ಕಸದ ತೊಟ್ಟಿಯಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಡೈಮಂಡ್ ನೆಕ್ಲೇಸ್ ಪತ್ತೆ
ಚೆನೈ, ಜುಲೈ 22: ಸ್ವಚ್ಛತಾ ಸಿಬ್ಬಂದಿ ಕಸದಲ್ಲಿ ಸಿಕ್ಕ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಜ್ರದ ಹಾರವನ್ನು ವಾರಸುದಾರರಿಗೆ ವಾಪಸ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗುತ್ತಿದ್ದು, ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಚೆನ್ನೈನಲ್ಲಿ ಈ ಘಟನೆ ನಡೆದಿದ್ದು, ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆ ಹಾಗೂ ತೀವ್ರ ಶೋಧದ ಫಲವಾಗಿ ₹5 ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್ ಅದರ ಮಾಲೀಕರಿಗೆ ಮರಳಿದೆ.

ಚೆನ್ನೈನ ವಿರುಗಂಪಕ್ಕಂ ನಿವಾಸಿ ದೇವರಾಜ್ ಎನ್ನುವವರು ತಮ್ಮ ಸಂಬಂಧಿಯೊಬ್ಬರಿಗೆ ಗಿಫ್ಟ್ ನೀಡಲು ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್ಅನ್ನು ಖರೀದಿಸಿದ್ದರು. ಆದರೆ ಮನೆಯಲ್ಲಿ ತಿಳಿದೇ ಆಕಸ್ಮಿಕವಾಗಿ ಕಸದೊಂದಿಗೆ ವಜ್ರದ ನೆಕ್ಲೇಸ್ ಅನ್ನು ಕೂಡಾ ತೊಟ್ಟಿಗೆ ಎಸೆದಿದ್ದಾರೆ. ಮೊದಲು ಈ ವಿಚಾರ ತಿಳಿದಿರಲಿಲ್ಲ. ಬಳಿಕ ದೇವರಾಜ್ಗೆ ಕಸದೊಂದಿಗೆ ನೆಕ್ಲೇಸ್ ಕೂಡಾ ಹೋಗಿದೆ ಎಂದು ತಿಳಿದು ಬಂದಿದೆ.
ಲಕ್ಷಾಂತರ ರೂಪಾಯಿ ಬೆಲೆಬಾಳುವ ಆಭರಣವನ್ನು ಕಳೆದುಕೊಂಡ ಅವರು, ಕೂಡಲೇ ಕೂಡಲೇ ಗ್ರೇಟರ್ ಚೆನ್ನೈ ಕಾರ್ಪೋರೇಷನ್ (ಜಿಸಿಸಿ) ಅಧಿಕಾರಿಗಳನ್ನು ಸಂಪರ್ಕಿಸಿ ಡೈಮಂಡ್ ನೆಕ್ಲೇಸ್ ಕಳೆದುಕೊಂಡ ವಿಚಾರವನ್ನು ವಿವರಿಸಿದ್ದಾರೆ. ದೇವರಾಜ್ ಅವರ ಮನವಿಗೆ ಸ್ಪಂದಿಸಿದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ (ಜಿಸಿಸಿ) ಜಿಸಿಸಿ ಗುತ್ತಿಗೆದಾರರ ಚಾಲಕ ಜೆ. ಆಂಥೋನಿಸಾಮಿ ಸ್ವಚ್ಛತಾ ಸಿಬ್ಬಂದಿಗಳ ಗಮನಕ್ಕೆ ತಂದಿದ್ದು, ಹುಡುಕುವಂತೆ ಸೂಚಿಸಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸ್ವಚ್ಛತಾ ಸಿಬ್ಬಂದಿ ಸತತ ಹುಡುಕಾಟದ ಬಳಿಕ ಕೊನೆಯಲ್ಲಿ ಸ್ವಚ್ಛತಾ ಸಿಬ್ಬಂದಿಯೋರ್ವರಿಗೆ ಕಸದಿಂದ ಹುದುಕಿಹೋಗಿದ್ದ ಈ ಹಾರ ಸಿಕ್ಕಿದೆ. ಕೂಡಲೇ ಅವರು ಅದನ್ನು ಸ್ವಚ್ಛಗೊಳಿಸಿ ದೇವರಾಜ್ ಅವರಿಗೆ ಹಿಂದಿರುಸಿದ್ದಾರೆ. ₹5 ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್ ಮತ್ತೆ ಸಿಗಲು ಸಹಾಯ ಮಾಡಿದ ಆಂಥೋನಿಸಾಮಿ ಮತ್ತು ಸ್ವಚ್ಛತಾ ಸಿಬ್ಬಂದಿಗೆ ದೇವರಾಜ್ ಹಾಗೂ ಕುಟುಂಬಸ್ಥರು ಧನ್ಯವಾದ ಸಲ್ಲಿಸಿದ್ದಾರೆ.
ಈ ಘಟನೆಯ ವಿಡಿಯೋವನ್ನು ಗ್ರೇಟರ್ ಚೆನ್ನೈ ಕಾರ್ಪೋರೇಷನ್ (ಜಿಸಿಸಿ) ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಪ್ರಾಮಾಣಿಕತೆ ಬಡವರಲ್ಲಿ ಮಾತ್ರ ಇರುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications