ಭಾರತದಲ್ಲಿ ಇನ್ಮುಂದೆ ಎಲ್ಲಾ ಬಗೆಯ ಇ-ಸಿಗರೇಟ್ ನಿಷೇಧ
ನವದೆಹಲಿ, ಡಿಸೆಂಬರ್ 02: ನಿಕೋಟಿನ್ ಸೇವನೆ ಮೇಲೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಎಲ್ಲಾ ಬಗೆಯ ಇ-ಸಿಗರೇಟ್ ಗಳನ್ನು ಡ್ರಗ್ಸ್ ಎಂದು ಪರಿಗಣಿಸಿದ್ದು, ಸಂಪೂರ್ಣ ನಿಷೇಧ ಹೇರುವ ಮಸೂದೆ ಮಂಡನೆಯಾಗಿದ್ದು, ಸಂಸತ್ತಿನ ಮೇಲ್ಮನೆಯಲ್ಲಿ ಸಮ್ಮತಿ ಸಿಕ್ಕಿದೆ.
ಇ-ಸಿಗರೇಟು ಉತ್ಪಾದನೆ, ಆಮದು/ರಫ್ತು, ಮಾರಾಟ, ಶೇಖರಣೆ, ಜಾಹೀರಾತು ನೀಡಿಕೆ, ಬಳಕೆ ಎಲ್ಲವನ್ನು ನಿಷೇಧಿಸಲಾಗಿದೆ. ಎಲೆಕ್ಟ್ರೋನಿಕ್ ನಿಕೋಟಿನ್ ಡೆಲಿವರಿ ಸಿಸ್ಟಮ್ಸ್ (ENDS) ಮೂಲಕ ಸಿಗುವ ನಿಕೋಟಿನ್ ಸೇವನೆ ಸಾಧನಗಳನ್ನು ನಿಷೇಧಿಸುವಂತೆ ಆರೋಗ್ಯ ಇಲಾಖೆ ಈಗಾಗಲೇ ಶಿಫಾರಸು ಕಳಿಸಿತ್ತು. ಇದನ್ನು ಪರಿಗಣಿಸಿ, ಕೇಂದ್ರ ಬಜೆಟ್ ಮಂಡನೆ ವೇಳೆ ಘೋಷಣೆ ಮಾಡಬೇಕಾಗಿತ್ತು.
ಆದರೆ, ಸ್ವಲ್ಪ ತಡವಾಗಿದ್ದು, ಈಗ ಸಂಪೂರ್ಣ ನಿಷೇಧದ ಆದೇಶ ಜಾರಿಯಾಗಲಿದೆ. ಇ ಸಿಗರೇಟ್ ನಿಷೇಧ ಕಾಯ್ದೆ 2019ಗೆ ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಕಳೆದ ತಿಂಗಳು ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು.
"ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನ ಕಾಯ್ದೆಯಡಿಯಲ್ಲಿ ಕೇಂದ್ರ ಸರ್ಕಾರವು ಈ ಉತ್ಪನ್ನಗಳನ್ನು ನಿಷೇಧಿಸಲು ಸಾಧ್ಯವಿಲ್ಲ. ಮಾರಾಟದಲ್ಲಿ ನಿಯಂತ್ರಣ ಸಾಧಿಸಬಹುದು ಅಷ್ಟೇ. ಕಾನೂನಿನ ತೊಡಕಿನ ನಡುವೆ ಇ ಸಿಗರೇಟು ಮೇಲೆ ನಿಷೇಧ ಹೇರಲು ಸರ್ಕಾರ ಮುಂದಾಗಿತ್ತು. ಹೀಗಾಗಿ, ಕಾನೂನಿಗೆ ಅಗತ್ಯ ತಿದ್ದುಪಡಿ ಮಾಡಿ, ಮಸೂದೆ ಮಂಡನೆ ಮಾಡಲಾಗಿದೆ. ಇದರದಲ್ಲಿ ಯಾವುದೇ ದುರುದ್ದೇಶವಿಲ್ಲ,ತಂಬಾಕು ಸಂಪೂರ್ಣ ನಿಷೇಧವಾದರೆ ಅತ್ಯಂತ ಸಂತೋಷ ಪಡುವ ವ್ಯಕ್ತಿ ನಾನಾಗಿರುತ್ತೇನೆ" ಎಂದು ಆರೋಗ್ಯ ಸಚಿವ ಹರ್ಷ್ ವರ್ಧನ್ ಹೇಳಿದರು.

7,700ಕ್ಕೂ ಅಧಿಕ ಮಾದರಿಯಲ್ಲಿ ಲಭ್ಯ
ತಂಬಾಕು ಎಲೆಗಳನ್ನು ಸಂಪೂರ್ಣವಾಗಿ ಸುಡದೆ ಬಿಸಿ ಮುಟ್ಟಿಸಿ, ದ್ರವ ರೂಪದ ನಿಕೋಟಿನ್ ಅವಿಯನ್ನು ಸೇವಿಸುವ ಸಾಧನಗಳು ಹೆಚ್ಚು ಜನಪ್ರಿಯವಾಗಿವೆ. ಇಂಥ ಸಾಧನಗಳಿಗೆ ಯಾವುದೆ ಲೈಸನ್ಸ್ ಇಲ್ಲ, ಯುವ ಜನಾಂಗದ ದಿಕ್ಕು ತಪ್ಪಿಸಲಾಗುತ್ತಿದೆ, ಸುಮಾರು 460ಕ್ಕೂ ಅಧಿಕ ಇ ಸಿಗರೇಟು ಬ್ರ್ಯಾಂಡ್ ಗಳು ಭಾರತದಲ್ಲಿವೆ. ಸರಿ ಸುಮಾರು 7,700ಕ್ಕೂ ಅಧಿಕ ಮಾದರಿಯಲ್ಲಿ ಲಭ್ಯವಿದೆ.

ನಿಯಮ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ
ನಿಯಮ ಉಲ್ಲಂಘಿಸಿದವರಿಗೆ ಮೊದಲ ಬಾರಿಗೆ 1 ಲಕ್ಷ ರೂ. ದಂಡ, ಒಂದು ವರ್ಷ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಬಹುದು. ಎರಡನೇ ಬಾರಿಗೆ ನಿಯಮ ಉಲ್ಲಂಘಿಸಿದವರೆಗೆ 5 ಲಕ್ಷ ರೂ. ದಂಡ, 3 ವರ್ಷದವರೆಗೆ ಜೈಲುಶಿಕ್ಷೆ ಅಥವಾ ದಂಡ ಸಹಿತ ಸೆರೆಮನೆವಾಸ ವಿಧಿಸಬಹುದು.

ಕರ್ನಾಟಕದಲ್ಲಿ ಅಧಿಕ ಮಂದಿ ಬಲಿ
ಭಾರತದಲ್ಲಿ 27.4 ಕೋಟಿ ಜನರು ತಂಬಾಕನ್ನು ವಿವಿಧ ರೂಪದಲ್ಲಿ ಸೇವಿಸುತ್ತಿದ್ದಾರೆ. ತಂಬಾಕು ಸೇವನೆಯಿಂದ ಪ್ರತಿದಿನ 2700 ಮಂದಿ ಸಾವನ್ನಪ್ಪುತ್ತಿದ್ದಾರೆ. ದುರಂತ ಎಂದರೆ ಇಡೀ ರಾಷ್ಟ್ರದಲ್ಲೇ ಅತೀ ಹೆಚ್ಚು ತಂಬಾಕು ಸೇವಿಸುವ ರಾಜ್ಯ ಕರ್ನಾಟಕವಾಗಿದೆ. ನಮ್ಮ ರಾಜ್ಯದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷ ಜನರು ತಂಬಾಕಿನಿಂದ ಉಂಟಾಗುವ ವಿವಿಧ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ 35000 ಮಂದಿ ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ಕಾರಣ ಒಂದು ತಂಬಾಕು ಎಲೆಯಲ್ಲಿ ನಾಲ್ಕು ಸಾವಿರ ರಾಸಾಯನಿಕಗಳಿರುತ್ತವೆ. ಅದರಲ್ಲಿ ನಾಲ್ಕು ನೂರು ಕಾಸ್ಮೋಜೆನಿಕ್ ರಾಸಾಯಕನಿಕಗಳು ಎಂಬ ಆತಂಕಕಾರಿ ಅಂಕಿ-ಅಂಶಗಳನ್ನು ಡಾ ಚಂದ್ರಕಿರಣ್ ನೀಡಿದ್ದಾರೆ.

ಇ ಸಿಗರೇಟು ಉತ್ಪನ್ನ ಎಲ್ಲವೂ ನಿಷೇಧ
ಇ ಸಿಗರೇಟು ಉತ್ಪನ್ನಗಳನ್ನು ಡ್ರಗ್ಸ್ ಹಾಗೂ ಕಾಸ್ಮೆಟಿಕ್ಸ್ ಕಾಯ್ದೆ 1940(ಡಿಸಿಎ) ಸೆಕ್ಷನ್ 3 (ಬಿ) ಅಡಿಯಲ್ಲಿ ತರಲು ಸಾಧ್ಯವಾಗಿಲ್ಲ. ಸೆಕ್ಷನ್ 26 (ಎ) ಅಡಿಯಲ್ಲಿ ನಿಷೇಧಕ್ಕೆ ಯತ್ನಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಅದರಂತೆ ಅಗತ್ಯ ತಿದ್ದುಪಡಿ ತರಲಾಗಿದೆ. ಪಂಜಾಬ್, ಹರ್ಯಾಣ ಹಾಗೂ ಚಂಡೀಗಢದಲ್ಲಿ ಮಾತ್ರ ಇ ಸಿಗರೇಟ್, ಇ-ಶೀಶಾ, ಇ ನಿಕೋಟಿನ್, ಪರಿಮಳ ಭರಿತ ಹುಕ್ಕಾ ಎಲ್ಲದರ ಮೇಲೆ ನಿಷೇಧವಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications