Spandana Vijay Raghavendra: ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಯಾರ ಮಗಳು ಗೊತ್ತೇ?, ಇಲ್ಲಿದೆ ವಿವರ
ಬೆಂಗಳೂರು, ಆಗಸ್ಟ್, 07: ಸ್ಯಾಂಡಲ್ವುಡ್ನಲ್ಲಿ ಚಿನ್ನಾರಿ ಮುತ್ತ ಅಂತಲೇ ಪ್ರಸಿದ್ಧಿಯಾಗಿರುವ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಹೃದಯಾಘಾತದಿಂದ ನಿಧನರಾಗಿದ್ದು, ಇದರಿಂದ ಸ್ಯಾಂಡಲ್ವುಡ್ಗೆ ಅಘಾತವಾದಂತಾಗಿದೆ. ಹಾಗಾದರೆ ಸ್ಪಂದನಾ ಅವರು ಯಾರ ಮಗಳು, ಹಿನ್ನೆಲೆ ಏನು ಅನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯಿರಿ
2004ರಲ್ಲಿ ವಿಜಯ ರಾಘವೇಂದ್ರ-ಸ್ಪಂದನಾ ಭೇಟಿಯಾಗಿದ್ದು. ನಂತರ ಅದರಲ್ಲೂ ಹೆಚ್ಚಾಗಿ ಮಲ್ಲೇಶ್ವರ ಕಾಫಿಡೇಯಲ್ಲಿ ಇಬ್ಬರು ಭೇಟಿಯಾಗುತ್ತಿದ್ದರು. ಕೊನೆಗೆ ಆಗಸ್ಟ್ 26, 2007ರಂದು ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅಷ್ಟಕ್ಕೂ ಸ್ಪಂದನಾ ಯಾರ ಮಗಳು ಎನ್ನುವ ವಿವರವನ್ನು ಇಲ್ಲಿದೆ.

ಬಿ.ಕೆ.ಶಿವರಾಮ್ ಪುತ್ರಿ ಸ್ಪಂದನಾ
ನಿವೃತ್ತ ಐಪಿಎಸ್ ಅಧಿಕಾರಿ ಬಿ.ಕೆ.ಶಿವರಾಮ್ ಅವರ ಪುತ್ರಿ ಸ್ಪಂದನಾ ಹಾಗೂ ವಿಜಯ ರಾಘವೇಂದ್ರ ಆಗಸ್ಟ್ 26, 2007ರಂದು ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಈ ದಂಪತಿಗೆ ಶೌರ್ಯ ಎಂಬ ಮುಗ್ದ ಮಗನಿದ್ದಾನೆ. ಇನ್ನು ವಿಜಯ್ ರಾಘವೇಂದ್ರ ಅವರು ಸ್ಪಂದನಾ ಅವರನ್ನು ತುಂಬಾ ಪ್ರೀತಿಸುತ್ತಿದ್ದರು.
ಅಪೂರ್ವ ಸಿನಿಮಾದಲ್ಲಿ ನಟನೆ
ಬಿಗ್ ಬಾಸ್ ಸ್ಪರ್ಧಿಯಾದ ವೇಳೆಯಲ್ಲಿ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಫೋಟೋವನ್ನು ಹಿಡಿದು ಮಾತನಾಡುತ್ತಲೇ ದುಃಖಿತರಾಗಿದ್ದ ದೃಶ್ಯವಂತೂ ಇನ್ನು ಕಣ್ಣಮುಂದೆ ಕಟ್ಟಿದ ಹಾಗೆ ಇದೆ. ಇವರಿಬ್ಬರ ನಡುವೆ ಎಷ್ಟಿತ್ತು ಪ್ರೀತಿ ಅಂತಾ ಇದರಲ್ಲೇ ಕಾಣಬಹುದಾಗಿದೆ. ಅಲ್ಲದೆ ಸ್ಪಂದನಾ ಸ್ಯಾಂಡಲ್ವುಡ್ನಲ್ಲಿ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದು, ಬಳಿಕ ರವಿಚಂದ್ರನ್ ಜೊತೆ "ಅಪೂರ್ವ" ಸಿನಿಮಾದಲ್ಲಿಯೂ ನಟನೆಯನ್ನೂ ಮಾಡಿದ್ದಾರೆ.
ಬೆಳ್ತಂಗಡಿಯಲ್ಲಿ ಸೋದರನ ಪರ ಪ್ರಚಾರ
ಬಿ.ಕೆ ಶಿವರಾಮ್ ಅವರ ಪುತ್ರಿಯಾದ ಸ್ಪಂದನಾ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿಗಳಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ನ ಹಿರಿಯ ಮುಖಂಡ, ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಸ್ಪಂದನಾ ಅವರ ದೊಡ್ಡಪ್ಪ ಆಗಿದ್ದು, ಇನ್ನು ಸೋದರ ರಕ್ಷಿತ್ ಶಿವರಾಂ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಅಲ್ಲದೆ ವಿಧಾಸಭೆ ಚುನಾವಣೆ ವೇಳೆ ಸೋದರನ ಪರವಾಗಿ ಬೆಳ್ತಂಗಡಿ ಕ್ಷೇತ್ರದ ಪ್ರತೀ ಗ್ರಾಮಗಳಿಗೂ ತೆರಳಿ ಸ್ಪಂದನಾ ಹಾಗೂ ವಿಜಯ ರಾಘವೇಂದ್ರ ಚುನಾವಣಾ ಪ್ರಚಾರ ಕೈಗೊಂಡಿದ್ದರು.
ಪಾರ್ಥಿವ ಶರೀರ ನಾಳೆ ಬೆಂಗಳೂರಿಗೆ
ಇನ್ನು ಆಗಸ್ಟ್ 26ರಂದು ವಿಜಯ ರಾಘವೇಂದ್ರ ಮತ್ತು ಸ್ಪಂದನಾ 16ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು. ಆದರೆ ಅದಕ್ಕೂ ಮುನ್ನ ಬ್ಯಾಂಕಾಕ್ ಪ್ರವಾಸದ ವೇಳೆ ಸ್ಪಂದನಾ ನಿಧನರಾಗಿದ್ದು, ಇದು ಸ್ಯಾಂಡಲ್ವುಡ್ಗೆ ದೊಡ್ಡ ಆಘಾತವಾದಂತಾಗಿದೆ. ಹೀಗೆ ನಟ ನಟ ಪುನೀತ್ ರಾಜ್ಕುಮಾರ್ ಅಗಲಿಕೆ ನೋವಿನಿಂದ ಹೊರಬರುವ ಮುನ್ನವೇ ಸ್ಯಾಂಡಲ್ವುಡ್ಗೆ ಮತ್ತೊಂದು ಆಘಾತ ಉಂಟಾಗಿದೆ.
ಈ ವಿಷಯ ತಿಳಿದ ಕೂಡಲೇ ಸ್ಪಂದನಾ ಬಿ.ಕೆ ಶಿವರಾಮ್ ತಂದೆ ಮತ್ತು ವಿಜಯ ರಾಘವೇಂದ್ರ ಶ್ರೀಮುರಳಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬ್ಯಾಂಕಾಕ್ಗೆ ತೆರಳಿದ್ದು, ನಾಳೆ ಬ್ಯಾಂಕಾಂಕ್ನಿಂದ ಬೆಂಗಳೂರಿಗೆ ಸ್ಪಂದನಾ ಮೃತದೇಹವನ್ನು ತರಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications