ಕಸದ ತೊಟ್ಟಿಯಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಡೈಮಂಡ್ ನೆಕ್ಲೇಸ್ ಪತ್ತೆ
ಚೆನೈ, ಜುಲೈ 22: ಸ್ವಚ್ಛತಾ ಸಿಬ್ಬಂದಿ ಕಸದಲ್ಲಿ ಸಿಕ್ಕ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಜ್ರದ ಹಾರವನ್ನು ವಾರಸುದಾರರಿಗೆ ವಾಪಸ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗುತ್ತಿದ್ದು, ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಚೆನ್ನೈನಲ್ಲಿ ಈ ಘಟನೆ ನಡೆದಿದ್ದು, ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆ ಹಾಗೂ ತೀವ್ರ ಶೋಧದ ಫಲವಾಗಿ ₹5 ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್ ಅದರ ಮಾಲೀಕರಿಗೆ ಮರಳಿದೆ.

ಚೆನ್ನೈನ ವಿರುಗಂಪಕ್ಕಂ ನಿವಾಸಿ ದೇವರಾಜ್ ಎನ್ನುವವರು ತಮ್ಮ ಸಂಬಂಧಿಯೊಬ್ಬರಿಗೆ ಗಿಫ್ಟ್ ನೀಡಲು ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್ಅನ್ನು ಖರೀದಿಸಿದ್ದರು. ಆದರೆ ಮನೆಯಲ್ಲಿ ತಿಳಿದೇ ಆಕಸ್ಮಿಕವಾಗಿ ಕಸದೊಂದಿಗೆ ವಜ್ರದ ನೆಕ್ಲೇಸ್ ಅನ್ನು ಕೂಡಾ ತೊಟ್ಟಿಗೆ ಎಸೆದಿದ್ದಾರೆ. ಮೊದಲು ಈ ವಿಚಾರ ತಿಳಿದಿರಲಿಲ್ಲ. ಬಳಿಕ ದೇವರಾಜ್ಗೆ ಕಸದೊಂದಿಗೆ ನೆಕ್ಲೇಸ್ ಕೂಡಾ ಹೋಗಿದೆ ಎಂದು ತಿಳಿದು ಬಂದಿದೆ.
ಲಕ್ಷಾಂತರ ರೂಪಾಯಿ ಬೆಲೆಬಾಳುವ ಆಭರಣವನ್ನು ಕಳೆದುಕೊಂಡ ಅವರು, ಕೂಡಲೇ ಕೂಡಲೇ ಗ್ರೇಟರ್ ಚೆನ್ನೈ ಕಾರ್ಪೋರೇಷನ್ (ಜಿಸಿಸಿ) ಅಧಿಕಾರಿಗಳನ್ನು ಸಂಪರ್ಕಿಸಿ ಡೈಮಂಡ್ ನೆಕ್ಲೇಸ್ ಕಳೆದುಕೊಂಡ ವಿಚಾರವನ್ನು ವಿವರಿಸಿದ್ದಾರೆ. ದೇವರಾಜ್ ಅವರ ಮನವಿಗೆ ಸ್ಪಂದಿಸಿದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ (ಜಿಸಿಸಿ) ಜಿಸಿಸಿ ಗುತ್ತಿಗೆದಾರರ ಚಾಲಕ ಜೆ. ಆಂಥೋನಿಸಾಮಿ ಸ್ವಚ್ಛತಾ ಸಿಬ್ಬಂದಿಗಳ ಗಮನಕ್ಕೆ ತಂದಿದ್ದು, ಹುಡುಕುವಂತೆ ಸೂಚಿಸಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸ್ವಚ್ಛತಾ ಸಿಬ್ಬಂದಿ ಸತತ ಹುಡುಕಾಟದ ಬಳಿಕ ಕೊನೆಯಲ್ಲಿ ಸ್ವಚ್ಛತಾ ಸಿಬ್ಬಂದಿಯೋರ್ವರಿಗೆ ಕಸದಿಂದ ಹುದುಕಿಹೋಗಿದ್ದ ಈ ಹಾರ ಸಿಕ್ಕಿದೆ. ಕೂಡಲೇ ಅವರು ಅದನ್ನು ಸ್ವಚ್ಛಗೊಳಿಸಿ ದೇವರಾಜ್ ಅವರಿಗೆ ಹಿಂದಿರುಸಿದ್ದಾರೆ. ₹5 ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್ ಮತ್ತೆ ಸಿಗಲು ಸಹಾಯ ಮಾಡಿದ ಆಂಥೋನಿಸಾಮಿ ಮತ್ತು ಸ್ವಚ್ಛತಾ ಸಿಬ್ಬಂದಿಗೆ ದೇವರಾಜ್ ಹಾಗೂ ಕುಟುಂಬಸ್ಥರು ಧನ್ಯವಾದ ಸಲ್ಲಿಸಿದ್ದಾರೆ.
ಈ ಘಟನೆಯ ವಿಡಿಯೋವನ್ನು ಗ್ರೇಟರ್ ಚೆನ್ನೈ ಕಾರ್ಪೋರೇಷನ್ (ಜಿಸಿಸಿ) ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಪ್ರಾಮಾಣಿಕತೆ ಬಡವರಲ್ಲಿ ಮಾತ್ರ ಇರುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications