Spandana Vijay Raghavendra: ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಯಾರ ಮಗಳು ಗೊತ್ತೇ?, ಇಲ್ಲಿದೆ ವಿವರ
ಬೆಂಗಳೂರು, ಆಗಸ್ಟ್, 07: ಸ್ಯಾಂಡಲ್ವುಡ್ನಲ್ಲಿ ಚಿನ್ನಾರಿ ಮುತ್ತ ಅಂತಲೇ ಪ್ರಸಿದ್ಧಿಯಾಗಿರುವ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಹೃದಯಾಘಾತದಿಂದ ನಿಧನರಾಗಿದ್ದು, ಇದರಿಂದ ಸ್ಯಾಂಡಲ್ವುಡ್ಗೆ ಅಘಾತವಾದಂತಾಗಿದೆ. ಹಾಗಾದರೆ ಸ್ಪಂದನಾ ಅವರು ಯಾರ ಮಗಳು, ಹಿನ್ನೆಲೆ ಏನು ಅನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯಿರಿ
2004ರಲ್ಲಿ ವಿಜಯ ರಾಘವೇಂದ್ರ-ಸ್ಪಂದನಾ ಭೇಟಿಯಾಗಿದ್ದು. ನಂತರ ಅದರಲ್ಲೂ ಹೆಚ್ಚಾಗಿ ಮಲ್ಲೇಶ್ವರ ಕಾಫಿಡೇಯಲ್ಲಿ ಇಬ್ಬರು ಭೇಟಿಯಾಗುತ್ತಿದ್ದರು. ಕೊನೆಗೆ ಆಗಸ್ಟ್ 26, 2007ರಂದು ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅಷ್ಟಕ್ಕೂ ಸ್ಪಂದನಾ ಯಾರ ಮಗಳು ಎನ್ನುವ ವಿವರವನ್ನು ಇಲ್ಲಿದೆ.

ಬಿ.ಕೆ.ಶಿವರಾಮ್ ಪುತ್ರಿ ಸ್ಪಂದನಾ
ನಿವೃತ್ತ ಐಪಿಎಸ್ ಅಧಿಕಾರಿ ಬಿ.ಕೆ.ಶಿವರಾಮ್ ಅವರ ಪುತ್ರಿ ಸ್ಪಂದನಾ ಹಾಗೂ ವಿಜಯ ರಾಘವೇಂದ್ರ ಆಗಸ್ಟ್ 26, 2007ರಂದು ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಈ ದಂಪತಿಗೆ ಶೌರ್ಯ ಎಂಬ ಮುಗ್ದ ಮಗನಿದ್ದಾನೆ. ಇನ್ನು ವಿಜಯ್ ರಾಘವೇಂದ್ರ ಅವರು ಸ್ಪಂದನಾ ಅವರನ್ನು ತುಂಬಾ ಪ್ರೀತಿಸುತ್ತಿದ್ದರು.
ಅಪೂರ್ವ ಸಿನಿಮಾದಲ್ಲಿ ನಟನೆ
ಬಿಗ್ ಬಾಸ್ ಸ್ಪರ್ಧಿಯಾದ ವೇಳೆಯಲ್ಲಿ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಫೋಟೋವನ್ನು ಹಿಡಿದು ಮಾತನಾಡುತ್ತಲೇ ದುಃಖಿತರಾಗಿದ್ದ ದೃಶ್ಯವಂತೂ ಇನ್ನು ಕಣ್ಣಮುಂದೆ ಕಟ್ಟಿದ ಹಾಗೆ ಇದೆ. ಇವರಿಬ್ಬರ ನಡುವೆ ಎಷ್ಟಿತ್ತು ಪ್ರೀತಿ ಅಂತಾ ಇದರಲ್ಲೇ ಕಾಣಬಹುದಾಗಿದೆ. ಅಲ್ಲದೆ ಸ್ಪಂದನಾ ಸ್ಯಾಂಡಲ್ವುಡ್ನಲ್ಲಿ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದು, ಬಳಿಕ ರವಿಚಂದ್ರನ್ ಜೊತೆ "ಅಪೂರ್ವ" ಸಿನಿಮಾದಲ್ಲಿಯೂ ನಟನೆಯನ್ನೂ ಮಾಡಿದ್ದಾರೆ.
ಬೆಳ್ತಂಗಡಿಯಲ್ಲಿ ಸೋದರನ ಪರ ಪ್ರಚಾರ
ಬಿ.ಕೆ ಶಿವರಾಮ್ ಅವರ ಪುತ್ರಿಯಾದ ಸ್ಪಂದನಾ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಿವಾಸಿಗಳಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ನ ಹಿರಿಯ ಮುಖಂಡ, ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಸ್ಪಂದನಾ ಅವರ ದೊಡ್ಡಪ್ಪ ಆಗಿದ್ದು, ಇನ್ನು ಸೋದರ ರಕ್ಷಿತ್ ಶಿವರಾಂ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಅಲ್ಲದೆ ವಿಧಾಸಭೆ ಚುನಾವಣೆ ವೇಳೆ ಸೋದರನ ಪರವಾಗಿ ಬೆಳ್ತಂಗಡಿ ಕ್ಷೇತ್ರದ ಪ್ರತೀ ಗ್ರಾಮಗಳಿಗೂ ತೆರಳಿ ಸ್ಪಂದನಾ ಹಾಗೂ ವಿಜಯ ರಾಘವೇಂದ್ರ ಚುನಾವಣಾ ಪ್ರಚಾರ ಕೈಗೊಂಡಿದ್ದರು.
ಪಾರ್ಥಿವ ಶರೀರ ನಾಳೆ ಬೆಂಗಳೂರಿಗೆ
ಇನ್ನು ಆಗಸ್ಟ್ 26ರಂದು ವಿಜಯ ರಾಘವೇಂದ್ರ ಮತ್ತು ಸ್ಪಂದನಾ 16ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು. ಆದರೆ ಅದಕ್ಕೂ ಮುನ್ನ ಬ್ಯಾಂಕಾಕ್ ಪ್ರವಾಸದ ವೇಳೆ ಸ್ಪಂದನಾ ನಿಧನರಾಗಿದ್ದು, ಇದು ಸ್ಯಾಂಡಲ್ವುಡ್ಗೆ ದೊಡ್ಡ ಆಘಾತವಾದಂತಾಗಿದೆ. ಹೀಗೆ ನಟ ನಟ ಪುನೀತ್ ರಾಜ್ಕುಮಾರ್ ಅಗಲಿಕೆ ನೋವಿನಿಂದ ಹೊರಬರುವ ಮುನ್ನವೇ ಸ್ಯಾಂಡಲ್ವುಡ್ಗೆ ಮತ್ತೊಂದು ಆಘಾತ ಉಂಟಾಗಿದೆ.
ಈ ವಿಷಯ ತಿಳಿದ ಕೂಡಲೇ ಸ್ಪಂದನಾ ಬಿ.ಕೆ ಶಿವರಾಮ್ ತಂದೆ ಮತ್ತು ವಿಜಯ ರಾಘವೇಂದ್ರ ಶ್ರೀಮುರಳಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬ್ಯಾಂಕಾಕ್ಗೆ ತೆರಳಿದ್ದು, ನಾಳೆ ಬ್ಯಾಂಕಾಂಕ್ನಿಂದ ಬೆಂಗಳೂರಿಗೆ ಸ್ಪಂದನಾ ಮೃತದೇಹವನ್ನು ತರಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications