕರು ಜೊತೆಗೆ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆರಂಭದಲ್ಲಿ ಗ್ರಾಮಸ್ಥರಿಂದ ನಿರೀಕ್ಷಿತ ಸ್ಪಂದನೆ ದೊರೆತಿರಲಿಲ್ಲ. ಕ್ರಮೇಣ ಮನೆಪಾಠಗಳ ಕಾರ್ಯಚಟುವಟಿಕೆಗಳ ಮೂಲಕ ಮಕ್ಕಳಲ್ಲಾದ ಬದಲಾವಣೆ ಕಂಡು ಅನೇಕ ಪೋಷಕರು ತಮ್ಮ ಮಕ್ಕಳನ್ನು ಮನೆಪಾಠಗಳಿಗೆ ಸೇರಿಸುತ್ತಿದ್ದಾರೆ.
ಪಠ್ಯ ವಿಷಯದ ಜೊತೆಗೆ ಮಕ್ಕಳಿಗೆ ಮುಖ್ಯವಾಗಿ ಸಾಮಾನ್ಯ ಜ್ಞಾನ
ಪ್ರತಿನಿತ್ಯ ಸಂಜೆ ಒಂದುವರೆ ಗಂಟೆಗಳ ಕಾಲ ಗ್ರಾಮದ ಸಮುದಾಯ ಭವನ, ದೇವಸ್ಥಾನ, ಅಂಗನವಾಡಿ ಕೇಂದ್ರಗಳಲ್ಲಿ ಮನೆಪಾಠಗಳು ನಡೆಯುತ್ತಿವೆ. ತರಗತಿಯನುಸಾರ ವಿದ್ಯಾರ್ಥಿಗಳನ್ನು ವಿವಿಧ ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ಪಿಯುಸಿ, ಡಿಗ್ರಿ ಓದಿದ ಯುವಕ, ಯುವತಿಯರು ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಪಠ್ಯ ವಿಷಯದ ಜೊತೆಗೆ ಮಕ್ಕಳಿಗೆ ಮುಖ್ಯವಾಗಿ ಸಾಮಾನ್ಯ ಜ್ಞಾನ, ಹಾಡು, ಅಮೃತ ವಚನ, ಶ್ಲೋಕ, ಏಕಾಗ್ರತೆ ಹೆಚ್ಚಿಸುವ ಆಟ, ಕರಕುಶಲ ಚಟುವಟಿಕೆಗಳನ್ನು ಮಕ್ಕಳಿಗೆ ಕಲಿಸಲಾಗುತ್ತಿದೆ. ಪ್ರತಿವಾರ ಯೋಗ, ಗ್ರಾಮ ಸ್ವಚ್ಛತಾ ಕಾರ್ಯ, ಬೆಳದಿಂಗಳ ಊಟ ಮುಂತಾದ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಅನ್ಯೋನ್ಯತೆ, ಸೇವಾ ಮನೋಭಾವ ಬೆಳೆಸುತ್ತಿದ್ದೇವೆ.

ಉತ್ತಮ ಸಂಸ್ಕಾರಯುತ ಶಿಕ್ಷಣ
ಉತ್ತಮ ನಡೆವಳಿಕೆ ಮುಂತಾದ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತಿದೆ. ಇದರಿಂದ ಪ್ರೇರಿತರಾದ ಗ್ರಾಮದ ಯುವಕರು ಸಹ ತಮ್ಮ ಹುಟ್ಟಿದ ಹಬ್ಬದಂದು ದುಂದು ವೆಚ್ಚ ಮಾಡದೆ, ಅದೇ ಹಣದಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ಕೊಡಿಸುತ್ತಿದ್ದಾರೆ. 30 ಯುವಕರ ಗುಂಪು ಮನೆಪಾಠಗಳ ಏಳಿಗೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸುತ್ತಿದೆ. ಮನೆಪಾಠದಿಂದ ಮಕ್ಕಳಲ್ಲಿ ದುಶ್ಚಟ, ಸಮಯ ವ್ಯರ್ಥ ಮುಂತಾದ ದುರ್ಗುಣಗಳು ಕ್ಷೀಣಿಸಿವೆ. ಪ್ರತಿನಿತ್ಯ ತಂದೆ-ತಾಯಿಗೆ, ಗುರು-ಹಿರಿಯರಿಗೆ ನಮಸ್ಕರಿಸುವುದು ಕಲಿಕೆ ಮಕ್ಕಳಿಗಾದರೂ ಅದರ ಪ್ರಭಾವ ಊರಿನ ಜನರಿಗೆ ತಟ್ಟಿದೆ. ಮಕ್ಕಳ ಸದ್ಗುಣ, ಉತ್ತಮ ನಡೆವಳಿಕೆ ಕಂಡ ಗ್ರಾಮದ ಅನೇಕರು ಕುಡಿತ, ಧೂಮಪಾನ ಮುಂತಾದ ದುಶ್ಚಟ ತ್ಯಜಿಸಿರುವುದು ಪ್ರಶಂಸನಾರ್ಹವಾಗಿದೆ. ಮನೆಪಾಠಗಳಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ, ಸರ್ವತೋಮುಖ ಬೆಳವಣಿಗೆಗೆ ಪೂರಕ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಸಜ್ಜನರನ್ನಾಗಿ ರೂಪಿಸಲಾಗುತ್ತಿದೆ. ಮಂಗಳಗಟ್ಟಿಯ ಮಾದರಿ ಕಾರ್ಯ ಎಲ್ಲಡೆ ವ್ಯಾಪಿಸಲಿ ಎಂಬುದೇ ಆಶಯ.

ಗ್ರಂಥಾಲಯದಲ್ಲಿ 2500ಕ್ಕೂ ಪುಸ್ತಕಗಳು
ಗ್ರಾಮವಿಕಾಸದಿಂದ ಮಂಗಳಗಟ್ಟಿಯಲ್ಲಿ ಸ್ವಾಮಿ ವಿವೇಕಾನಂದ ಗ್ರಂಥಾಲಯ ನಡೆಯುತ್ತಿದೆ. ಸರ್ಧಾತ್ಮಕ ಪರೀಕ್ಷೆ ತಯಾರಿ ಪುಸ್ತಕ, ಸಾಹಿತ್ಯ, ಧಾರ್ಮಿಕ ಪುಸ್ತಕಗಳು ಸೇರಿದಂತೆ 2500ಕ್ಕೂ ಪುಸ್ತಕಗಳು ಇಲ್ಲಿವೆ. ಸಣ್ಣ ಹುಡುಗರಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುತ್ತಿರುವುದು ಉಲ್ಲೇಖನಿಯ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications